– ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ
ಗಾಂಧಿನಗರ: ಟ್ರಕ್ ವಾಹನವೊಂದು ಹರಿದು 13 ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಗುಜರಾತ್ನ ಸೂರತ್ ಕೊಸಂಬಾ ನಗರದಲ್ಲಿ ನಡೆದಿದೆ.
ವರದಿಗಳ ಪ್ರಕಾರ ಅಪಘಾತದಲ್ಲಿ ಮೃತಪಟ್ಟವರು ಕಾರ್ಮಿಕರಾಗಿದ್ದು, ರಾಜಸ್ಥಾನ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೂ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ತನಿಖೆ ನಡೆಸಿದಾಗ ಪಾದಚಾರಿ ರಸ್ತೆಯಲ್ಲಿ ಕಾರ್ಮಿಕರು ಮಲಗಿದ್ದರು. ಅದೇ ಸಮಯಕ್ಕೆ ಕಬ್ಬಿನ ರಾಶಿ ತುಂಬಿದ್ದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ರಸ್ತೆಯಲ್ಲಿ ಮಲಗಿದ್ದ ಕಾರ್ಮಿಕರ ಮೈ ಮೇಲೆ ಹರಿದಿದೆ ಎಂದು ಸೂರತ್ನ ಕಾಮ್ರೆಜ್ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಸಿಎಂ ಜಡೇಜಾ ಹೇಳಿದ್ದಾರೆ.
The loss of lives due to a truck accident in Surat is tragic. My thoughts are with the bereaved families. Praying that the injured recover at the earliest: PM @narendramodi
— PMO India (@PMOIndia) January 19, 2021
ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಸೂರತ್ನಲ್ಲಿ ನಡೆದ ಟ್ರಕ್ ಅಪಘಾತ ಒಂದು ದುರಂತ. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
Ex-gratia of Rs. 2 lakh each from PMNRF would be given to the next of kin of those who have lost their lives due to the accident in Surat. Rs. 50,000 each would be given to those injured.
— PMO India (@PMOIndia) January 19, 2021
ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್ಆರ್ಎಫ್) ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಮತ್ತು ಸರ್ಕಾರ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ಘೋಷಿಸಿದೆ.