Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್‍ಡಿಕೆ

Bengaluru City

ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್‍ಡಿಕೆ

Public TV
Last updated: September 14, 2020 8:43 am
Public TV
Share
3 Min Read
hdk 5
SHARE

– ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು
– ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದಿದ್ದಾರೆ.

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.
1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು.
2/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ.14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು.
3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು ಎಂದು ಒತ್ತಾಹಿಸಿದ್ದಾರೆ.

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು.
4/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ ಎಂದು ಹೇಳಿದ್ದಾರೆ.

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು.
5/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದ ಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‍ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಟ್ವೀಟ್ ಮಾಡಿ ಪ್ರಶ್ನೆ ಮಾಡಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ.
6/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು ಎಂದು ಕಿಡಿಕಾರಿದ್ದಾರೆ.

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‌ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು.
7/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು.
8/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ. ಜೈ ಕನ್ನಡಾಂಬೆ ಜೈ ಭಾರತಾಂಬೆ ಎಂದು ಹೆಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.
9/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

TAGGED:bengaluruHindi DivaskannadaKumaraswamyPublic TVtweetಕನ್ನಡಕುಮಾರಸ್ವಾಮಿಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಹಿಂದಿ ದಿವಸ್
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Thawar Chand Gehlot Siddaramaiah
Bengaluru City

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

Public TV
By Public TV
24 minutes ago
NAGENDRA
Bengaluru City

ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ

Public TV
By Public TV
47 minutes ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
50 minutes ago
CM Ponnanna
Bengaluru City

ರಾಜ್ಯಪಾಲರು 100% ಅಧಿವೇಶನಕ್ಕೆ ಬರ್ತಾರೆ, ಭಾಷಣ ಓದುತ್ತಾರೆ: ಪೊನ್ನಣ್ಣ ವಿಶ್ವಾಸ

Public TV
By Public TV
57 minutes ago
Karachi Fire
Latest

ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ದುರಂತ – ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆ; ಬೆಚ್ಚಿಬಿದ್ದ ಪೊಲೀಸ್ರು!

Public TV
By Public TV
1 hour ago
Bike Showroom bengaluru
Bengaluru City

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?