Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ?- 5 ವರ್ಷಗಳ ಬಳಿಕ ಮಗಳನ್ನು ಹುಡುಕಿ ಬಂದ ಅಪ್ಪ-ಅಮ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ?- 5 ವರ್ಷಗಳ ಬಳಿಕ ಮಗಳನ್ನು ಹುಡುಕಿ ಬಂದ ಅಪ್ಪ-ಅಮ್ಮ

Crime

ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ?- 5 ವರ್ಷಗಳ ಬಳಿಕ ಮಗಳನ್ನು ಹುಡುಕಿ ಬಂದ ಅಪ್ಪ-ಅಮ್ಮ

Public TV
Last updated: October 20, 2020 9:40 pm
Public TV
Share
3 Min Read
MND MURDER copy
SHARE

– ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಯುವತಿ
– ಜೆರಾಕ್ಸ್ ಪ್ರತಿಯಿಂದ ಸಾವಿನ ಸತ್ಯ ಬೆಳಕಿಗೆ

ಮಂಡ್ಯ: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ವರ್ಷ ಕಳೆಯುತ್ತಿದ್ದಂತೆ ಪೋಷಕರ ಸಂಪರ್ಕ ಕಡಿದುಕೊಂಡಿದ್ದಳು. ಪ್ರೀತಿಸಿದವನ ಜೊತೆ ಚೆನ್ನಾಗಿದ್ದಾಳೆ ಎಂದುಕೊಂಡಿದ್ದ ತಂದೆ-ತಾಯಿಗೆ ದೊಡ್ಡ ಅಘಾತ ಎದುರಾಗಿದ್ದು, ಐದು ವರ್ಷಗಳ ಹಿಂದೆಯೇ ಮಗಳು ಸಾವನ್ನಪ್ಪಿದ್ದಾಳೆ ಎಂಬ ಸತ್ಯ ಪೋಷಕರಿಗೆ ಅಘಾತವನ್ನು ಉಂಟು ಮಾಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

MND MURDER B

ಐದು ವರ್ಷಗಳ ಬಳಿಕ ಮನೆಯಲ್ಲಿ ಸಿಕ್ಕ ಜೆರಾಕ್ಸ್ ಪ್ರತಿ ಮಗಳ ನಿಗೂಢ ಸಾವಿನ ಸತ್ಯವನ್ನು ಪೋಷಕರಿಗೆ ತಿಳಿಸಿದೆ. ಪ್ರರಕರಣ ಈಗ ಮಹಿಳಾ ಆಯೋಗ ಹಾಗೂ ಪೊಲೀಸ್ ಇಲಾಖೆ ಮೆಟ್ಟಿಲೇರಿದ್ದು, ಮಗಳ ಕಳೆದುಕೊಂಡ ಪೋಷಕರು ಮರ್ಯಾದೆಗಾಗಿ ಹತ್ಯೆಯಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ.

ಏನಿದು ಪ್ರಕರಣ: ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ಮಹದೇವಮ್ಮ ಮಗಳ ಕಳೆದುಕೊಂಡು ಕಣ್ಣೀರುತ್ತಿದ್ದಾರೆ. ಹೊಟ್ಟೆ, ಬಟ್ಟೆಗಾಗಿ ಊರು ಬಿಟ್ಟು ಬೆಂಗಳೂರಲ್ಲೇ ಜೀವನ ಸಾಗುತ್ತಿದ್ದ ಇವರು, ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲದೇ ಕಷ್ಟ ಪಟ್ಟು ದುಡಿದ ದುಡ್ಡಲ್ಲಿ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಆಸೆ ಹೊಂದಿದ್ದರು. ಅದಕ್ಕಾಗಿಯೇ ತನ್ನ 2ನೇ ಮಗಳು ಮೇಘಶ್ರೀಯನ್ನು ಬೊಮ್ಮನಹಳ್ಳಿಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಗೂ ಸೇರಿಸಿದ್ದರು.

MND MURDER a copy

ಆದರೆ 2014-15ರಲ್ಲಿ ಮೇಘಶ್ರೀಗೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಿರುಮಲಾಪುರ ಗ್ರಾಮದ ಸ್ವಾಮಿಗೌಡ ಎಂಬಾತನ ಪರಿಚಯವಾಗಿತ್ತು. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಕೂಡ ಮನೆ ಬಿಟ್ಟು ಮದುವೆಯಾಗಿದ್ದರು. ಮದುವೆ ಬಳಿಕ ಸ್ವಾಮಿಗೌಡ ಮತ್ತು ಮೇಘಶ್ರೀ ಇಬ್ಬರೂ ಬೆಂಗಳೂರಿನಲ್ಲೇ ವಾಸವಿದ್ದರು. ಮದುವೆ ಆದ ಒಂದು ವರ್ಷ ಮೇಘಶ್ರೀ ತನ್ನ ತಾಯಿ ಜೊತೆ ದೂರವಾಣಿಯಲ್ಲಿ ಸಂಪರ್ಕದಲ್ಲಿದ್ದಳು . ಆನಂತರ ದಿಢೀರ್ ಅಂತಾ ಮೇಘಶ್ರೀ ಫೋನ್ ಮಾಡುವುದನ್ನು ನಿಲ್ಲಿಸಿದ್ದಳು.

