Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Districts

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Public TV
Last updated: August 17, 2020 7:58 am
Public TV
Share
2 Min Read
Rain North Karnataka 2
SHARE

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದೆ. ಪುಣೆ, ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.

Rain North Karnataka 3 medium

ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂಗಳಿಂದಲೂ ಅಪಾರ ಪ್ರಮಾಣದಲ್ಲಿ ನೀರನ್ನ ಹೊರಬಿಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ನವಿಲು ತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿ ಮನೆ, ಅಂಗಡಿಗಳು ಜಲಾವೃತಗೊಂಡಿವೆ. ಎಂಕೆ ಹುಬ್ಬಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಮಂಡೋಳಿ ರಸ್ತೆಯಲ್ಲಿ ಪ್ರವಾಹದಲ್ಲಿ ಸಿಲುಕಿ ಒದ್ದಾಡ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ವಡಗಾವಿ, ಓಂನಗರ, ಶಾಹು ನಗರ, ಮಚ್ಷೆ, ಮಾರಿಹಾಳ ಹಳ್ಳಗಳು ತುಂಬಿ ಹರಿಯುತ್ತಿವೆ. ಮಾರಿಹಾಳದಲ್ಲಿ ರಸ್ತೆಯ ಬದಿಯಲ್ಲಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ರಸ್ತೆ ಬಂದ್ ಆಗಿದೆ.

Rain North Karnataka 7 medium

ನವಿಲುತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಮಲಪ್ರಭಾ ನದಿ ತಟದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿಲಾಗಿದೆ. ಕ್ಷೇತ್ರದ ಶಾಸಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಕೆ ರಾಜೇಂದ್ರಗೆ ದೂರವಾಣಿ ಕರೆ ಮಾಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

Rain North Karnataka 8 medium

ಗೋವನಕೊಪ್ಪ-ಕೊಣ್ಣೂರು ಮಾರ್ಗದ ಹಳೆ ರಸ್ತೆ ಸೇತುವೆ ಜಲಾವೃತಗೊಂಡಿದೆ. ಸ್ಥಳಕ್ಕೆ ಎಸ್‍ಪಿ ಲೋಕೇಶ್ ಜಗಲಾಸರ್, ಎಸಿ ಗಂಗಪ್ಪ, ಬಾದಾಮಿ ತಹಸೀಲ್ದಾರ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಡಕಲ್ ಡ್ಯಾಂನಿಂದ 33 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿರುವ ಕಾರಣ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಮುಧೋಳ ತಾಲೂಕಿನ ಮಾಚಕನೂರಲ್ಲಿರುವ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

Rain North Karnataka 6 medium

ತುಂಗಾಭದ್ರಾ ಜಲಾಶಯದ ಕ್ರಸ್ಟ್ ಗೇಟ್‍ನಿಂದ 4,539 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಹಾಲ್ನೊರೆಯಂತೆ ಉಕ್ಕುತ್ತಿರುವ ನೀರು ಬಣ್ಣದ ಬೆಳಕಿನಲ್ಲಿ ಚಿತ್ತಾರ ಮೂಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿರುವ ಜಲಾಶಯದ ಭರ್ತಿಗೆ ಅರ್ಧ ಅಡಿಯಷ್ಟೇ ಬಾಕಿ ಇದ್ದು, 1632 ಅಡಿಯಷ್ಟು ನೀರು ಸಂಗ್ರಹಗೊಂಡಿದೆ.

Rain North Karnataka 4 medium

ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂನಿಂದ 2 ಲಕ್ಷ 37 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗ್ತಿದೆ. ಹೀಗಾಗಿ ರಾಯಚೂರಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಧಾರವಾಡ ತಾಲೂಕಿನ ಹೊಸೆಟ್ಟಿಯಲ್ಲಿ ಗ್ರಾಮಕ್ಕೆ ಕೆರೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯಲ್ಲೂ ಮಳೆ ಆಗಗುತ್ತಿದೆ. ಕಲಬುರಗಿ ಜಿಲ್ಲೆಯ ಸೊನ್ನ ಬ್ಯಾರೆಜ್‍ನಿಂದ ಭೀಮ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಗದಗ ಜಿಲ್ಲೆಯಲ್ಲೂ ಪ್ರವಾಹ ಭೀತಿ ಉಂಟಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಲ್ಲೂ ಮಳೆ ಆಗ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಲ್ಲೂ ಮೂರು ದಿನ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

TAGGED:GhataprabhaMalaprabhanorth karnatakaPublic TVrainಆರೆಂಜ್ ಅಲರ್ಟ್ಉತ್ತರ ಕರ್ನಾಟಕಘಟಪ್ರಭಾಪಬ್ಲಿಕ್ ಟಿವಿಮಲಪ್ರಭಾಮಳೆ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
3 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
11 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?