ಬೈಕ್ ಅಡ್ಡಗಟ್ಟಿ, ಚಾಕು ತೋರಿಸಿ ದರೋಡೆ – ಕಳ್ಳರು ಅರೆಸ್ಟ್

Public TV
1 Min Read
arrrest

ಬೆಂಗಳೂರು: ಬೈಕ್ ಅಡ್ಡಗಟ್ಟಿ ನಂತರ ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬನಶಂಕರಿ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸಂತೋಷ್ ಹಾಗೂ ರಾಜೇಶ್ ಬಂಧಿತ ಆರೋಪಿಗಳು. ಈ ಇಬ್ಬರು ಬೈಕಿನಲ್ಲಿ ಏಕಾಂಗಿಯಾಗಿ ಬರುತ್ತಿರುವವರನ್ನು ಅಡ್ಡಗಟ್ಟಿ ಅವರ ಬೈಕ್ ಸಮೇತ ಅಪಹರಿಸಿ ದರೋಡೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಜೊತೆಗೆ ಬಂಧಿತ ಆರೋಪಿಗಳ ಪೈಕಿ ಸಂತೋಷ್ ಕೆಲ ದಿನಗಳ ಹಿಂದೆ ಜೈಲಿನಿಂದ ಹೊರ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

arrested 1280x720 2

ಅಗಸ್ಟ್ 14ರ ರಾತ್ರಿ ಹೊಸೂರಿನಿಂದ ಬೈಕಿನಲ್ಲಿ ಬರುತ್ತಿದ್ದ ಭರಣಿಯೇಂದ್ರನ್‍ನನ್ನು ಈ ಇಬ್ಬರು ಆರೋಪಿಗಳು ಕದಿರೇನಹಳ್ಳಿ ಬಳಿ ಅಡ್ಡಗಟ್ಟಿದ್ದಾರೆ. ನಂತರ ಚಾಕು ತೋರಿಸಿ ಜೇಬಿನಲ್ಲಿದ್ದ 8,500 ನಗದು ಮತ್ತು ವಿವೊ ಮೊಬೈಲ್ ಅನ್ನು ಕಿತ್ತುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಆತನನ್ನು ಬೈಕಿನಲ್ಲೇ ಅಪಹರಣ ಮಾಡಿ ಎಟಿಎಂಗೆ ಕರೆದೊಯ್ದ 20 ಸಾವಿರ ಡ್ರಾ ಮಾಡಿಸಿಕೊಂಡು ಎಸ್ಕೇಪ್ ಆಗಿದ್ದಾರೆ.

police 1 e1585506284178 1 medium

ಆ ನಂತರ ಭರಣಿಯೇಂದ್ರನ್ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಕುಮಾರಸ್ವಾಮಿ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಹಲ್ಲೆ ಪ್ರಕರಣಗಳು ದಾಖಲಾಗಿದ್ದು, ಸದ್ಯ ಬನಶಂಕರಿ ಪೊಲೀಸರು ಬಂಧಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *