Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್‍ಡಿಕೆ

Public TV
Last updated: September 14, 2020 8:43 am
Public TV
Share
3 Min Read
hdk 5
SHARE

– ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು
– ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದಿದ್ದಾರೆ.

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.
1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು.
2/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ.14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು.
3/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು ಎಂದು ಒತ್ತಾಹಿಸಿದ್ದಾರೆ.

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು.
4/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ ಎಂದು ಹೇಳಿದ್ದಾರೆ.

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು.
5/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದ ಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‍ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಟ್ವೀಟ್ ಮಾಡಿ ಪ್ರಶ್ನೆ ಮಾಡಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ.
6/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು ಎಂದು ಕಿಡಿಕಾರಿದ್ದಾರೆ.

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‌ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು.
7/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು.
8/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ. ಜೈ ಕನ್ನಡಾಂಬೆ ಜೈ ಭಾರತಾಂಬೆ ಎಂದು ಹೆಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.
9/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 14, 2020

TAGGED:bengaluruHindi DivaskannadaKumaraswamyPublic TVtweetಕನ್ನಡಕುಮಾರಸ್ವಾಮಿಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಹಿಂದಿ ದಿವಸ್
Share This Article
Facebook Whatsapp Whatsapp Telegram

Cinema Updates

ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
9 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
11 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
15 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
15 hours ago

You Might Also Like

Meghalaya Honeymoon
Latest

ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Public TV
By Public TV
4 hours ago
Madhu Bangarappa
Bagalkot

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಫೇಶಿಯಲ್ ಅಟೆಂಡೆನ್ಸ್ : ಮಧು ಬಂಗಾರಪ್ಪ

Public TV
By Public TV
4 hours ago
01 6
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-1

Public TV
By Public TV
4 hours ago
02 7
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-2

Public TV
By Public TV
4 hours ago
03 6
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-3

Public TV
By Public TV
4 hours ago
Nandi Hills 2
Chikkaballapur

ನಂದಿಬೆಟ್ಟಕ್ಕೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?