ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬಳಿಕ ಇದೀಗ ಸಚಿವ ಏಕನಾಥ ಶಿಂಧೆ ಮತ್ತೆ ಗಡಿ ವಿವಾದ ಕೆಣಕಿದ್ದಾರೆ.
ಜನವರಿ 17ರಂದು ಎಂಇಎಸ್ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ ಉದ್ಧಟತನ ಹೇಳಿಕೆ ನೀಡಿರೋ ಏಕನಾಥ್ ಶಿಂಧೆ, ಬೆಳಗಾವಿ ಸೇರಿ ಗಡಿಭಾಗ ಮಹಾರಾಷ್ಟ್ರ ಸೇರುವವರೆಗೂ ನಾವು ಸುಮ್ಮನೆ ಕೂರಲ್ಲ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡ್ತೀವಿ. ಬೆಳಗಾವಿ ಸೇರಿ ಮರಾಠಿ ಭಾಷಿಕ ಗಡಿ ಪ್ರದೇಶ ಮಹಾರಾಷ್ಟ್ರ ಸೇರ್ಪಡೆಯಾಗುವ ವಿಶ್ವಾಸವಿದೆ. ಹುತಾತ್ಮರ ಬಲಿದಾನ ವ್ಯರ್ಥವಾಗಲು ನಾವು ಬಿಡಲ್ಲ ಎಂದಿದ್ದಾರೆ.
महाराष्ट्रात समाविष्ट होण्यासाठी प्राणपणाला लावणाऱ्या सीमा लढ्यातील हुतात्म्यांना आजच्या हुतात्मा दिनी विनम्र अभिवादन!
सीमा प्रश्नात सर्वस्वाची होळी करणारे हुतात्मे आणि त्यांच्या त्याग तसेच समर्पणात होरपळूनही आजही या लढ्यात धीराने आणि नेटाने सहभागी कुटुंबीयांना मानाचा मुजरा!
— CMO Maharashtra (@CMOMaharashtra) January 17, 2021
ನಿನ್ನಯಷ್ಟೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಆಕ್ರಮಿತ ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಿದ್ದೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಹುಸಂಖ್ಯೆಯಲ್ಲಿ ಮರಾಠಿ ಭಾಷಿಕರಿರುವ ಹಾಗೂ ಮರಾಠಿ ಸಂಸ್ಕೃತಿಯನ್ನು ಒಳಗೊಂಡಿರುವ ಕೆಲವು ಪ್ರದೇಶವನ್ನು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಇದು ಗಡಿ ವಿವಾದಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದು ಮಹಾರಾಷ್ಟ್ರ ಸಿಎಂ ಕಚೇರಿ ಟ್ವೀಟ್ ಮಾಡಿತ್ತು.
कर्नाटकव्याप्त मराठी भाषिक आणि सांस्कृतिक प्रदेश महाराष्ट्रात आणणे हीच या सीमा लढ्यात हौतात्म्य पत्करलेल्या सैनिकांना आदरांजली ठरणार आहे. त्यासाठी आम्ही एकजूट आणि कटिबद्ध आहोत. या अभिवचनासह हूतात्म्यांना विनम्र अभिवादन????????
— CMO Maharashtra (@CMOMaharashtra) January 17, 2021