ಭಯೋತ್ಪಾದಕರಿಂದ ಗುಂಡಿನ ದಾಳಿ – ಇಬ್ಬರು ಪೊಲೀಸರು ಸಾವು

Public TV
1 Min Read
kashmir encounter

ಶ್ರೀನಗರ: ಇಂದು ಬೆಳಗ್ಗೆ ಶ್ರೀನಗರದ ಹೊರವಲಯದಲ್ಲಿ ಭಯೋತ್ಪಾದಕರಿಂದ ನಡೆದ ದಾಳಿಯಲ್ಲಿ ಇಬ್ಬರು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮೃತಪಟ್ಟಿದ್ದಾರೆ.

ಶ್ರೀನಗರದ ನೌಗಮ್ ನಲ್ಲಿ ಪೊಲೀಸ್ ತಂಡದ ಮೇಲೆ ದಾಳೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ವೇಳೆ ಇಬ್ಬರು ಪೊಲೀಸರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರದ ಪೊಲೀಸರು, ನೌಗಮ್ ಬೈಪಾಸ್ ಬಳಿ ಪೊಲೀಸ್ ಗಸ್ತಿನಲ್ಲಿದ್ದಾಗ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ 3 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಇಬ್ಬರು ಹುತಾತ್ಮರಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ. ತನಿಖೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿ ಇರುವಾಗಲೇ ಈ ದಾಳಿ ನಡೆದಿದ್ದು, ನಾಳೆ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ಅಡ್ಡಿ ಆಗಬಾರದೆಂದು ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಿವೆ. ಮುಖ್ಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಶೇರ್-ಎ-ಕಾಶ್ಮೀರ ಕ್ರಿಕೆಟ್ ಕ್ರೀಡಾಂಗಣದ ಬಳಿ ಹೆಚ್ಚಿ ಭದ್ರತೆ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *