ಹುಬ್ಬಳ್ಳಿ: ಕೌಟುಂಬಿಕ ಕಲಹ ಹಾಗೂ ವ್ಯಾಪಾರದಲ್ಲಿ ನಷ್ಟ ಅನುಭವಿಸುತ್ತಿರುವ ವ್ಯಕ್ತಿಯೋರ್ವ ಪತ್ನಿ ಎದುರಿನಲ್ಲಿಯೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ರೋಹಿತ್ ಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಯ ಸಂತೋಷ ನಗರದ ನಿವಾಸಿ.
- Advertisement 2
- Advertisement 3
ರೋಹಿತ್ ಗೌಡ ಪಾಟೀಲ್ ನಿನ್ನೆ ರಾತ್ರಿ ಕುಡಿದು ಬಂದು ಪತ್ನಿ ಜೊತೆ ಜಗಳವಾಡಿದ್ದ. ಆದರೆ ಇಂದು ಮುಂಜಾನೆ ಎಂದಿನಂತೆ ತನ್ನ ಹೋಟೆಲ್ಗೆ ಬಂದಿದ್ದಾನೆ. ಈ ವೇಳೆ ಪತ್ನಿಯ ಬಳಿ ಬೈಕ್ ಕೀ ಕೊಡುವಂತೆ ವಾಗ್ವಾದ ನಡೆಸಿದ್ದಾನೆ. ಪತ್ನಿ ಬೈಕ್ ಕೀ ನೀಡದ ಪರಿಣಾಮ ಅಸಮಾಧಾನಗೊಂಡ ರೋಹಿತ್ ಗೌಡ ತನ್ನ ಹೋಟೆಲ್ ಹಿಂಭಾಗದ ಸಂತೋಷ ನಗರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
- Advertisement 4
ರೋಹಿತ್ ಗೌಡ ಕೆರೆಗೆ ಜಿಗಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರಿಬ್ಬರು ರಕ್ಷಣೆಗೆ ಮುಂದಾದರು. ಆದರೆ ರೋಹಿತ್ ಗೌಡನನ್ನು ಉಳಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನೊಂದಿಗೆ ಮೃತದೇಹವನ್ನು ಹೊರತಗೆಯಲಾಗಿದೆ. ಈ ಘಟನೆ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.