ಭಾರೀ ಮಳೆ- ಜಮೀನಿನ ಕೊಟ್ಟಿಗೆಯಲ್ಲಿ ಸಿಲುಕಿದ್ದ ಆಕಳು, ಕರು ರಕ್ಷಣೆ

Public TV
1 Min Read
hvr cow rescue

ಹಾವೇರಿ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ನಿರಂತರ ಮಳೆಯಿಂದಾಗಿ ಧರ್ಮಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹ ಉಂಟಾಗಿ ಜಮೀನಿನ ಕೊಟ್ಟಿಗೆಯಲ್ಲಿ ಸಿಲುಕಿದ್ದ ಒಂದು ಆಕಳು ಮತ್ತು ಕರುವನ್ನು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ನಡೆದಿದೆ.

hvr rescue 2 1

ಗ್ರಾಮದ ರೈತ ಸಿರಾಜ್ ಹಳೆಕೋಟಿ ಅವರಿಗೆ ಸೇರಿದ ಆಕಳು ಮತ್ತು ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ನೀರಿನಲ್ಲಿ ಬೋಟ್ ಮೂಲಕ ತೆರಳಿ ರಕ್ಷಣೆ ಮಾಡಿದ್ದಾರೆ. ನೀರಿನಿಂದ ಹೊರಬಂದ ತಕ್ಷಣ ಆಕಳು ಮತ್ತು ಕರು ಮನೆಯತ್ತ ಓಡಿದವು.

hvr rescue 2 2

ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *