ಗಾಂಧಿನಗರ: ಬ್ಯಾಂಕ್ ಲಾಕರ್ನಲ್ಲಿಟ್ಟ 2 ಲಕ್ಷ ಹಣವನ್ನು ಗೆದ್ದಲು ಹುಳಗಳು ತಿಂದ ಘಟನೆ ಗುಜರಾತಿನ ವಡೋದರದಲ್ಲಿ ನಡೆದಿದೆ.
ವಡೋದರ ಮೂಲದ ರೆಹನಾ ಕುತುಬ್ದೀನ್ ಎಂಬವರು ಪ್ರತಾಪ್ ನಗರ ಶಾಖೆಯ ಬ್ಯಾಂಕ್ ಆಫ್ ಬರೋಡಾದ ಲಾಕರ್ ನಲ್ಲಿ 2.20 ಲಕ್ಷ ರೂ ಹಣ ಇಟ್ಟಿದ್ದರು. ಆದರೆ ಬ್ಯಾಂಕ್ ಲಾಕರ್ ನಂ 252ರಲ್ಲಿ ಇದ್ದ ಹಣದ ಕಂತೆಗಳನ್ನು ಗೆದ್ದಲು ಹುಳುಗಳು ತಿಂದು ಹಾಕಿದೆ.
ಈ ವಿಚಾರವಾಗಿ ರೆಹನಾ ಕುತುಬ್ದೀನ್ ಬ್ಯಾಂಕ್ ಮುಖ್ಯಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕಳೆದುಕೊಂಡಿರುವ ಅಷ್ಟು ಹಣವನ್ನು ಬ್ಯಾಂಕ್ ಮರುಪಾವತಿಸುವಂತೆ ಬೇಡಿಕೆ ಇಟ್ಟಿದ್ದಾರೆ.