ಬೆಳಕಿನ ಹಬ್ಬದ ಸಂದರ್ಭದಲ್ಲಿ ಮಕ್ಕಳ ಬಾಳಿಗೆ ಬೆಳಕು ನೀಡ್ತಿದ್ದೀರಿ: ಸಿದ್ದಗಂಗಾ ಸ್ವಾಮೀಜಿ

Public TV
2 Min Read
jnana deevige siddaganga swamiji

ಬೆಂಗಳೂರು: ಬೆಳಕಿನ ಹಬ್ಬದ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳ ಬಾಳಿಗೆ ‘ಜ್ಞಾನದೀವಿಗೆ’ ಅಭಿಯಾನದ ಮೂಲಕ ಬೆಳಕು ನೀಡುತ್ತಿದ್ದೀರಿ ಎಂದು ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

jnana deevige siddaganga swamiji 2 4 e1604815814303

ಜ್ಞಾನ ದೀವಿಗೆ ಕಾರ್ಯಕ್ರಮದ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ತುಂಬಾ ಉತ್ತಮ ಕಾರ್ಯ, ಈ ಹಿಂದೆ ನೆರೆ ಹಾವಳಿ ಬಂದಾಗ ನೀವೂ ಯಾವ ರೀತಿ ಸಹಾಯ ಮಾಡಿದ್ದೀರೋ, ಅದೇ ರೀತಿ ಜನ ಸಹ ಸ್ಪಂದಿಸಿದರು. ಇದೀಗ ಜ್ಞಾನ ದೀವಿಗೆ ಮೂಲಕ ವಿದ್ಯಾರ್ಥಿಗಳ ಬದುಕಿಗೆ ಕೊಡುಗೆ ನೀಡುತ್ತಿದ್ದೀರಿ. ಕಳೆದ ಎಂಟು ತಿಂಗಳಿಂದ ಶಾಲೆ ತರಗತಿ ಇಲ್ಲದೆ ಮಕ್ಕಳು ವಂಚಿತರಾಗಿದ್ದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಮನಗಂಡು ನೀವು ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಟ್ಯಾಬ್ ವಿತರಣೆ ಮಾಡುತ್ತಿರುವುದು ತುಂಬಾ ಶ್ಲಾಘನೀಯ ಎಂದರು. ಇದನ್ನೂ ಓದಿ: ರಂಗನಾಥ್ ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ: ಸಿಎಂ

11

ಅನೇಕ ಮಕ್ಕಳು ಶಿಕ್ಷಣದಿಂದ ಲಕ್ಷಾಂತರ ಮಕ್ಕಳು ವಂಚಿತರಾಗಿದ್ದರು. ಅವರ ಬದುಕಿಗೆ ನೀವೂ ಬೆಳಕಾಗುತ್ತಿದ್ದೀರಿ. ಈ ಮೂಲಕ ಬೆಳಕಿನ ಹಬ್ಬದ ಸಂದರ್ಭದಲ್ಲಿ ಅವರ ಬದುಕಿಗೆ ಬೆಳಕನ್ನು ನೀಡುತ್ತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ‘ಜ್ಞಾನದೀವಿಗೆ’ ಸದಾ ಉರಿಯುತ್ತಿರಬೇಕು. ಆದರೆ ಕಳೆದ ಎಂಟು ತಿಂಗಳಿಂದ ಅದು ಆರುವ ಹಂತ ತಲುಪಿತ್ತು. ಅದು ಆರದಿರುವ ಹಾಗೆ ಉರಿಸುವಂತಹ ಕೆಲಸ ಮಾಡುತ್ತಿದ್ದೀರಿ, ಉರಿಯುವಂತೆ ಮಾಡಿದ್ದೀರಿ. ನಾವು ಯಾವಾಗಲೂ ನಿಮ್ಮೊಂದಿಗೆ ಇರುತ್ತೇವೆ. ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ‘ಜ್ಞಾನದೀವಿಗೆ’ ಕಾರ್ಯಕ್ರಮಕ್ಕೆ ಚಾಲನೆ

TAB 2

ಎಲ್ಲ ಇಲಾಖೆಗಳಿಂತ ಶಿಕ್ಷಣ ಇಲಾಖೆ ತುಂಬಾ ಅನಿಶ್ಚಿತತೆಯಲ್ಲಿದೆ. ಯಾವಾಗ ಶಾಲೆ ಆರಂಭಿಸಬೇಕು, ಮಕ್ಕಳಿಗೆ ಏನು ಮಾಡಬೇಕು ಎಂಬ ದುಗುಡ ಶಿಕ್ಷಣ ಸಚಿವರಲ್ಲಿದೆ. ಆಂಧ್ರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನು ಆರಂಭಿಸಲಾಗಿದೆ. ಅಲ್ಲಿ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಸೋಂಕು ತಗುಲಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಯಾವ ರೀತಿ ಮಾಡಬೇಕೆಂಬ ಸವಾಲು ಕಾಡುತ್ತಿದೆ. ಅಲ್ಲದೆ ಅಧ್ಯಯನ ಯೋಗ್ಯವಾಗಿದೆ. ನಮ್ಮ ಶಿಕ್ಷಣ ಸಚಿವರು ಸಹ ತುಂಬಾ ಶ್ರಮಪಡುತ್ತಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ರೀತಿಯೇ ಇದಕ್ಕೆ ಸಾಕ್ಷಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

JNANA DEEVIGE CM 2 2 e1604811828206

ಕಷ್ಟದಲ್ಲಿದ್ದವರಿಗೆ ಅವರಿಗೆ ಅವರು ಸಹಾಯ ಮಾಡುತ್ತಿದ್ದಾರೆ. ಇಂದೂ ಸಹ ಪಬ್ಲಿಕ್ ಟಿವಿ ಜೊತೆಗೆ ಕೈ ಜೋಡಿಸಿ, ಮಕ್ಕಳಿಗೆ ಟ್ಯಾಬ್ ಮುಟ್ಟಿಸಲು ಸಾಥ್ ನೀಡಿರುವುದು ಸಂತಸದ ವಿಷಯ. ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕಿದೆ ಎಂದು ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *