Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ ಚೀನಾ ಗಡಿಯಲ್ಲಿ ಗುಂಡಿನ ಕಾಳಗ ನಡೆಯಲ್ಲ ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಭಾರತ ಚೀನಾ ಗಡಿಯಲ್ಲಿ ಗುಂಡಿನ ಕಾಳಗ ನಡೆಯಲ್ಲ ಯಾಕೆ?

Karnataka

ಭಾರತ ಚೀನಾ ಗಡಿಯಲ್ಲಿ ಗುಂಡಿನ ಕಾಳಗ ನಡೆಯಲ್ಲ ಯಾಕೆ?

Public TV
Last updated: June 17, 2020 1:15 pm
Public TV
Share
3 Min Read
india china ladakh border conflict
SHARE

ʼಭಾರತ ಮತ್ತು ಪಾಕಿಸ್ತಾನ ಮಧ್ಯೆ ಗುಂಡಿನ ಕಾಳಗʼ, ʼಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿʼ ಈ ರೀತಿಯ ಹೆಡ್‌ಲೈನ್‌ಗಳನ್ನು ನೀವು ಓದಿರಬಹುದು. ಆದರೆ ʼಭಾರತ ಚೀನಾ ನಡುವೆ ಗುಂಡಿನ ದಾಳಿʼ ಈ ರೀತಿಯ ವರದಿಗಳು ಪ್ರಕಟವಾಗುವುದಿಲ್ಲ. ಯಾಕೆ ಈ ಗುಂಡಿನ ದಾಳಿ ನಡೆಯುವುದಿಲ್ಲ ಎಂಬ ಪ್ರಶ್ನೆ ಏಳುವುದು ಸಹಜ. ಈ ಪ್ರಶ್ನೆಗೆ ಇತಿಹಾಸದಲ್ಲಿ ಉತ್ತರ ಸಿಗುತ್ತದೆ.

1967 ರಲ್ಲಿ ನಾಥು ಲಾ ಮತ್ತು ಚೋ ಲಾ ಬಳಿ ನಡೆದ ಭಾರತ ಮತ್ತು ಚೀನಾ ಸೈನಿಕರ ಸಂಘರ್ಷದಲ್ಲಿ ಭಾರತದ 88 ಮತ್ತು ಚೀನಾದ 340 ಸೈನಿಕರು ಸಾವನ್ನಪ್ಪಿದರು. ಇದಾದ ಬಳಿಕ 1975 ರಲ್ಲಿ ಅರುಣಾಚಲ ಪ್ರದೇಶದ ತುಲುಂಗ್ ಲಾ ಪಾಸ್‌ ಗಡಿ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ಅಸ್ಸಾಂ ರೈಫಲ್ಸ್ ನಾ ನಾಲ್ಕು ಯೋಧರನ್ನು ಚೀನಾ ಸೇನೆ ಹತ್ಯೆ ಮಾಡಿತ್ತು. ಇದೆ ಕೊನೆಯ ಬಾರಿ ನಡೆದ ಗುಂಡಿನ ದಾಳಿ. ಇದಾದ ಬಳಿಕ ಇಲ್ಲಿಯವರೆಗೆ ಭಾರತ ಮತ್ತು ಚೀನಾ ನಡುವೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ.

india china amry

ಭಾರತ ಮತ್ತು ಚೀನಾ ನಡುವೆ ಅಂತಾರಾಷ್ಟ್ರೀಯ ಗಡಿ ರೇಖೆ ಇಲ್ಲದ ಕಾರಣ ಗಡಿಯಲ್ಲಿ ಈ ರೀತಿ ಕಿತ್ತಾಟಗಳು ನಡೆಯುತಿತ್ತು. ಎರಡು ದೇಶಗಳ ಗಡಿಯನ್ನು ವಾಸ್ತವ ಗಡಿ ರೇಖೆಯಿಂದ(ಎಲ್‌ಎಸಿ – ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಗುರುತಿಸಲಾಗಿದೆ. ಆದರೆ ಹಲವು ಭಾಗಗಳಲ್ಲಿ ಭಾರತ ಮತ್ತು ಚೀನಾದ ನಡುವಿನ ಗಡಿಗಳು ನಿರ್ಧಾರವಾಗಿಲ್ಲ. ಹೀಗಾಗಿ ಹಲವು ಬಾರಿ ಎರಡು ಕಡೆಯ ಸೈನಿಕರು ಗಡಿಯಲ್ಲಿ ಪಹರೆ ಕಾಯುತ್ತಿದ್ದಾಗ ಕಿತ್ತಾಟಗಳು ನಡೆಯುತ್ತಿದ್ದವು. ಎರಡು ಕಡೆಯಿಂದಲೂ ಪ್ರತಿರೋಧಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ 1993, 1996ರಲ್ಲಿ ಭಾರತ ಮತ್ತು ಚೀನಾ ನಡುವೆ ಒಪ್ಪಂದ ನಡೆಯಿತು.

1993ರ ಒಪ್ಪಂದದ ಪ್ರಕಾರ ಎಲ್‌ಎಸಿ ದಾಟಿ ಯಾರೇ ಒಳಬಂದರೂ ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಬೇಕು. 1996ರ ಪ್ರಕಾರ ಎಲ್‌ಎಸಿಯ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಎರಡು ದೇಶಗಳು ಯಾವುದೇ ಸ್ಫೋಟ ನಡೆಸಬಾರದು, ಗುಂಡಿನ ದಾಳಿ ನಡೆಸಕೂಡದು ಎಂಬ ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ಭಾರತ ಚೀನಾ ಗಡಿಯಲ್ಲಿ ಸೈನಿಕರು ಈ ಒಪ್ಪಂದಕ್ಕೆ ಬದ್ಧವಾಗಿದ್ದಾರೆ. ಗುಂಡಿನ ದಾಳಿಯ ಬದಲು ಪರಸ್ಪರ ಕಲ್ಲು, ದೊಣ್ಣೆಗಳಿಂದ ಬಡಿದಾಡಿಕೊಳ್ಳುತ್ತಾರೆ.

india china 1

ಏನಿದು ಎಲ್‍ಎಸಿ?
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಪದೇ ಪದೇ ಗುಂಡಿನ ಚಕಮಕಿ ಬಂದಾಗ ಎಲ್‍ಒಸಿ(ಗಡಿ ನಿಯಂತ್ರಣ ರೇಖೆ ಅಥವಾ ಲೈನ್ ಆಫ್ ಕಂಟ್ರೋಲ್) ಪದ ಬರುತ್ತದೆ. ಭಾರತ ಮತ್ತು ಪಾಕಿಸ್ತಾನವನ್ನು ಜಮ್ಮು ಕಾಶ್ಮೀರದಲ್ಲಿ ಬೇರ್ಪಡಿಸುವ ಅಂತಾರಾಷ್ಟ್ರೀಯ ಗಡಿಯನ್ನು ಎಲ್‍ಒಸಿ ಎಂದು ಕರೆಯಲಾಗುತ್ತದೆ. ಅದೇ ರೀತಿಯಾಗಿ ಈ ಹಿಂದೆ ರಾಜ್ಯವಾಗಿದ್ದ ಜಮ್ಮು ಕಾಶ್ಮೀರದಲ್ಲಿ ಭಾರತ ಮತ್ತು ಚೀನಾವನ್ನು ಬೇರ್ಪಡಿಸುವ ಗಡಿಯನ್ನು ಎಲ್‍ಎಸಿ(ಗಡಿ ವಾಸ್ತವಿಕ ನಿಯಂತ್ರಣ ರೇಖೆ ಅಥವಾ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್) ಎಂದು ಕರೆಯಲಾಗುತ್ತದೆ. 1962ರಲ್ಲಿ ಭಾರತ ಚೀನಾ ನಡುವೆ ಯುದ್ಧ ನಡೆಯಿತು. ಈ ಯುದ್ಧದ ಬಳಿಕ ಮುಂದೆ ಎರಡು ರಾಷ್ಟ್ರಗಳು ತಮ್ಮ ಭೂ ಪ್ರದೇಶವನ್ನು ಗುರುತಿಸಲು ಎಲ್‍ಎಸಿಯನ್ನು ಬಳಸುತ್ತಿವೆ. ಈ ಎಲ್‍ಎಸಿ ಅಂತರಾಷ್ಟ್ರೀಯ ಗಡಿ ರೇಖೆಯಲ್ಲ. ಈ ಲಡಾಖ್ ಪೂರ್ವ ಭಾಗದಲ್ಲಿರುವ ಅಕ್ಸಾಯ್ ಚೀನಾ ನಮ್ಮದು ಎನ್ನುವುದು ಭಾರತದ ವಾದ.

