ಭಾಗವತ ಪದ್ಯಾಣ ಗೋವಿಂದ ಭಟ್ಟರಿಗೆ ‘ಶ್ರೀ ಕದ್ರಿ’ ಪ್ರಶಸ್ತಿ

Public TV
1 Min Read
Bhagavat Bhat

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ 5ನೇ ತಂಡದ ಪ್ರಧಾನ ಭಾಗವತ ಪದ್ಯಾಣ ಗೋವಿಂದ ಭಟ್ ಅವರು ‘ಶ್ರೀ ಕದ್ರಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಡಿ.27ರಂದು ಸಂಜೆ ಕದ್ರಿ ದೇವಸ್ಥಾನ ಬಳಿಯ ಮಂಜುನಾಥ ಕಾಲೋನಿಯ ಶ್ರೀಕದ್ರಿ ಪ್ರಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಗಣ್ಯರ ಸಮ್ಮುಖ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ ತಿಳಿಸಿದ್ದಾರೆ. ಪದ್ಯಾಣ ಗಣಪತಿ ಭಟ್- ಅದಿತಿ ಅಮ್ಮ ದಂಪತಿ ಪುತ್ರ 51 ವರ್ಷದ ಗೋವಿಂದ ಭಟ್ಟರು ಬಿ.ಕಾಂ. ಪದವೀಧರ. 29 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಸೇವೆ ಮಾಡುತ್ತಿದ್ದು, ಕಳೆದ 6 ವರ್ಷಗಳಿಂದ ಕಟೀಲು ಮೇಳದಲ್ಲಿ ಪ್ರಧಾನ ಭಾಗವತರಾಗಿದ್ದಾರೆ. ಮಾಂಬಾಡಿ ಸುಬ್ರಹ್ಮಣ್ಯ ಭಾಗವತರ ಶಿಷ್ಯರಾದ ಗೋವಿಂದ ಭಟ್ಟರನ್ನು ಕುರಿಯ ಶಾಸ್ತ್ರಿಗಳು, ಬೊಟ್ಟಿಕೆರೆ ಪೂಂಜರು ತಿದ್ದಿ ತೀಡಿದ್ದಾರೆ.

ಏಕಾದಶ ಸಂಭ್ರಮ: ಇದೇ ಸಂದರ್ಭ ಕಟೀಲು ಮೇಳದ 11ನೇ ವರ್ಷದ ಸೇವೆಯಾಟ ಶ್ರೀದೇವಿ ಲಲಿತೋಪಖ್ಯಾನ ಯಕ್ಷಗಾನ ಇಂದು ರಾತ್ರಿ ಮಂಜುನಾಥ ಕಾಲೋನಿ ಆವರಣದಲ್ಲಿ ನಡೆಯಲಿದೆ ಎಂದು ಆಯೋಜಕ ಕುಂಜತ್ತೋಡಿ ವಾಸುದೇವ ಭಟ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *