Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಭೂಮಿಯಲ್ಲಿ ಹುದುಗಿ ಹೋಯ್ತು 11ನೇ ಶತಮಾನದ ಶಿವನ ದೇವಾಲಯ

Public TV
Last updated: February 27, 2021 10:20 pm
Public TV
Share
2 Min Read
kwr shiva temple
SHARE

ಕಾರವಾರ: ಕರಾವಳಿಯಲ್ಲಿ ಕಳೆದ ಎರಡು ವರ್ಷದಿಂದ ಸುರಿದ ಬಾರಿ ಮಳೆ ಸಾಕಷ್ಟು ಅನಾಹುತವನ್ನೇನೋ ತಂದಿತ್ತು. ಈಗ ಇತಿಹಾಸದ ಗತ ವೈಭವ ಸಾರುವ 11ನೇ ಶತಮಾನದ ಕಲ್ಯಾಣಿ ಚಾಲುಕ್ಯರ ಕಾಲದ ಪುರಾತನ ಶಿವನ ಶಿಲಾ ದೇವಸ್ಥಾನಗಳು ಭೂಮಿಯಲ್ಲಿ ಹುದುಗಿ ಹೋಗಿದ್ದು, ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2021 02 27 at 9.40.28 PM

ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಾರುಗದ್ದೆ ಗ್ರಾಮದಲ್ಲಿ 11ನೇ ಶತಮಾನದ ಕಲ್ಯಾಣಿ ಚಾಲುಕ್ಯರು ತಮ್ಮ ಆಡಳಿತಾವಧಿಯಲ್ಲಿ ನಾಲ್ಕು ಶಿವಾಲಯವನ್ನು ನಿರ್ಮಿಸಿದ್ದು, ಇದರಲ್ಲಿ ಒಂದು ಬಾದಾಮಿಯಲ್ಲಿರುವ ದೇವಸ್ಥಾನದಂತೆ ಶಿಲಾಮಯವಾಗಿದೆ. ಇಲ್ಲಿನ ಕೆತ್ತನೆಗಳು ಮನೋಜ್ಞವಾಗಿದ್ದು, ಪ್ರತಿ ಕಲ್ಲುಗಳಲ್ಲಿ ಮೂಡಿರುವ ಶಿವ, ವೀರಭದ್ರ, ದುರ್ಗೆ ಸೇರಿದಂತೆ ಹಲವು ಶಿಲಾ ಕಲಾಕೃತಿಗಳಿವೆ.

WhatsApp Image 2021 02 27 at 9.40.26 PM

ಕಂಬಗಳು ಶಿಲಾಮಯವಾಗಿದ್ದು, ಕಲ್ಯಾಣಿ ಚಾಲಿಕ್ಯರ ಶೈಲಿಯ ಈ ದೇವಸ್ಥಾನ ಎಂತಹವರನ್ನೂ ಮನಸೂರೆಗೊಳ್ಳುತ್ತದೆ. ಆದರೆ ಕಳೆದ ಎರಡು ವರ್ಷದಿಂದ ಸುರಿದ ಭಾರೀ ಮಳೆ ಶಿಲಾಮಯ ದೇವಸ್ಥಾನದ ಜೊತೆ ಪುರಾತನ ನಾಲ್ಕು ದೇವಸ್ಥಾನದವನ್ನು ಸಂಪೂರ್ಣ ನುಂಗಿದೆ. ಹಿಂದೆ ಸುರಿದ ಅಬ್ಬರದ ಮಳೆ ನೀರಿಗೆ ಇಡೀ ದೇವಸ್ಥಾನದ ಅರ್ಧ ಭಾಗ ಮಣ್ಣಿನಿಂದ ಮುಚ್ಚಿಹೋಗಿದೆ.

