ಭಾನುವಾರ ಲಾಕ್‍ಡೌನ್ ಮುಂದುವರಿಯಲಿದೆ: ಸಚಿವ ಗೋಪಾಲಯ್ಯ

Public TV
1 Min Read
gopalaiah

ಹಾಸನ: ಭಾನುವಾರ ಎಂದಿನಂತೆ ಲಾಕ್‍ಡೌನ್ ಮುಂದುವರಿಯಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ನುಡಿದಂತೆ ನಡೆದ ನಾಯಕರಾಗಿದ್ದಾರೆ. ಕೊರೊನಾ ಸಮಯದಲ್ಲಿ ಪಡಿತರ ವಿತರಣೆಯಲ್ಲಿ ರಾಜ್ಯ ಸರ್ಕಾರ ಪ್ರಥಮ ಸ್ಥಾನದಲ್ಲಿದೆ. ಹಾಸನದಲ್ಲಿನ 7 ಖಾಸಗಿ ಆಸ್ಪತ್ರೆಯಲ್ಲಿ 290 ಬೆಡ್ ಮೀಸಲಿರಿಸಲಾಗಿದೆ. ಕೊರೊನಾ ರೋಗಿಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಆಗಸ್ಟ್ ನಿಂದಲೂ ಕೂಡ ಪ್ರತೀ ಭಾನುವಾರ ಲಾಕ್‍ಡೌನ್ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

h vishwanath

ಇದೇ ವೇಳೆ ಮಾಜಿ ಸಚಿವ, ಸಚಿವರಾಗುತ್ತಾರೆ ಎಂದು ತಿಳಿಸಿದ ಗೋಪಾಲಯ್ಯ, ವಿಶ್ವನಾಥ್ ಸಂಪುಟ ಸೇರ್ಪಡೆಯಾಗುವ ಸೂಚನೆ ನೀಡಿದ್ದಾರೆ. ಹಾಸನ ಜಿಲ್ಲೆಗೆ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತಾಳುತ್ತಿದೆ ಎಂಬ ಮಾಜಿ ಸಚಿವ ಹೆಚ್‍ಡಿ.ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿ, ಹಾಸನ ಜಿಲ್ಲೆಯಲ್ಲಿ ಸರ್ಕಾರ ಯಾವುದೇ ಮಲತಾಯಿ ಧೋರಣೆ ತಾಳುತ್ತಿಲ್ಲಾ ಎಂದು ಸ್ಪಷ್ಟನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *