Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ: ಸಿದ್ದರಾಮಯ್ಯ

Public TV
Last updated: June 17, 2021 7:29 pm
Public TV
Share
2 Min Read
siddaramaiah
SHARE

ಬೆಂಗಳೂರು: ಬಿಜೆಪಿಯ ಭಿನ್ನಮತೀಯ ಶಾಸಕನ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಂದ ಆಗ್ರಹಿಸಿದ್ದಾರೆ.

ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ ಅವರು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು. ಈ ಆರೋಪವನ್ನು ತಿಪ್ಪೆ ಸಾರಿಸುವ ಸ್ಪಷ್ಟೀಕರಣದ ಮೂಲಕ ಮುಚ್ಚಿಹಾಕುವ ಪ್ರಯತ್ನ ಮಾಡದೆ ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

aravind Bellad 2 1 medium

ಫೋನ್ ಟ್ಯಾಪಿಂಗ್ ಆಗುತ್ತಿರುವುದನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ್ ಬೆಲ್ಲದ್ ಅವರನ್ನು ಅಭಿನಂದಿಸುತ್ತೇನೆ. ಇದು ಕೇವಲ ಬೆಲ್ಲದರೊಬ್ಬರ ಫೋನ್ ಗೆ ಸಂಬಂಧಿಸಿದ್ದಾಗಿರಲಿಕ್ಕಿಲ್ಲ, ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರೆಂದು ಗುರುತಿಸಿಕೊಂಡಿರುವ ಇತರ ಶಾಸಕರು ಮಾತ್ರವಲ್ಲ ವಿರೋಧಪಕ್ಷದ ನಾಯಕರ ಫೋನ್ ಗಳ ಕದ್ದಾಲಿಕೆಯೂ ನಡೆದಿರುವ ಎಲ್ಲ ಸಾಧ್ಯತೆಗಳೂ ಇವೆ.

Aravind Bellad Letter 1 medium

ರಾಜ್ಯ ಬಿಜೆಪಿಯ ಭಿನ್ನಮತೀಯ ನಾಯಕರಿಂದ ಮುಖ್ಯಮಂತ್ರಿಗಳನ್ನು ಪದಚ್ಯುತಿಗೊಳಿಸುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹದ್ದೊಂದು ಆರೋಪ ವ್ಯಕ್ತವಾಗಿದೆ. ಅರವಿಂದ್ ಬೆಲ್ಲದ್ ಅವರು ಭಿನ್ನಮತೀಯರ ಜೊತೆ ಗುರುತಿಸಿಕೊಂಡಿರುವ ಪ್ರಮುಖ ಶಾಸಕರೂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಪದ ಗುರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಗಿರುತ್ತಾರೆ. ಬೆಲ್ಲದ್ ಅವರ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆ ನಡೆಸಿದರೂ ಅದರಿಂದ ಸತ್ಯ ಸಂಗತಿ ಖಂಡಿತ ಹೊರಬರಲಾರದು. ಆದ್ದರಿಂದ ಈ ತನಿಖೆಯನ್ನು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದಲೇ ನಡೆಸುವುದು ಸೂಕ್ತವಾಗಿದೆ. ಬೆಲ್ಲದ ಅವರು ತನ್ನ ಆರೋಪದಲ್ಲಿ ಈಗಾಗಲೇ ಜೈಲಲ್ಲಿರುವ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರ ಒಡನಾಡಿಯಾಗಿದ್ದ ಯುವರಾಜ ಸ್ವಾಮಿ ಎಂಬ ವ್ಯಕ್ತಿಯ ಹೆಸರೂ ಪ್ರಸ್ತಾಪವಾಗಿದೆ. ಈ ಬಗ್ಗೆಯೂ ತನಿಖೆಯಾಗಬೇಕಾಗಿದೆ.

Aravind Bellad Letter 3 medium

ಫೋನ್ ಗಳನ್ನು ಕದ್ದಾಲಿಸುವ ಹತಾಶ ಸ್ಥಿತಿಗೆ ಮುಖ್ಯಮಂತ್ರಿಗಳು ಇಳಿದಿರುವುದು ಪಕ್ಷದ ಶಾಸಕರ ವಿಶ್ವಾಸವನ್ನು ಅವರು ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ. ಹಣದ ಆಮಿಷವೊಡ್ಡಿ ಅಡ್ಡಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ತನ್ನ ಆಸೆ ತೀರಿಸಿಕೊಂಡ ಬಿ.ಎಸ್.ಯಡಿಯೂರಪ್ಪನವರಿಗೆ ಮುಖ್ಯಮಂತ್ರಿಯಾದಾಗಲೂ ಶಾಸಕರ ಬೆಂಬಲ ಇರಲಿಲ್ಲ, ಈಗಲೂ ಇಲ್ಲ. ಇದನ್ನೂ ಓದಿ: ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