WhatsApp Image 2021 02 27 at 9.40.25 PM

ಇತಿಹಾಸಕಾರ ಲಕ್ಷ್ಮೀಶ್ ಸೋಂದಾ ಅವರ ಪ್ರಕಾರ ಈ ದೇವಸ್ಥಾನ 11ನೇ ಶತಮಾನದ್ದಾಗಿದ್ದು, ಇವುಗಳ ಉತ್ಕಲನ ನಡೆಸಿದರೆ ಹಲವು ವಿಶೇಷ ಮಾಹಿತಿಗಳು ಲಭಿಸುತ್ತವೆ. ಈ ದೇವಸ್ಥಾನದ ಸುತ್ತ ಅಗ್ರಹಾರ ಹಾಗೂ ಹಿಂದೆ ಜನವಸತಿ ಇದ್ದ ಕುರುಹುಗಳಿದ್ದು, ಕಲ್ಯಾಣಿ ಚಾಲುಕ್ಯರ ಕಾಲದ ಗತವೈಭವವನ್ನು ಸಾರುತ್ತವೆ. ಆದರೆ ಇಷ್ಟೊಂದು ಮಹತ್ವ ಇರುವ ಈ ದೇವಸ್ಥಾನ ಈಗ ಹಾಳು ಬಿದ್ದಿದೆ.

WhatsApp Image 2021 02 27 at 9.40.29 PM

ಪ್ರವಾಹ ಇಲ್ಲಿನ ಹಲವು ವಿಗ್ರಹಗಳನ್ನು ಕೊಚ್ಚಿಕೊಂಡು ತನ್ನೊಂದಿಗೆ ತೆಗೆದುಕೊಂಡು ಹೋದ್ರೆ, ಹಲವು ಮಣ್ಣಿನಲ್ಲಿ ಮುಚ್ಚಿಹೋಗಿವೆ. ಶಿವರಾತ್ರಿ ಸೇರಿದಂತೆ ವಿಶೇಷ ದಿನಗಳಲ್ಲಿ ಈ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಗುತಿತ್ತು. ಆದರೆ ಕಳೆದ ಎರಡು ವರ್ಷದಿಂದ ಸುರಿದ ಅಬ್ಬರದ ಮಳೆಯಿಂದಾಗಿ ಮಾರು ದೂರದಲ್ಲಿ ಇರುವ ಹೊಳೆಯ ನೀರು ಹಾಗೂ ಗುಡ್ಡದಿಂದ ಕೊಚ್ಚಿ ಬಂದ ಮಣ್ಣಿನ ಮಡ್ಡಿಯಿಂದಾಗಿ ಎಲ್ಲವೂ ಮುಚ್ಚಿಹೋಗಿದೆ. ಜೊತೆಗೆ ಹಲವು ವಿಗ್ರಹಗಳು ನೀರಿನಲ್ಲಿ ತೇಲಿಹೋಗಿದ್ದು ಶಿಲೆಗಳು ಹಲವು ಭಾಗದಲ್ಲಿ ಕುಸಿದು ಬಿದ್ದಿವೆ.

WhatsApp Image 2021 02 27 at 9.40.24 PM 1

ಗ್ರಾಮಾದ ಜನ ಪುರಾತತ್ವ ಇಲಾಖೆ ಹಾಗೂ ಮುಜರಾಯಿ ಇಲಾಖೆಗೆ ಮನವಿ ಮಾಡಿ ಇವುಗಳನ್ನು ರಕ್ಷಿಸಿ, ಈ ಪ್ರದೇಶವನ್ನು ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕು. ಸಾಮಾಜಿಕವಾಗಿ ಹಿಂದುಳಿದ ಗ್ರಾಮದ ಅಭಿವೃದ್ಧಿ ಮಾಡಬೇಕು ಎಂದು ಕಳೆದ ಒಂದು ವರ್ಷದಿಂದ ಪತ್ರ ಹೋರಾಟ ಮಾಡುತಿದ್ದಾರೆ.

