Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಲಾಕ್‍ಮೇಲ್ ಹಣದಲ್ಲಿ ಪಡಿತರ ವಿತರಿಸಿ ಫೋಟೋಗೆ ಪೋಸ್ ಕೊಟ್ಟ ಬಿಜೆಪಿ ಸಂಸದನ ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬ್ಲಾಕ್‍ಮೇಲ್ ಹಣದಲ್ಲಿ ಪಡಿತರ ವಿತರಿಸಿ ಫೋಟೋಗೆ ಪೋಸ್ ಕೊಟ್ಟ ಬಿಜೆಪಿ ಸಂಸದನ ಪುತ್ರ

Districts

ಬ್ಲಾಕ್‍ಮೇಲ್ ಹಣದಲ್ಲಿ ಪಡಿತರ ವಿತರಿಸಿ ಫೋಟೋಗೆ ಪೋಸ್ ಕೊಟ್ಟ ಬಿಜೆಪಿ ಸಂಸದನ ಪುತ್ರ

Public TV
Last updated: September 5, 2020 8:16 pm
Public TV
Share
3 Min Read
Amaresh Karadi MP Son 3
SHARE

-ಸಂಸದರ ಪುತ್ರನ ಬ್ಲಾಕ್‍ಮೇಲ್ ಆಡಿಯೋ ಔಟ್
-ವರ್ಗಾವಣೆ ಮಾಡದೇ ಇರಲು ಲಕ್ಷ ಲಕ್ಷ ಬೇಡಿಕೆಯ ಆರೋಪ

ಕೊಪ್ಪಳ: ಕೊರೊನಾ ಮಹಾಮಾರಿಯಿಂದ ಸಾಕಷ್ಟು ಬಡ ಕುಟುಂಬಗಳು, ಕೂಲಿ ಕಾರ್ಮಿಕರು, ನಿರ್ಗತಿಕರು ತುತ್ತು ಅನ್ನಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಂತವರ ಸಹಾಯಕ್ಕಾಗಿ ಸಾಕಷ್ಟು ಸಂಘ ಸಂಸ್ಥೆಗಳು, ಸಾರ್ವಜನಿಕರು ಸ್ವಯಪ್ರೇರಿತರಾಗಿ ಮುಂದೆ ಬಂದು ತಮ್ಮ ತಮ್ಮ ಸ್ವಂತ ಖರ್ಚಿನಲ್ಲಿ ಸಹಾಯ ಮಾಡಿ ಬಡವರ ಮತ್ತು ನಿರ್ಗತಿಕರಿಗೆ ಹಸಿವು ನೀಗಿಸಿದ್ದಾರೆ. ಆದರೆ ಕೊಪ್ಪಳ ಸಂಸದರ ಪುತ್ರ ಬಡವರಿಗೆ ಸಹಾಯದ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಮಾಡಿ, ಅವರಿಂದ ತೆಗೆದುಕೊಂಡ ಸಾಮಗ್ರಿಗಳನ್ನ ಬಡವರಿಗೆ ಹಂಚಿ ಪೋಸ್ ಗಿಟ್ಟಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

Amaresh Karadi MP Son 4

ಕೊಪ್ಪಳ ಸಂಸದ ಕರಡಿ ಸಂಗಣ್ಣರವರ ಪುತ್ರ ಅಮರೇಶ್ ಕರಡಿ ಫೋಟೋಗೆ ಪೋಸ್ ಕೊಟ್ಟ ಲೀಡರ್. ರಾಜ್ಯದಲ್ಲಿ ಯಾವಾಗ ಬಿಜೆಪಿ ಸರ್ಕಾರ ಬಂತೋ ಅಂದಿನಿಂದ ಕೊಪ್ಪಳದಲ್ಲಿ ಸಂಸದ ಕರಡಿ ಸಂಗಣ್ಣ ಪುತ್ರ ಅಮರೇಶ್ ಕರಡಿ ಪ್ರಭಾವ ಜೋರಾಗಿಯೇ ನಡೆಯುತ್ತಿದೆ. ಜಿಲ್ಲೆಯಲ್ಲಿ ಅಮರೇಶ್ ಕರಡಿ ತಾವೇ ಜಿಲ್ಲಾ ಉಸ್ತುವಾರಿ ಮಂತ್ರಿ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿದೆ.