MND POLICE

ಅಲ್ಲಿಂದ ಇಲ್ಲಿಯವರೆಗೂ ಮಹದೇವಮ್ಮ ಮಗಳ ಫೋಟೋ ಹಿಡಿದು ಇಡೀ ಬೆಂಗಳೂರು ಅಲೆದಾಡಿದ್ದರು. ಆದರೆ ಕೆಲದಿನಗಳ ಹಿಂದೆ ಮನೆ ಕ್ಲೀನ್ ಮಾಡುವ ವೇಳೆ, ಮೇಘಶ್ರೀ ಇಟ್ಟಿದ್ದ ತಾನು ಮದುವೆಯಾಗಿರುವ ಯುವಕನ ವೋಡರ್ ಐಡಿ ಜೆರಾಕ್ಸ್ ಪತ್ತೆಯಾಗಿತ್ತು. ಜೆರಾಕ್ಸ್ ಪ್ರತಿಯಲ್ಲಿದ್ದ ಆತನ ವಿಳಾಸ ಹಿಡಿದುಕೊಂಡು ಮಹದೇವಮ್ಮ ಮಗಳನ್ನು ಹುಡುಕಲು ಪಾಂಡವಪುರಕ್ಕೆ ತೆರಳಿದ್ದರು. ಆದರೆ ಗ್ರಾಮಕ್ಕೆ ತೆರಳಿದ್ದ ಅವರಿಗೆ ಬಿಗ್ ಶಾಕ್ ಎದುರಾಗಿತ್ತು.

MND MURDER D

ಹುಡುಗನ ಮನೆಗೆ ಹೋಗಿ ನನ್ನ ಮಗಳೆಲ್ಲಿ ಎಂದ ತಾಯಿಗೆ ನಿನ್ನ ಮಗಳು 5 ವರ್ಷಗಳ ಹಿಂದೆಯೇ ನಾಪತ್ತೆಯಾಗಿದ್ದಾಳೆ ಎಂಬ ಉತ್ತರ ಸಿಕ್ಕಿತ್ತು. ಆದರೆ ಸ್ಥಳೀಯರು ಮೇಘಶ್ರೀ ತಾಯಿ ಮಹದೇವಮ್ಮಗೆ ಬೇರೆಯದ್ದೇ ಸತ್ಯ ಹೇಳಿದರಂತೆ. ಮದುವೆ ಬಳಿಕ ಮನೆಗೆ ಬಂದ ಮೇಘಶ್ರೀ ಜೊತೆಗೆ ಜಾತಿ ವಿಚಾರವಾಗಿ ಸ್ವಾಮಿ ಗೌಡನ ತಂದೆ ಜಗಳ ತೆಗೆದಿದ್ದರಂತೆ. ಅಂದು ನಡೆದ ಜಗಳ ವಿಕೋಪಕ್ಕೆ ತಿರುಗಿ ಮೇಘಶ್ರೀ ಹತ್ಯೆಯಾಯಿತು ಎಂಬ ವಿಚಾರವನ್ನು ಸ್ಥಳೀಯರು ತಿಳಿಸಿದ್ದರು.

MND MURDER B

ಈ ಮಾಹಿತಿ ಪಡೆದಿರುವ ಮೇಘಶ್ರೀ ಪೋಷಕರು, ಮಾನವ ಹಕ್ಕುಗಳ ಆಯೋಗದ ಸಹಾಯದ ಪಡೆದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಪ್ರಕರಣದ ಮಾಹಿತಿ ಪಡೆದ ಪೊಲೀಸರು 2015 ರಲ್ಲಿ ತಮ್ಮ ಠಾಣೆಯ ವ್ಯಾಪ್ತಿಯ ನಾಲೆಯಲ್ಲಿ ಸಿಕ್ಕ ಅಪರಿಚಿತ ಮಹಿಳೆಯ ಮೃತದೇಹದ ಫೋಟೋ ತೋರಿಸಿದ್ದರು. ಆ ಚಿತ್ರ ನೋಡಿದ ತಾಯಿ ಇದು ನನ್ನ ಮಗಳ ಮೃತದೇಹವೇ ಎಂದು ಗುರುತಿಸಿದ್ದರು. ಸ್ವಾಮಿಗೌಡನ ಮನೆಯವರು ಮರ್ಯಾದೆಗಾಗಿ ತನ್ನ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಮಗೆ ನ್ಯಾಯ ಕೊಡಿಸಿ ಎಂದು ಪೊಲೀಸರು, ಮಹಿಳಾ ಆಯೋಗದ ಅಧ್ಯಕ್ಷರು, ಮಾನವ ಹಕ್ಕುಗಳ ರಕ್ಷಣಾ ಫೋರಂ ಮೊರೆ ಹೋಗಿದ್ದಾರೆ.

ಐದು ವರ್ಷಗಳ ಹಿಂದಿನ ಪ್ರಕರಣಕ್ಕೆ ಈಗ ಮತ್ತೆ ಜೀವ ಬಂದಿದ್ದು, ಪೊಲೀಸರ ತನಿಖೆಯಿಂದ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಿದೆ.

police 1 e1585506284178

TAGGED:Karnataka State Commission for WomenmandyaMissing CasempolicePublic TVನಾಪತ್ತೆ ಪ್ರಕರಣಪಬ್ಲಿಕ್ ಟಿವಿಪೊಲೀಸ್ಮಂಡ್ಯಮರ್ಯಾದಾ ಹತ್ಯೆಮಹಿಳಾ ಆಯೋಗ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
2 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
9 minutes ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
30 minutes ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
1 hour ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
2 hours ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?