ಬೆಳಗಾವಿ: ಕರ್ನಾಟಕ ಉಪ ಚುನಾವಣೆಯ ಪೈಕಿ ಬೆಳಗಾವಿ ಮತ ಎಣಿಕೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.
ಆರಂಭದಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಮುಂದಿದ್ದರೆ ನಂತರದ ಸುತ್ತಿನಲ್ಲಿ ಸತೀಶ್ ಜಾರಕಿಹೊಳಿ ಮುನ್ನಡೆ ಪಡೆಯುತ್ತಿದ್ದಾರೆ. ಹಾವು ಏಣಿ ಆಟದಲ್ಲಿ ಜಯ ಯಾರಿಗೆ ಸಿಗಲಿದೆ ಎನ್ನುವುದೇ ಸದ್ಯದ ಕುತೂಹಲವಾಗಿದೆ.
ಬೆಳಗಾವಿಯ ಆರ್ ಬಿಡಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. ಈ ಮಧ್ಯೆ ಮಧ್ಯಾಹ್ನದ ವೇಳೆ ಸರ್ವರ್ ಸಮಸ್ಯೆಯಾದ ಹಿನ್ನೆಲೆಯಲ್ಲಿ 20 ನಿಮಿಷ ಎಣಿಕೆಯಾದ ಮತಗಳ ವಿವರವನ್ನು ಅಪ್ಲೋಡ್ ಮಾಡಲು ಸಾಧ್ಯವಾಗದೇ ಸಿಬ್ಬಂದಿ ಸುಮ್ಮನೆ ಕುಳಿತ ಪ್ರಸಂಗ ನಡೆಯಿತು.
ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ ಸತೀಶ್ ಜಾರಕಿಹೊಳಿ ಅಲ್ಪ ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಬಿಜೆಪಿಗೆ 2,22,785 ಮತಗಳು ಬಿದ್ದರೆ, ಕಾಂಗ್ರೆಸ್ಗೆ 2,27,087 ಮತಗಳು ಬಿದ್ದಿದೆ.