Amaresh Karadi MP Son 1

ಲಾಕ್‍ಡೌನ್ ವೇಳೆ ಬಡವರಿಗೆ ನೀಡಿದ ಅಹಾರದ ಕಿಟ್ ವಿತರಣೆಯಲ್ಲಿ ಭಾರಿ ಗೋಲ್‍ಮಾಲ್ ಮಾಡಿದ್ದಾರೆ. ಬಡವರಿಗೆ ನೀಡಿದ ದಿನಸಿ ಕಿಟ್ ವಿತರಣೆ ಮಾಡಿದ್ದು, ಜಿಲ್ಲೆಯ ಅಧಿಕಾರಿಗಳ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ ವಸೂಲಿ ಮಾಡಿ ತಮ್ಮ ಫೋಟೋ ಅಂಟಿಸಿಕೊಂಡು ಫೋಸ್ ನೀಡಿದ್ದಾರೆ ಎಂಬ ಆರೋಪಕ್ಕೆ ಪೂರಕ ಎಂಬಂತೆ ಅಮರೇಶ್ ಕರಡಿ ಮಾತನಾಡಿದ ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Amaresh Karadi MP Son 7
ಕೊಪ್ಪಳ ಡಿವೈಎಸ್ಪಿ ವೆಂಕಟಪ್ಪ ನಾಯಕ

ಗಂಗಾವತಿ ಡಿವೈಎಸ್ಪಿ ಚಂದ್ರಶೇಖರ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿ ಲಾಕ್‍ಡೌನ್ ಇದೆ. ನಿಮ್ಮಿಂದ ಟನ್ ಗಟ್ಟಲೆ ಅಕ್ಕಿ ಪೂರೈಸಿ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಕೊಪ್ಪಳ ಡಿವೈಎಸ್ಪಿ, ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಣ ಮತ್ತು ಸಾಮಗ್ರಿಗಳನ್ನು ನೀಡಿದ್ದಾರೆ. ನೀವು ಕೂಡ ನೀಡಬೇಕು ಎಂದು ಆಡಿಯೋದಲ್ಲಿ ಮಾತನಾಡಿದ್ದಾರೆ.

DYSP Chandrashekhart

50 ಟನ್ ಅಕ್ಕಿಯ ಹಣವನ್ನು ಗಂಗಾವತಿ ಡಿವೈಎಸ್ಪಿ ಚಂದ್ರಶೇಖರ್ ಅವರು ಅಮರೇಶ್ ಕರಡಿಗೆ ನೀಡಿದ್ದಾರೆ. ನಂತರ ಡಿವೈಎಸ್ಪಿಯಾಗಿ ಗಂಗಾವತಿಯಲ್ಲಿ ಮುಂದುವರಿಯಬೇಕು ಅಂದ್ರೆ ಹಣ ನೀಡಬೇಕು ಎನ್ನುವ ಆರೋಪ ಕೇಳಿ ಬಂದಿದೆ. ರಾಜ್ಯ ಸರ್ಕಾರ ಡಿವೈಎಸ್ಪಿ ಗಳ ಮಾಡಿದ ವರ್ಗಾವಣೆ ಯಲ್ಲಿ ಗಂಗಾವತಿ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ ಹೆಸರು ಪ್ರಕಟಗೊಂಡಿದ್ದು ಇದಕ್ಕೆ ಪುಷ್ಟಿ ನೀಡುವಂತಿದೆ ಎಂಬ ಮಾತು ಈಗ ಪೊಲೀಸ್‌ ವಲಯದಿಂದ ಕೇಳಿಬಂದಿದೆ.Amaresh Karadi MP Son 5

