Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದ ಸಂಕಷ್ಟದ ಸಮಯದಲ್ಲಿ ಸಹಾಯಹಸ್ತ ಚಾಚಲು ದೃಢ ಸಂಕಲ್ಪ ಮಾಡಿದ್ದೇವೆ: ಕಮಲಾ ಹ್ಯಾರಿಸ್

Public TV
Last updated: May 8, 2021 11:44 am
Public TV
Share
2 Min Read
Kamala Harris
SHARE

ನವದೆಹಲಿ: ಭಾರತದ ಸಂಕಷ್ಟದ ಸಮಯದಲ್ಲಿ ಸಹಾಯಹಸ್ತ ಚಾಚಲು ದೃಢ ಸಂಕಲ್ಪ ಮಾಡಿದ್ದೇವೆ ಎಂದು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ಸಂಕಷ್ಟದ ಸಮಯದಲ್ಲಿ ಭಾರತದೊಂದಿಗೆ ನಾವಿದ್ದೇವೆ ಎಂದು ಸುದೀರ್ಘವಾದ ಪತ್ರವನ್ನ ಕಮಲಾ ಹ್ಯಾರಿಸ್ ಬರೆದಿದ್ದಾರೆ.

ಹಲವು ವರ್ಷಗಳಿಂದ, ಇಂಡಿಯಾಸ್ಪೊರಾ ಮತ್ತು ಅಮೆರಿಕನ್ ಇಂಡಿಯಾ ಫೌಂಡೇಶನ್‍ನಂತಹ ಡಯಾಸ್ಪೋರಾ (ಭಾರತೀಯ ಸಮುದಾಯ) ಗುಂಪುಗಳು ಅಮೆರಿಕ ಮತ್ತು ಭಾರತದ ನಡುವೆ ಸೇತುವೆಗಳಾಗಿವೆ. ಅಲ್ಲದೆ, ಕಳೆದ ವರ್ಷ ನೀವು ಕೋವಿಡ್-19 ಪರಿಹಾರ ಕಾರ್ಯಗಳಿಗೆ ಮಹತ್ವದ ಕೊಡುಗೆಗಳನ್ನು ನೀಡಿದ್ದೀರಿ. ನಿಮ್ಮೆಲ್ಲಾ ಕೆಲಸಕ್ಕೆ ಧನ್ಯವಾದಗಳು.

Kamala Harris 1

ನಿಮ್ಮಲ್ಲಿ ಅನೇಕರಿಗೆ ತಿಳಿದಿರುವಂತೆ, ನನ್ನ ಕುಟುಂಬದ ಹಿಂದಿನ ತಲೆಮಾರುಗಳು ಭಾರತದಿಂದ ಬಂದಿವೆ. ನನ್ನ ತಾಯಿ ಭಾರತದಲ್ಲಿ ಹುಟ್ಟಿ ಬೆಳೆದವರು. ಇಂದಿಗೂ ನನ್ನ ಕುಟುಂಬದ ಅನೇಕ ಸದಸ್ಯರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಭಾರತದ ಕ್ಷೇಮವು ಅಮೆರಿಕಕ್ಕೆ ಅತ್ಯಂತ ಮುಖ್ಯವಾದ ವಿಷಯ.

ಭಾರತದಲ್ಲಿ ಕೋವಿಡ್-19 ಸೋಂಕುಗಳು ಮತ್ತು ಸಾವುಗಳ ಸಂಖ್ಯೆಯ ಹೆಚ್ಚಳವು ಅತ್ಯಂತ ದಾರುಣವಾದದ್ದು. ನಿಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಮನದಾಳದ ಸಂತಾಪಗಳು. ಭಾರತದ ಪರಿಸ್ಥಿತಿಯ ಭೀಕರ ಸ್ವರೂಪ ಸ್ಪಷ್ಟವಾದ ತಕ್ಷಣ ನಮ್ಮ ಆಡಳಿತವು ಕ್ಷಿಪ್ರ ಕ್ರಮಗಳನ್ನು ತೆಗೆದುಕೊಂಡಿದೆ.

