Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬ್ಲಾಕ್‍ಮೇಲ್ ಹಣದಲ್ಲಿ ಪಡಿತರ ವಿತರಿಸಿ ಫೋಟೋಗೆ ಪೋಸ್ ಕೊಟ್ಟ ಬಿಜೆಪಿ ಸಂಸದನ ಪುತ್ರ

Public TV
Last updated: September 5, 2020 8:16 pm
Public TV
Share
3 Min Read
Amaresh Karadi MP Son 3
SHARE

-ಸಂಸದರ ಪುತ್ರನ ಬ್ಲಾಕ್‍ಮೇಲ್ ಆಡಿಯೋ ಔಟ್
-ವರ್ಗಾವಣೆ ಮಾಡದೇ ಇರಲು ಲಕ್ಷ ಲಕ್ಷ ಬೇಡಿಕೆಯ ಆರೋಪ

ಕೊಪ್ಪಳ: ಕೊರೊನಾ ಮಹಾಮಾರಿಯಿಂದ ಸಾಕಷ್ಟು ಬಡ ಕುಟುಂಬಗಳು, ಕೂಲಿ ಕಾರ್ಮಿಕರು, ನಿರ್ಗತಿಕರು ತುತ್ತು ಅನ್ನಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತವರ ಸಹಾಯಕ್ಕಾಗಿ ಸಾಕಷ್ಟು ಸಂಘ ಸಂಸ್ಥೆಗಳು, ಸಾರ್ವಜನಿಕರು ಸ್ವಯಪ್ರೇರಿತರಾಗಿ ಮುಂದೆ ಬಂದು ತಮ್ಮ ತಮ್ಮ ಸ್ವಂತ ಖರ್ಚಿನಲ್ಲಿ ಸಹಾಯ ಮಾಡಿ ಬಡವರ ಮತ್ತು ನಿರ್ಗತಿಕರಿಗೆ ಹಸಿವು ನೀಗಿಸಿದ್ದಾರೆ. ಆದರೆ ಕೊಪ್ಪಳ ಸಂಸದರ ಪುತ್ರ ಬಡವರಿಗೆ ಸಹಾಯದ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಮಾಡಿ, ಅವರಿಂದ ತೆಗೆದುಕೊಂಡ ಸಾಮಗ್ರಿಗಳನ್ನ ಬಡವರಿಗೆ ಹಂಚಿ ಪೋಸ್ ಗಿಟ್ಟಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

Amaresh Karadi MP Son 4

ಕೊಪ್ಪಳ ಸಂಸದ ಕರಡಿ ಸಂಗಣ್ಣರವರ ಪುತ್ರ ಅಮರೇಶ್ ಕರಡಿ ಫೋಟೋಗೆ ಪೋಸ್ ಕೊಟ್ಟ ಲೀಡರ್. ರಾಜ್ಯದಲ್ಲಿ ಯಾವಾಗ ಬಿಜೆಪಿ ಸರ್ಕಾರ ಬಂತೋ ಅಂದಿನಿಂದ ಕೊಪ್ಪಳದಲ್ಲಿ ಸಂಸದ ಕರಡಿ ಸಂಗಣ್ಣ ಪುತ್ರ ಅಮರೇಶ್ ಕರಡಿ ಪ್ರಭಾವ ಜೋರಾಗಿಯೇ ನಡೆಯುತ್ತಿದೆ. ಜಿಲ್ಲೆಯಲ್ಲಿ ಅಮರೇಶ್ ಕರಡಿ ತಾವೇ ಜಿಲ್ಲಾ ಉಸ್ತುವಾರಿ ಮಂತ್ರಿ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿದೆ.

Amaresh Karadi MP Son 1

ಲಾಕ್‍ಡೌನ್ ವೇಳೆ ಬಡವರಿಗೆ ನೀಡಿದ ಅಹಾರದ ಕಿಟ್ ವಿತರಣೆಯಲ್ಲಿ ಭಾರಿ ಗೋಲ್‍ಮಾಲ್ ಮಾಡಿದ್ದಾರೆ. ಬಡವರಿಗೆ ನೀಡಿದ ದಿನಸಿ ಕಿಟ್ ವಿತರಣೆ ಮಾಡಿದ್ದು, ಜಿಲ್ಲೆಯ ಅಧಿಕಾರಿಗಳ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ ವಸೂಲಿ ಮಾಡಿ ತಮ್ಮ ಫೋಟೋ ಅಂಟಿಸಿಕೊಂಡು ಫೋಸ್ ನೀಡಿದ್ದಾರೆ ಎಂಬ ಆರೋಪಕ್ಕೆ ಪೂರಕ ಎಂಬಂತೆ ಅಮರೇಶ್ ಕರಡಿ ಮಾತನಾಡಿದ ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Amaresh Karadi MP Son 7
ಕೊಪ್ಪಳ ಡಿವೈಎಸ್ಪಿ ವೆಂಕಟಪ್ಪ ನಾಯಕ

ಗಂಗಾವತಿ ಡಿವೈಎಸ್ಪಿ ಚಂದ್ರಶೇಖರ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿ ಲಾಕ್‍ಡೌನ್ ಇದೆ. ನಿಮ್ಮಿಂದ ಟನ್ ಗಟ್ಟಲೆ ಅಕ್ಕಿ ಪೂರೈಸಿ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಕೊಪ್ಪಳ ಡಿವೈಎಸ್ಪಿ, ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಣ ಮತ್ತು ಸಾಮಗ್ರಿಗಳನ್ನು ನೀಡಿದ್ದಾರೆ. ನೀವು ಕೂಡ ನೀಡಬೇಕು ಎಂದು ಆಡಿಯೋದಲ್ಲಿ ಮಾತನಾಡಿದ್ದಾರೆ.

DYSP Chandrashekhart

50 ಟನ್ ಅಕ್ಕಿಯ ಹಣವನ್ನು ಗಂಗಾವತಿ ಡಿವೈಎಸ್ಪಿ ಚಂದ್ರಶೇಖರ್ ಅವರು ಅಮರೇಶ್ ಕರಡಿಗೆ ನೀಡಿದ್ದಾರೆ. ನಂತರ ಡಿವೈಎಸ್ಪಿಯಾಗಿ ಗಂಗಾವತಿಯಲ್ಲಿ ಮುಂದುವರಿಯಬೇಕು ಅಂದ್ರೆ ಹಣ ನೀಡಬೇಕು ಎನ್ನುವ ಆರೋಪ ಕೇಳಿ ಬಂದಿದೆ. ರಾಜ್ಯ ಸರ್ಕಾರ ಡಿವೈಎಸ್ಪಿ ಗಳ ಮಾಡಿದ ವರ್ಗಾವಣೆ ಯಲ್ಲಿ ಗಂಗಾವತಿ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ ಹೆಸರು ಪ್ರಕಟಗೊಂಡಿದ್ದು ಇದಕ್ಕೆ ಪುಷ್ಟಿ ನೀಡುವಂತಿದೆ ಎಂಬ ಮಾತು ಈಗ ಪೊಲೀಸ್‌ ವಲಯದಿಂದ ಕೇಳಿಬಂದಿದೆ.Amaresh Karadi MP Son 5

ಕೊಪ್ಪಳ ಡಿವೈಎಸ್ಪಿ ವೆಂಕಟಪ್ಪ ನಾಯಕ ಕೂಡ ಅವಧಿ ಒಂದು ವರ್ಷ ಮುಗಿದಿದೆ. ಆದರೆ ಕೊಪ್ಪಳ ಸಂಸದರ ಪುತ್ರನ ಜೊತೆ ಉತ್ತಮ ಸಂಬಂಧ ಇರುವ ಕಾರಣಕ್ಕೆ ಅವರು ಕೊಪ್ಪಳ ಡಿವೈಎಸ್ಪಿಯಾಗಿ ಮುಂದುವರಿದಿದ್ದಾರೆ ಎಂದು ಜಿಲ್ಲೆಯಲ್ಲಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ವರ್ಗಾವಣೆ ತಡೆಯಲು ಅಮರೇಶ್ ಕರಡಿ ಡಿವೈಎಸ್ಪಿ ಚಂದ್ರಶೇಖರ್ ಬಳಿ 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪ ಕೂಡ ಕೇಳಿ ಬರುತ್ತಿದೆ.

Amaresh Karadi MP Son 6

ಈಗ ಗಂಗಾವತಿ ಡಿವೈಎಸ್ಪಿ ವರ್ಗಾವಣೆ ಗೊಂಡಿದ್ದು, ಅವರೊಂದಿಗೆ ಲಾಕ್‍ಡೌನ್ ಅವಧಿಯಲ್ಲಿ ಅಕ್ಕಿ ಪೂರೈಸುವಂತೆ ಪೀಡಿಸಿದ ಆಡಿಯೋ ರಿವೀಲ್ ಆಗಿದ್ದು, ಎಲ್ಲರನ್ನ ಅನುಮಾನ ಮೂಡಿಸುವಂತೆ ಮಾಡಿದೆ. ಡಿವೈಎಸ್ಪಿ ಈಗಾಗಲೇ ಒಂದು ವರ್ಷ ಗಂಗಾವತಿಯಲ್ಲಿ ಮುಗಿಸಿದ್ದಾರೆ. ಸರ್ಕಾರ ಆದೇಶ ಒಂದು ವರ್ಷದ ನಂತರ ಅಧಿಕಾರಿಯನ್ನು ವರ್ಗಾವಣೆ ಮಾಡಬಹುದಾಗಿದೆ. ಅಲ್ಲಿಯೇ ಮುಂದುವರಿಯಬೇಕು ಅಂದರೆ ಜನಪ್ರತಿನಿಧಿಗಳ ಮಾತು ಕೇಳಲೇಬೇಕು. ಇಲ್ಲ ಅಂದ್ರೆ ಅವರ ತಮಗೆ ಯಾರು ಅನುಕೂಲ ಆಗುತ್ತಾರೆ ಅವರನ್ನು ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕೊಪ್ಪಳ ಸಂಸದನ ಪುತ್ರನ  ದರ್ಬಾರ್ ಜಾಸ್ತಿಯಾಗಿದೆ ಎನ್ನುವ ಮಾತುಗಳು ಈಗ ಹೆಚ್ಚಾಗಿ ಕೇಳಿ ಬರುತ್ತಿದೆ.

TAGGED:Amaresh KaradiDYSPFood KitKoppalLockdownPublic TVsanganna karaditransferಅಮರೇಶ್ ಸಂಗಣ್ಣಪಬ್ಲಿಕ್ ಟಿವಿಫುಡ್ ಕಿಟ್ಬಿಜೆಪಿಲಾಕ್‍ಡೌನ್ಸಂಗಣ್ಣ ಕರಡಿ
Share This Article
Facebook Whatsapp Whatsapp Telegram

Cinema Updates

shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
1 hour ago
Saurav Lokesh
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
2 hours ago
darshan 1 1
ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
3 hours ago
kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
4 hours ago

You Might Also Like

Asim Munir
Latest

ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್

Public TV
By Public TV
43 minutes ago
g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
1 hour ago
HC Balakrishna
Districts

ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
Hemavathi Express Canal Link 2
Districts

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

Public TV
By Public TV
2 hours ago
MB Patil
Bengaluru City

ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

Public TV
By Public TV
2 hours ago
JIO
Latest

ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?