ಮಂಗಳವಾರದಿಂದ ಕೊರೊನಾ ರಿಪೋರ್ಟ್ ಸಿಗೋದು ಡೌಟ್!

Public TV
2 Min Read
HEALTH

ಬೆಂಗಳೂರು: ಕೊರೊನಾ ಮಹಾಸ್ಫೋಟದ ನಡುವೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಈ ಮೂಲಕ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಹೌದು. ಮಂಗಳವಾರದಿಂದ ಕೊರೊನಾ ವರದಿ ಸೇರಿದಂತೆ ಯಾವುದೇ ಹೆಲ್ತ್ ರಿಪೋರ್ಟ್ ಸಿಗೋದು ಡೌಟು. ಈ ಸಂಬಂಧ ಸರ್ಕಾರಿ ವೈದ್ಯರ ಸಂಘ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

doctors

ಯಾವುದೇ ರೀತಿಯ ಆರೋಗ್ಯ ಸೇವೆಯಲ್ಲಿ ಕೆಲಸಗಳಲ್ಲಿ ತೊಡಗಿಕೊಳ್ಳದಿರಲು ವೈದ್ಯರು ನಿರ್ಧಾರ ಮಾಡಿದ್ದಾರೆ. ಹೆಲ್ತ್ ರಿಪೋರ್ಟ್ ನೀಡದೇ ಆಸ್ಪತ್ರೆಗಳನ್ನ ಕ್ಲೋಸ್ ಮಾಡಲು ರಾಜ್ಯ ಸರ್ಕಾರಿ ವೈದ್ಯರ ಸಂಘದಿಂದ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನ ಹಾಗೂ ಮಲೇರಿಯಾ, ಜಂತುಹುಳು, ಕುಷ್ಟರೋಗ ಸೇರಿದಂತೆ ಇನ್ನಿತರ ವರದಿಗಳನ್ನ ಸರ್ಕಾರಕ್ಕೆ ವರದಿಗಳನ್ನ ಸಲ್ಲಿಸದಿರಲು ನಿರ್ಧಾರ ಮಾಡಲಾಗಿದೆ. ಅಲ್ಲದೆ ಡಿಸಿ ಮತ್ತು ಸಿಇಓ ಮೀಟಿಂಗ್ ಗಳಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ.

HEALTH 1

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರ ಸಂಘ ಈ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಿಂಗಳ 15 ರಿಂದ ಅಂದರೆ ಮಂಗಳವಾರದಿಂದ ವೈದ್ಯಕೀಯ ಸೇವೆ ಮಾಡದೆ, ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

Doctor

ಯಾವುದೇ ರೀತಿಯ ಆನ್‍ಲೈನ್ ಇರಬಹುದು ಆಫ್‍ಲೈನ್ ವರದಿಗಳನ್ನ ಸರ್ಕಾರ ಸಲ್ಲಿಸದಿರಲು ಹಾಗೂ ಕೆಲಸದಲ್ಲಿ ತೊಡಗಿಕೊಳ್ಳದಿರಲು ಸರ್ಕಾರಿ ವೈದ್ಯರ ಸಂಘ ನಿರ್ಧರಿಸಿದೆ. ಸೆಪ್ಟೆಂಬರ್ 15 ಅಂದರೆ ಮಂಗಳವಾರದಿಂದ ರಾಜ್ಯಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ಪಕ್ಕಾ ಆಗಿದ್ದು, ರಾಜ್ಯದಲ್ಲಿ ಸರ್ಕಾರಿ ವೈದ್ಯರು ಕಾರ್ಯ ನಿರ್ವಹಿಸುತ್ತಿಲ್ಲ. ಈ ಹಿಂದೆ ಸರ್ಕಾರದ ಮುಂದೆ ಇಟ್ಟಿದ್ದ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ವೈದ್ಯರ ಸಂಘ ಪ್ರತಿಭಟನೆ ನಡೆಸಲಿದೆ.

HEALTH 2

ಬೇಡಿಕೆಗಳು ಏನೇನು?
* ಸರ್ಕಾರದಿಂದ ಡಾಕ್ಟರ್ಸ್ ಡೇ ಮಾಡುವಂತೆ ಬೇಡಿಕೆ
* ಕೋವಿಡ್ ವೇಳೆ ಮೃತ ಪಟ್ಟ ವೈದ್ಯರಿಗೆ ಸರ್ಕಾರ ಪರಿಹಾರ ನೀಡಿಲ್ಲ ಪರಿಹಾರ ನೀಡುವಂತೆ ಬೇಡಿಕೆ
* ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯ
* ಬಿಬಿಎಂಪಿಗೆ ನೀಡಿರುವ 48 ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನ ವಾಪಸ್ ನೀಡುವಂತೆ ಒತ್ತಾಯ
* ಡಿಸಿ ಮತ್ತು ಸಿಇಓಗಳ ದಬ್ಬಾಳಿಕೆಯನ್ನ ತಪ್ಪಿಸಬೇಕು.

happy smiling female doctordd

ಪ್ರತಿಭಟನೆಯಿಂದ ಆಗುವ ಅನಾಹುತಗಳೇನು?
* ಕೊವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೇಸ್ ಹೆಚ್ಚಾಗುವ ಸಾಧ್ಯತೆ
* ಜಿಲ್ಲಾ ಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ ಆಸ್ಪತ್ರೆ ಕ್ಲೋಸ್ ಮಾಡಿದ್ರೆ ಕೋವಿಡ್ ಉಲ್ಬಣಗೊಳ್ಳುವ ಸಾಧ್ಯತೆ
* ರಾಜ್ಯದಲ್ಲಿ ಸಾವು ನೋವು ಹೆಚ್ಚಾಗುವ ಸಾಧ್ಯತೆ
* ರಾಷ್ಟ್ರೀಯ ಕಾರ್ಯಕ್ರಮಗಳ ವರದಿ ನೀಡಿದಿದ್ದರೆ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮರ್ಯಾದೆ ಹೋಗುತ್ತೆ
* ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತೆ
* ಡಿಸಿ ಮತ್ತು ಸಿಇಓ ಮೀಟಿಂಗ್ ಗಳಿಗೆ ವೈದ್ಯರು, ವೈದ್ಯಾಧಿಕಾರಿಗಳು ಅಟೆಂಡ್ ಆಗದಿದ್ರೆ ಆರೋಗ್ಯ ಸಮಸ್ಯೆ ಗಳಿಗೆ ಪರಿಹಾರ ಕಷ್ಟ.

HEALTH 3

Share This Article
Leave a Comment

Leave a Reply

Your email address will not be published. Required fields are marked *