Kamala Harris 3

ಏಪ್ರಿಲ್ 26, ಸೋಮವಾರ ನಮ್ಮ ಅಧ್ಯಕ್ಷರಾದ ಜೋ ಬೈಡೆನ್ ಅವರು ಪ್ರಧಾನಿಯವರೊಂದಿಗೆ ಮಾತನಾಡಿ ಬೆಂಬಲ ವ್ಯಕ್ತಪಡಿಸಿದರು. ಏಪ್ರಿಲ್ 30 ಶುಕ್ರವಾರದ ಹೊತ್ತಿಗೆ, ಅಮೆರಿಕದ ಸೇನೆ ಸದಸ್ಯರು ಮತ್ತು ನಾಗರಿಕರು ಆಗಲೇ ಪರಿಹಾರದ ಸಾಮಗ್ರಿಗಳ ವಿತರಣೆ ಕಾರ್ಯದಲ್ಲಿ ನಿರತರಾಗಿದ್ದರು.

ಈಗಾಗಲೇ ನಾವು ಮರುಪೂರಣ ಮಾಡಬಹುದಾದ ಆಮ್ಲಜನಕ ಸಿಲಿಂಡರ್‍ಗಳನ್ನು ಭಾರತಕ್ಕೆ ತಲುಪಿಸಿದ್ದೇವೆ. ಅಂತೆಯೇ ಆಮ್ಲಜನಕ ಸಾಂದ್ರಕಗಳನ್ನು ಕೂಡ ಕಳುಹಿಸಿಕೊಟ್ಟಿದ್ದೇವೆ, ಇನ್ನೂ ಹೆಚ್ಚಿನ ಸಹಾಯ ಬರಲಿದೆ. ಇದರ ಜೊತೆಗೆ ಎನ್95 ಮುಖಗವಸುಗಳನ್ನು ಕೂಡ ರವಾನೆ ಮಾಡಿದ್ದೇವೆ, ಇನ್ನಷ್ಟು ರವಾನೆಗೆ ಸಿದ್ಧವಾಗಿವೆ. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನಾವು ರೆಮ್‍ಡೆಸಿವಿರ್ ಗಳನ್ನು ತಲುಪಿಸಿದ್ದೇವೆ.

Kamala

ಏತನ್ಮಧ್ಯೆ, ಕೋವಿಡ್-19 ಲಸಿಕೆಗಳ ಪೇಟೆಂಟ್‍ಗಳನ್ನು ತೆಗೆದುಹಾಕಲು ನಮ್ಮ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದೇವೆ. ಇದರಿಂದ ಭಾರತ ಮತ್ತು ಇತರ ರಾಷ್ಟ್ರಗಳು ತಮ್ಮ ಜನರಿಗೆ ಹೆಚ್ಚು ವೇಗವಾಗಿ ಮತ್ತು ದಕ್ಷವಾಗಿ ಲಸಿಕೆ ನೀಡಲು ಸಹಾಯಕವಾಗುತ್ತದೆ. ಭಾರತ ಮತ್ತು ಅಮೆರಿಕ ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್-19 ಪ್ರಕರಣಗಳನ್ನು ಹೊಂದಿವೆ.

ಈ ಸಾಂಕ್ರಾಮಿಕ ರೋಗದ ಆರಂಭದಲ್ಲಿ, ನಮ್ಮ ಆಸ್ಪತ್ರೆಗಳು ತುಂಬಿತುಳುಕುತ್ತಿದ್ದಾಗ ಭಾರತ ನಮ್ಮ ನೆರವಿಗೆ ಬಂದಿತ್ತು. ಇಂದು ಭಾರತದ ಸಂಕಷ್ಟದ ಸಮಯದಲ್ಲಿ ಸಹಾಯಹಸ್ತ ಚಾಚಲು ನಾವು ದೃಢ ಸಂಕಲ್ಪ ಮಾಡಿದ್ದೇವೆ.

KAMALA

ನಾವು ಇದನ್ನು ಭಾರತದ ಸ್ನೇಹಿತರಾಗಿ, ಕ್ವಾಡ್‍ನ ಸದಸ್ಯರಾಗಿ ಮತ್ತು ಜಾಗತಿಕ ಸಮುದಾಯದ ಭಾಗವಾಗಿ ಮಾಡುತ್ತಿದ್ದೇವೆ. ನಾವು ರಾಷ್ಟ್ರಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಿದರೆ ಈ ಕಷ್ಟದ ಸಮಯವನ್ನು ದಾಟುವುದು ನಿಶ್ಚಿತ.

TAGGED:americaCorona VirusindiaKamala HarrisKovid19Public TVಅಮೆರಿಕಕಮಲಾ ಹ್ಯಾರಿಸ್‍ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಭಾರತ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
2 hours ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
2 hours ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
2 hours ago
01 NEW 1
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 1

Public TV
By Public TV
2 hours ago
02 NEW
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 2

Public TV
By Public TV
2 hours ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?