LADAKH INDIAN CHINA

ಸಂಘರ್ಷ ಶುರುವಾಗಿದ್ದು ಹೇಗೆ?
ಗಾಲ್ವಾನ್‌ ನದಿ ಕಣಿವೆಯಲ್ಲಿ 5 ವಾರಗಳಿಂದ ನಡೆಯುತ್ತಿದ್ದ ಕಿತ್ತಾಟ ಮಾತುಕತೆಯ ಮೂಲಕ ಪರಿಹಾರ ಮಾಡಲು ಎರಡು ದೇಶಗಳು ನಿರ್ಧರಿಸಿತ್ತು. ಹೀಗಾಗಿ ಸೋಮವಾರ ಚೀನಾ ಸೈನಿಕರು ಜಾಗದಿಂದ ಹಿಂದಕ್ಕೆ ಸರಿಯಲು ಮುಂದಾಗಿದ್ದರು. ಗಾಲ್ವಾನ್ ನದಿ ಭೂಪ್ರದೇಶ ಬಳಿಯ ಪೆಟ್ರೋಲಿಂಗ್ ಪಾಯಿಂಟ್ 14ರ ಬಳಿ ಸ್ಥಾಪಿಸಲಾದ ಪೀಪಲ್ಸ್ ಲಿಬರೇಶನ್ ಸೇನೆ ಅಕ್ರಮವಾಗಿ ನಿರ್ಮಿಸಿದ್ದ ಟೆಂಟ್ ಅನ್ನು ಭಾರತೀಯ ಸೇನೆ ತೆರವು ಮಾಡಲು ಮುಂದಾಗುತ್ತಿದ್ದಂತೆ ಘರ್ಷಣೆ ಆರಂಭವಾಯಿತು.

ಪಾಯಿಂಟ್ 14 ರ ಮೇಲಿನ ಎತ್ತರ ಪ್ರದೇಶದಿಂದ ಕಲ್ಲು ತೂರುವ ಮೂಲಕ ಚೀನಾ ಸೈನಿಕರು ಮೊದಲು ದಾಳಿ ಮಾಡಿದರು. ಬಳಿಕ ಕಬ್ಬಣದ ಸರಳುಗಳ ಮೂಲಕ ಹಲ್ಲೆ ಮಾಡಿದ್ದಾರೆ. ಚೀನಾದ ಕುತಂತ್ರಕ್ಕೆ ಬಗ್ಗದ ಭಾರತೀಯ ಸೈನಿಕರು ಸರಿಯಾಗಿಯೇ ತಿರುಗೇಟು ನೀಡಿದರು. ಈ ವೇಳೆ ಸೈನಿಕರು ಪರಸ್ಪರ ಗು‌ಪಾಗಿ ಬಡಿದಾಡಿಕೊಂಡಿದ್ದಾರೆ. ಕಳೆದ ವಾರ ಲೆಫ್ಟಿನೆಂಟ್ ಕಮಾಂಡರ್ ಮಟ್ಟದಲ್ಲಿ ನಡೆದ ಸಭೆಯಲ್ಲಿ ಈ ಸ್ಥಳದಲ್ಲಿ ಹಾಕಿದ್ದ ಎರಡು ಸೇನೆಯ ಟೆಂಟ್‌ಗಳನ್ನು ತೆರವು ಮಾಡಲು ಮಾತುಕತೆ ನಡೆದಿತ್ತು.