WhatsApp Image 2021 02 27 at 9.40.24 PM

ಇವುಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಪುರಾತತ್ವ ಇಲಾಖೆ ಹಾಗೂ ಮುಜರಾಯಿ ಇಲಾಖೆ ಜಾಣ ಕಿವುಡುತನ ತೋರಿಸಿದೆ. ಇದರಿಂದಾಗಿ ಪುರಾಣ ಪ್ರಸಿದ್ಧ ಗೋಕರ್ಣದಂತೆ ಪ್ರಸಿದ್ದಿಯಾಗಬೇಕಿದ್ದ ಈ ಶಿವನ ದೇವಾಲಯ ಭೂಮಿ ಪಾಲಾಗಿ ಹೋಗುತ್ತಿದೆ. ಸದ್ಯ ಸಂಪೂರ್ಣ ಜೀರ್ಣಾವಸ್ಥೆ ತಲುಪಿರುವ ಈ ದೇವಸ್ಥಾನ ಮೊದಲಿನಂತಾಗಬೇಕು ಎನ್ನುವುದು ಗ್ರಾಮದ ಜನರ ಆಶಯವಾಗಿದೆ.

WhatsApp Image 2021 02 27 at 9.40.31 PM

ಇತಿಹಾಸ ಸ್ಮಾರಕವನ್ನು ರಕ್ಷಿಸುವ ಹೊಣೆ ಪುರಾತತ್ವ ಇಲಾಖೆಯದ್ದು. ಆದರೆ ಗ್ರಾಮಸ್ತರೇ ಈ ದೇವಸ್ಥಾನವನ್ನು ರಕ್ಷಿಸಿ ಜೀರ್ಣೋದ್ಧಾರ ಮಾಡುವಂತೆ ಮನವಿ ಮಾಡಿದರೂ, ಇಲಾಖೆಯ ಅಧಿಕಾರಿಗಳು ಮಾತ್ರ ಇತ್ತ ಸುಳಿದಿಲ್ಲ.

TAGGED:Archaeological DepartmentPublic TVshivatempleTourism DepartmentUttara Kannadaಉತ್ತರ ಕನ್ನಡದೇವಸ್ಥಾನಪಬ್ಲಿಕ್ ಟಿವಿಪುರಾತತ್ವ ಇಲಾಖೆಪ್ರವಾಸೋದ್ಯಮ ಇಲಾಖೆಶಿವ
Share This Article
Facebook Whatsapp Whatsapp Telegram

Cinema Updates

Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
36 minutes ago
disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
4 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
5 hours ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
6 hours ago

You Might Also Like

Abhimanyu Easwaran
Cricket

ಇಂಗ್ಲೆಂಡ್‌ ಪ್ರವಾಸಕ್ಕೆ ಟೀಂ ಇಂಡಿಯಾ ಎ ತಂಡ ಪ್ರಕಟ

Public TV
By Public TV
11 minutes ago
Chhattisgarh Current
Latest

ಛತ್ತೀಸ್‌ಗಢದ 17 ನಕ್ಸಲ್ ಪೀಡಿತ ಗ್ರಾಮಗಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

Public TV
By Public TV
49 minutes ago
celebi cargo turkey
Court

Boycott Turkey| ಕೇಂದ್ರದ ವಿರುದ್ಧ ಕೋರ್ಟ್‌ ಮೊರೆ ಹೋದ ಸೆಲಿಬಿ

Public TV
By Public TV
1 hour ago
BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
2 hours ago
D K Shivakumar 2
Districts

ವಿಪಕ್ಷದವರು ಕ್ವಾರ್ಟರ್ ಅಲ್ಲ, ಫುಲ್ ಬಾಟಲ್ ಆದ್ರೂ ಹೇಳಲಿ ನಾವು ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

Public TV
By Public TV
2 hours ago
Shobha Karandlaje
Dharwad

ಕಾಂಗ್ರೆಸ್ ಅವಧಿಯಲ್ಲಿ ದೇಶದ ರಕ್ಷಣಾ ಕ್ಷೇತ್ರ ಬಲಪಡಿಸಿಲ್ಲ: ಶೋಭಾ ಕರಂದ್ಲಾಜೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?