ಬ್ಲೂ ಬೇಬಿ ಸಿಂಡ್ರೋಮ್ – ಸಿದ್ದಾರ್ಥ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

Public TV
2 Min Read
blue baby syndrome

ತುಮಕೂರು: ಬ್ಲೂ ಬೇಬಿ ಸಿಂಡ್ರೋಮ್ ಹೊಂದಿದ್ದ ಆರೂವರೆ ವರ್ಷದ ಬಾಲಕಿಗೆ ಸಿದ್ಧಾರ್ಥ ಹಾರ್ಟ್ ಸೆಂಟರ್‍ನಲ್ಲಿ ನಡೆಸಲಾದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಇದೊಂದು ಐತಿಹಾಸಿಕ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಮೈಲಿಗಲ್ಲು ಎಂದು ಸಾಹೇ ಕುಲಾಧಿಪತಿ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

defining heart attack ardiac arrest or heart failure

ನಗರದ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಟ್ಟಿನಿಂದಲೇ ಬ್ಲೂ ಬೇಬಿ ಸಿಂಡ್ರೋಮ್ ಹೊಂದಿದ್ದ ಬಾಲಕಿಗೆ ಉಚಿತವಾಗಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಜನನಿ(ಹೆಸರು ಬದಲಾಗಿದೆ) ಮೂಲತಃ ಈ ಮಗು ತುಮಕೂರು ಜಿಲ್ಲೆಯವರಾಗಿದ್ದು, ಶಸ್ತ್ರಚಿಕಿತ್ಸೆಯು ಸುದೀರ್ಘವಾಗಿ 5 ಗಂಟೆಗಳ ಕಾಲ ನಡೆಸಲಾಯಿತು. ಮಗುವು ಸಂಪೂರ್ಣವಾಗಿ ಆರೋಗ್ಯಕರವಾಗಿದೆ ಎಂದಿದ್ದಾರೆ.

Blue Baby Syndrome 2

 

ತುಮಕೂರಿನಿಂದ ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಯಾವುದೇ ಹಾರ್ಟ್ ಸೆಂಟರ್ ಇಲ್ಲದೆ ಇರುವುದು ಬೇಸರ ಸಂಗತಿಯಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ತುಮಕೂರು ಜಿಲ್ಲೆಯ ಹಾಗೂ ಸುತ್ತಮುತ್ತಲಿನ ಜನಸಾಮಾನ್ಯರಿಗೆ ಹಾರ್ಟ್ ಸೆಂಟರ್ ತೆರೆದು ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವುದಕ್ಕೆ ರೋಗಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಮೂರನೇ ಅಲೆಗೆ ಮಕ್ಕಳೇ ಟಾರ್ಗೆಟ್ – ಬೆಂಗ್ಳೂರಲ್ಲಿ 10 ದಿನದಲ್ಲಿ 499 ಮಂದಿಯಲ್ಲಿ ಸೋಂಕು

ಕೋವಿಡ್ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಡಿಯಾಕ್ ಪ್ರೊಂಟಿಟ್ ವಿಭಾಗದಲ್ಲಿ 60 ಐಸಿಯು ಬೆಡ್‍ಗಳನ್ನು ಏರ್ಪಡಿಸಲಾಗಿದೆ. ಅತೀ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳ ಸೇವೆ ಆಸ್ಪತ್ರೆಯಲ್ಲಿ ದೊರೆಯಲಿದೆ. ವಿಮಾ ಯೋಜನೆಗಳನ್ನು ಅಳವಡಿಸಿಕೊಳ್ಳಲಾಗಿದೆ. ಜನಸಾಮಾನ್ಯರು ಬಳಸಿಕೊಳ್ಳಬಹುದು ಎಂದು ಪರಮೇಶ್ವರ್ ಮನವಿ ಮಾಡಿದ್ದಾರೆ.

heart

ಕಾರ್ಡಿಯಾಕ್ ಪ್ರೋಂಟಿಟ್ ಸಂಸ್ಥೆಯ ನಿರ್ದೇಶಕ ತಮೀಮ್ ಅಹಮದ್ ಮಾತನಾಡಿ, ಹಾರ್ಟ್ ಸೆಂಟರ್‍ನಲ್ಲಿ ಈವರೆಗೂ ಸುಮಾರು 27ಕ್ಕೂ ಹೆಚ್ಚು ತೆರೆದ ಹೃದಯ ಶಸ್ತ್ರಚಿಕಿತ್ಸೆ, 50ಕ್ಕೂ ಹೆಚ್ಚು ಆಂಜಿಯೋಪ್ಲಾಸ್ಟಿ, ಅಂಜಿಯೋಗ್ರಾಮ್ ಸೇರಿದಂತೆ ಇದುವರೆಗೂ ಸುಮಾರು 300ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಸಿದ್ಧಾರ್ಥ ಹಾರ್ಟ್ ಸೆಂಟರ್ 24 ಗಂಟೆಗಳ ತುರ್ತುನಿಗಾಘಟಕ, ಪ್ರಯೋಗಾಲಯಗಳು, ವಿಕಿರಣ ಘಟಕ, ಸಿಟಿ ಸ್ಕ್ಯಾನರ್, ಎಂ.ಆರ್.ಐ ಸ್ಕ್ಯಾನರ್ ಸೌಲಭ್ಯ ಒಳಗೊಂಡಿದೆ. ಪೂರ್ಣ ಪ್ರಮಾಣದ ರೋಗಪತ್ತೆ, ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ, ಶಾಶ್ವತ ಪೇಸ್ಮೇಕರ್ ಅಳವಡಿಕೆ, ವಾಲ್‍ವ್ಲೋಪ್ಲಾಸ್ಟಿ ಸೌಲಭ್ಯವೂ ಲಭ್ಯವಿದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಸಿಇಓ ಪಿ.ಕೆ.ಡಾ ದೇವದಾಸ್ ಮತ್ತು ಪ್ರಾಂಶುಪಾಲ ಡಾ. ಎ.ಜಿ.ಶ್ರೀನಿವಾಸಮೂರ್ತಿ ಭಾಗವಹಿಸಿದ್ದರು. ಇದನ್ನೂ ಓದಿ:ಕೊರೊನಾದಿಂದ ಮನೆಯವರು ಬರದೆ ಖಿನ್ನತೆ – ಕೈದಿಗಳಿಗೆ ಯೋಗ, ಧ್ಯಾನ ತರಬೇತಿ

Share This Article
Leave a Comment

Leave a Reply

Your email address will not be published. Required fields are marked *