india china map 2

ಮಂಗಳವಾರ ಈ ಸುದ್ದಿ ಆರಂಭದಲ್ಲಿ ಬಂದಾಗ ಗುಂಡಿನ ದಾಳಿ ನಡೆದಿದೆ. ಎರಡು ಕಡೆ ಸಾವು ನೋವು ಸಂಭವಿಸಿದೆ ಎಂಬ ಸುದ್ದಿಗಳು ಪ್ರಕಟವಾಗಿತ್ತು. ಕೂಡಲೇ ಭಾರತೀಯ ಸೇನೆ ಸ್ಪಷ್ಟನೆ ನೀಡಿ ಎರಡು ಕಡೆಯ ಸೇನೆ ಹಿಂದಕ್ಕೆ ಸರಿಯುವಾಗ ಈ ಸಂಘರ್ಷ ನಡೆದಿದೆ ಎಂಧು ತಿಳಿಸಿತ್ತು.

TAGGED:Agreementchinaindiaindian armyLACLadakhPLAಗಾಲ್ವಾನ್‌ಚೀನಾಪಿಎಲ್‌ಎಭಾರತಭಾರತೀಯ ಸೇನೆಲಡಾಖ್
Share This Article
Facebook Whatsapp Whatsapp Telegram

Cinema news

Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows

You Might Also Like

HR Job
Bengaluru City

ನಾನ್ ಕನ್ನಡಿಗ ಹೆಚ್‌ಆರ್ ಕೆಲಸಕ್ಕೆ ಬೇಕು – ಕನ್ನಡಿಗರನ್ನ ಕೆರಳಿಸಿದ ಬೆಂಗಳೂರಿನ ಖಾಸಗಿ ಕಂಪನಿ

Public TV
By Public TV
45 minutes ago
Namma Metro Purple Line
Bengaluru City

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ

Public TV
By Public TV
53 minutes ago
girl dating app
Bengaluru City

AI ಯುವತಿಯ ಮೋಹಕ್ಕೆ ಬಿದ್ದು ಬಟ್ಟೆ ಬಿಚ್ಚಿ ಪೆಚ್ಚಾದ ಯುವಕ – 1.53 ಲಕ್ಷ ಲೂಟಿ

Public TV
By Public TV
1 hour ago
Yathindra Siddaramaiah Class To Irrigation Officer Mysuru
Districts

ಜನಸಂಪರ್ಕ ಸಭೆ ಬೇಕಾಬಿಟ್ಟಿ ಮಾಡ್ತಿದ್ದೀವಾ? – ನೀರಾವರಿ ಇಲಾಖೆ ಅಧಿಕಾರಿಗೆ ಯತೀಂದ್ರ ಕ್ಲಾಸ್

Public TV
By Public TV
2 hours ago
SSLC preparatory exam question paper leak Case 8 people arrested
Districts

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌- 8 ಮಂದಿ ಅರೆಸ್ಟ್‌

Public TV
By Public TV
3 hours ago
goraguntepalya nayandahalli Ring Road flyover is becoming an accident zone 1
Bengaluru City

ಆಕ್ಸಿಡೆಂಟ್ ವಲಯವಾಗುತ್ತಿದೆ ಬೆಂಗಳೂರಿನ ರಿಂಗ್‌ ರೋಡ್‌ ಫ್ಲೈಓವರ್!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?