Aravind Bellad Letter 4 medium

ಇಡೀ ರಾಜ್ಯ ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವಾಗಲೇ ಆಡಳಿತಾರೂಢ ಬಿಜೆಪಿಯ ನಾಯಕರು ಬೀದಿಬೀದಿಗಳಲ್ಲಿ ಕಚ್ಚಾಟಕ್ಕೆ ಇಳಿದಿರುವುದು ನೋಡಿದರೆ ಇವರಿಗೆ ಅಧಿಕಾರದ ಲಾಲಸೆ ಮಾತ್ರ ಇದೆ ಹೊರತು ರಾಜ್ಯದ ಜನರ ಹಿತರಕ್ಷಣೆಯ ಕಾಳಜಿ ಕಿಂಚಿತ್ತೂ ಇಲ್ಲ ಎನ್ನುವುದು ಸಾಬೀತಾಗಿದೆ. ಭಿನ್ನಮತೀಯ ಚಟುವಟಿಕೆಗಳಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಬ್ಧವಾಗಿದೆ.ಈ ಪರಿಸ್ಥಿವತಿಯನ್ನು ಘನತೆವೆತ್ತ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಈ ಜನದ್ರೋಹಿ ಸರ್ಕಾರವನ್ನು ವಜಾಮಾಡಬೇಕು ಎಂದು ಆಗ್ರಹಪಡಿಸುತ್ತೇನೆ.

ಪೋನ್ ಕದ್ದಾಲಿಕೆಯ ಆರೋಪದ ಗುರಿ @CMofKarnataka ಅವರೇ ಆಗಿರುವುದರಿಂದ ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆಯಿಂದ ತನಿಖೆ ನಡೆಸಿದರೂ ಸತ್ಯ ಸಂಗತಿ ಹೊರಬರಲಾರದು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ತನಿಖೆಯೇ ಸೂಕ್ತ.#NoTrustWithinBJP
2/7 pic.twitter.com/uf0cEV7DqN

— Siddaramaiah (@siddaramaiah) June 17, 2021

ಬೆಲ್ಲದ್ ಆರೋಪವೇನು?: ಯುವರಾಜ ಸ್ವಾಮಿ ಕಾಲ್ ಹಿಂದೆ ಷಡ್ಯಂತ್ರ ಇದೆ. ನಮ್ಮ ತಂದೆ ಚಂದ್ರಕಾಂತ್ ಬೆಲ್ಲದ್ 5 ಬಾರಿ ಶಾಸಕರಾಗಿದ್ದರು. ಕಪ್ಪು ಚುಕ್ಕಿ ಇಲ್ಲದೆ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ನಾನು ಅದೇ ಮಾರ್ಗದಲ್ಲಿ ಹೋಗುತ್ತಿದ್ದೇನೆ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತೆ. ನನ್ನ ಫೋನ್ ಕೂಡ ಟ್ಯಾಪ್ ಆಗಿದೆ. ಈ ಸಂಬಂಧ ಸ್ಪೀಕರ್ ಹಾಗೂ ಗೃಹ ಸಚಿವರಿಗೆ ಡಿಜಿಗೆ ಪತ್ರ ಕೊಟ್ಟಿದ್ದೇನೆ ಎಂದು ಹೇಳುತ್ತಾ ಬೆಲ್ಲದ್ ಅವರು ಪತ್ರವನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್-ಸ್ಪೀಕರ್, ಗೃಹ ಸಚಿವರಿಗೆ ದೂರು 

TAGGED:Arvind Belladbjpbs yeddyurappacongressiddaramaiahPhone TappingPublic TVಅರವಿಂದ್ ಬೆಲ್ಲದ್ಕಾಂಗ್ರೆಸ್ಪಬ್ಲಿಕ್ ಟಿವಿಫೋನ್ ಟ್ಯಾಪಿಂಗ್ಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
14 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
17 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
21 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

08
Belgaum

IPL Champions | ರಾಜ್ಯದೆಲ್ಲೆಡೆ ಊರ ಹಬ್ಬದಂತೆ ಆರ್‌ಸಿಬಿ ಗೆಲುವು ಸಂಭ್ರಮಿಸಿದ ಫ್ಯಾನ್ಸ್‌

Public TV
By Public TV
57 minutes ago
Vitar
Cricket

IPL Champions | ಟ್ರೋಫಿ ಗೆದ್ದ ಬೆನ್ನಲ್ಲೇ ಐಪಿಎಲ್‌ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದೇನು?

Public TV
By Public TV
1 hour ago
Virat Kohli 02
Cricket

ನನ್ನ ಹೃದಯ, ಆತ್ಮ ಬೆಂಗಳೂರಿಗಾಗಿ… ಐಪಿಎಲ್‌ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡ್ತೀನಿ – ಕೊಹ್ಲಿ ಭಾವುಕ

Public TV
By Public TV
2 hours ago
RCB Win 00
Cricket

IPL Champions | ಚುಟುಕು ಕದನದಲ್ಲಿ ಈವರೆಗೆ ಚಾಂಪಿಯನ್ಸ್‌ ಪಟ್ಟ ಗೆದ್ದವರ ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ…

Public TV
By Public TV
2 hours ago
Virat Kohli 1
Bengaluru City

ನಮ್ಮ ಬೆಂಗಳೂರು ಕಾಯುತ್ತಿದೆ… ಕಪ್‌ ಗೆದ್ದ ಸಂಭ್ರಮವನ್ನ ಅಭಿಮಾನಿಗಳೊಟ್ಟಿಗೆ ಆನಂದಿಸಬೇಕು – ಬೆಂಗ್ಳೂರು ಮರೆಯದ ಕೊಹ್ಲಿ

Public TV
By Public TV
2 hours ago
Sai sudharsan 2
Cricket

18 ಆವೃತ್ತಿಗಳಲ್ಲಿ ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್‌ಗಳ ಕಂಪ್ಲೀಟ್‌ ಲಿಸ್ಟ್‌ ನೋಡಿ…

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?