ಕೊಪ್ಪಳ ಡಿವೈಎಸ್ಪಿ ವೆಂಕಟಪ್ಪ ನಾಯಕ ಕೂಡ ಅವಧಿ ಒಂದು ವರ್ಷ ಮುಗಿದಿದೆ. ಆದರೆ ಕೊಪ್ಪಳ ಸಂಸದರ ಪುತ್ರನ ಜೊತೆ ಉತ್ತಮ ಸಂಬಂಧ ಇರುವ ಕಾರಣಕ್ಕೆ ಅವರು ಕೊಪ್ಪಳ ಡಿವೈಎಸ್ಪಿಯಾಗಿ ಮುಂದುವರಿದಿದ್ದಾರೆ ಎಂದು ಜಿಲ್ಲೆಯಲ್ಲಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ವರ್ಗಾವಣೆ ತಡೆಯಲು ಅಮರೇಶ್ ಕರಡಿ ಡಿವೈಎಸ್ಪಿ ಚಂದ್ರಶೇಖರ್ ಬಳಿ 50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪ ಕೂಡ ಕೇಳಿ ಬರುತ್ತಿದೆ.

Amaresh Karadi MP Son 6

ಈಗ ಗಂಗಾವತಿ ಡಿವೈಎಸ್ಪಿ ವರ್ಗಾವಣೆ ಗೊಂಡಿದ್ದು, ಅವರೊಂದಿಗೆ ಲಾಕ್‍ಡೌನ್ ಅವಧಿಯಲ್ಲಿ ಅಕ್ಕಿ ಪೂರೈಸುವಂತೆ ಪೀಡಿಸಿದ ಆಡಿಯೋ ರಿವೀಲ್ ಆಗಿದ್ದು, ಎಲ್ಲರನ್ನ ಅನುಮಾನ ಮೂಡಿಸುವಂತೆ ಮಾಡಿದೆ. ಡಿವೈಎಸ್ಪಿ ಈಗಾಗಲೇ ಒಂದು ವರ್ಷ ಗಂಗಾವತಿಯಲ್ಲಿ ಮುಗಿಸಿದ್ದಾರೆ. ಸರ್ಕಾರ ಆದೇಶ ಒಂದು ವರ್ಷದ ನಂತರ ಅಧಿಕಾರಿಯನ್ನು ವರ್ಗಾವಣೆ ಮಾಡಬಹುದಾಗಿದೆ. ಅಲ್ಲಿಯೇ ಮುಂದುವರಿಯಬೇಕು ಅಂದರೆ ಜನಪ್ರತಿನಿಧಿಗಳ ಮಾತು ಕೇಳಲೇಬೇಕು. ಇಲ್ಲ ಅಂದ್ರೆ ಅವರ ತಮಗೆ ಯಾರು ಅನುಕೂಲ ಆಗುತ್ತಾರೆ ಅವರನ್ನು ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಕೊಪ್ಪಳ ಸಂಸದನ ಪುತ್ರನ  ದರ್ಬಾರ್ ಜಾಸ್ತಿಯಾಗಿದೆ ಎನ್ನುವ ಮಾತುಗಳು ಈಗ ಹೆಚ್ಚಾಗಿ ಕೇಳಿ ಬರುತ್ತಿದೆ.

TAGGED:Amaresh KaradiDYSPFood KitKoppalLockdownPublic TVsanganna karaditransferಅಮರೇಶ್ ಸಂಗಣ್ಣಪಬ್ಲಿಕ್ ಟಿವಿಫುಡ್ ಕಿಟ್ಬಿಜೆಪಿಲಾಕ್‍ಡೌನ್ಸಂಗಣ್ಣ ಕರಡಿ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
29 minutes ago
Sunil Kumar 2
Bengaluru City

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Public TV
By Public TV
1 hour ago
Madhu bangarappa
Bengaluru City

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Public TV
By Public TV
1 hour ago
odisha bjd congress flag
Latest

ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

Public TV
By Public TV
1 hour ago
HD Revanna
Districts

ಹಾಸನ ಡಿಸಿ, ಹೊಳೆನರಸೀಪುರ ತಾ.ಪಂ. ಇಓ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಹೆಚ್.ಡಿ.ರೇವಣ್ಣ

Public TV
By Public TV
1 hour ago
Vijayapura Police
Districts

22 ಕೇಸ್‌ನ 36 ಜನ ಅರೆಸ್ಟ್ – 1.27 ಕೋಟಿ ಮೌಲ್ಯದ ಚಿನ್ನಾಭರಣ, 2 ಕಾರು, 17 ಬೈಕ್ ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?