ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗ (ಐಎಸ್ಡಿ) ಸೀರಿಯಲ್ ನಟ, ನಟಿಯರಿಗೂ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಿರುತೆರೆ ನಟಿ ಗೀತಾಭಾರತಿ ಭಟ್ ಮತ್ತು ನಟ ಅಭಿಷೇಕ್ ದಾಸ್ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನೂ ಓದಿ: ನಟ ಲೂಸ್ ಮಾದ ಯೋಗಿಯಿಂದ ಮತ್ತೊಂದು ಎಡವಟ್ಟು
ವಿಚಾರಣೆಗೆ ಹೋಗುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅಭಿಷೇಕ್ ದಾಸ್, ಸೋಮವಾರ ರಾತ್ರಿ ನನಗೆ ನೋಟಿಸ್ ಬಂದಿದೆ. ಹೀಗಾಗಿ ವಿಚಾರಣೆಗೆ ಬಂದಿದ್ದೇನೆ. ನನ್ನ ಪ್ರಕಾರ ಡ್ರಗ್ಸ್ ಕೇಸಿನಲ್ಲಿ ಬಂಧಿತರಾಗಿರುವ ವ್ಯಕ್ತಿಗಳ ಬಗ್ಗೆ ಕೇಳಲು ಕರೆದಿರಬಹುದು ಅಥವಾ ಆ ವ್ಯಕ್ತಿಗಳನ್ನು ಮುಂಚೆ ಎಲ್ಲಾದರೂ ಭೇಟಿಯಾಗಿದ್ದೀರಾ, ಯಾವುದಾದರೂ ಪಾರ್ಟಿಗೆ ಹೋಗಿದ್ದೀರ ಎಂದು ಕೇಳಲು ಕರೆದಿರಬಹುದು ಎಂದರು. ಇದನ್ನೂ ಓದಿ: ನಮಗೆ ಆಗದವರು ನಮ್ಮ ಹೆಸರು ಹೇಳಿರ್ಬೋದು: ಗೀತಾಭಾರತಿ ಭಟ್
ಕಿರುತೆರೆಯಲ್ಲಿ ಇದಿಯೋ ಇಲ್ಲವೋ ಗೊತ್ತಿಲ್ಲ. ಆದರೆ ನಮ್ಮ ಸರ್ಕಲ್ನಲ್ಲಿ ಡ್ರಗ್ಸ್ ಇಲ್ಲ. ನಾನು ಓಡಾಡಿರುವ ಸ್ನೇಹಿತರು ಕೂಡ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ನೋಡಿಲ್ಲ. ಕೆಲವು ವ್ಯಕ್ತಿಗಳ ಬಗ್ಗೆ ವಿಚಾರಣೆ ಮಾಡಬೇಕು. ಅವರ ಬಗ್ಗೆ ನಿಮಗೆ ಗೊತ್ತಿರುವ ಮಾಹಿತಿ ಕೊಟ್ಟು ಹೋಗಿ ಎಂದು ಫೋನ್ ಮಾಡಿ ಕರೆದಿದ್ದಾರೆ. ಹೀಗಾಗಿ ಬಂದಿದ್ದೇನೆ. ಈಗಾಗಲೇ ಮೂವರು ಕಿರುತೆರೆ ನಟರು ಬಂದಿದ್ದಾರೆ. ಇನ್ನೂ ಕೆಲವರು ಬರುತ್ತಾರೆ, ನಾಳೆನೂ ಕೆಲ ನಟರು ಬರುತ್ತಾರೆ. ನನಗೆ ಗೊತ್ತಿರುವುದನ್ನು ನಾನು ಹೇಳುತ್ತೇನೆ ಎಂದು ನಟ ಅಭಿಷೇಕ್ ಹೇಳಿದರು.
ಇದೇ ವೇಳೆ ಗೀತಾಭಾರತಿ ಭಟ್ ಮಾತನಾಡಿದ್ದು, ಸೆ.19ರಂದು ನನಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಸಂಪೂರ್ಣವಾಗಿ ಐಎಸ್ಡಿಗೆ ನಾನು ಸಪೋರ್ಟ್ ಮಾಡುತ್ತೇನೆ. ಅವರು ಕೇಳುವ ಎಲ್ಲಾ ಪ್ರಶ್ನೆಗಳಿಗೂ ನಾನು ಉತ್ತರಿಸುವ ಮೂಲಕ ಸಹಕಾರ ನೀಡುತ್ತೇನೆ. ಅವರು ನಮ್ಮನ್ನು ವಿಚಾರಣೆಗೆ ಕರೆದಿದ್ದಾರೆ. ಆದರೆ ಅವರು ನಮ್ಮನ್ನು ಆರೋಪಿಯನ್ನಾಗಿ ಮಾಡುತ್ತಿಲ್ಲ ಎಂದರು.
ನಟಿ ಗೀತಾಭಾರತಿ ಭಟ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಬ್ರಹ್ಮಗಂಟು’ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದು, ಗೀತಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಇನ್ನೂ ನಟ ಅಭಿಷೇಕ್ ದಾಸ್ ‘ಗಟ್ಟಿಮೇಳ’ ಸೀರಿಯಲ್ಲಿ ನಟಿಸುತ್ತಿದ್ದು, ವಿಕ್ರಾಂತ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಬ್ಬರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.