ಮಗುಚಿ ಬಿದ್ದ ಕಾರು – ನಾಲ್ವರ ರಕ್ಷಣೆ

Public TV
1 Min Read
ckm car

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಸ್ಥಳದಲ್ಲಿದ್ದ ಭಜರಂಗದಳ ಕಾರ್ಯಕರ್ತರು ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ.

ಎನ್.ಆರ್.ಪುರ ತಾಲೂಕಿನ ಮಾಗುಂಡಿ ಗ್ರಾಮದ ನಿವಾಸಿ ಸಲಾಂ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಬ್ಬೇಗೌಡ ಎಂಬವರ ಮನೆಯ ಬಳಿ ಮಗುಚಿ ಬಿದ್ದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳು ಇದ್ದರು ಎಂದು ತಿಳಿದು ಬಂದಿದೆ. ಕಾರು ಮಗುಚಿ ಬೀಳುತ್ತಿದ್ದಂತೆ ಕಾರಿನಲ್ಲಿದ್ದವರು ಕೂಗಾಡಿದ್ದಾರೆ. ಸ್ಥಳದಲ್ಲಿದ್ದ ಭಜರಂಗದಳ ಯುವಕರು ಕಾರನ್ನ ಎತ್ತಿ ನಿಲ್ಲಿಸಿ ಗಾಯಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

70fafae3 89bc 4d9b 88a7 f393e8383bd1 medium

ಭಜರಂಗದಳದ ಜಿಲ್ಲಾ ಸಂಚಾಲಕ ಶಶಾಂಕ್ ಹೇರೂರು ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಮ್ಮ ಮೊದಲ ಆದ್ಯತೆ ಮಾನವೀಯತೆ. ಏಕೆಂದರೆ ನಮ್ಮ ಧರ್ಮ ನಮಗೆ ಶಾಂತಿ ಹಾಗೂ ಮಾನವೀಯ ಮೌಲ್ಯಗಳನ್ನ ಕಲಿಸಿಕೊಟ್ಟಿದೆ ಎಂದು ಸಂಘಟನೆಯ ಕಾರ್ಯಕರ್ತರೊಬ್ಬರು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *