ಬೆಂಗಳೂರು: ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ಗೆ 25 ಕೋಟಿ ರೂ. ವಂಚನೆ ಪ್ರಕರಣಕ್ಕೆ ಟಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇತ್ತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ‘ದಾಸ’ ನ ಪರ ನಿಂತಿದ್ದಾರೆ.
ದರ್ಶನ ಹೆಸರಲ್ಲಿ 25 ಕೋಟಿ ಲೋನ್ ದೋಖಾ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ದರ್ಶನ್ ನಮ್ಮ ಮನೆಗೆ ಬಂದಿದ್ದರು. ಈ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದರು. ಯಾರೋ ಮೋಸ ಮಾಡ್ತಿದ್ದಾರೆ ಅಂತ ನನಗೆ ಹೇಳಿದ್ರು. ಮೋಸ ನಡೆದಿದ್ದರೆ ಖಂಡಿತ ನ್ಯಾಯ ಸಿಗಬೇಕು ಎಂದರು. ಇದನ್ನೂ ಓದಿ : ಮೂರು ವಿಷಯ ಹೇಳಬೇಡಿ ಅಂದಿದ್ದಾರೆ ದರ್ಶನ್ ಸರ್: ಉಮಾಪತಿ
ನ್ಯಾಯ ದರ್ಶನ್ ಪರ ಇದೆ. ನಾನು ದರ್ಶನ್ ಪರವೇ ಇರುತ್ತೇನೆ. ಉಮಾಪತಿ ಯಾರು ಅಂತ ನನಗೆ ಗೊತ್ತಿಲ್ಲ. ನಾನು ಯಾವತ್ತು ಅವ್ರನ್ನ ಮೀಟ್ ಮಾಡಿಲ್ಲ. ಅ ಬಗ್ಗೆ ನಾನು ಮಾತಾಡೋಕೆ ಇಷ್ಟ ಇಲ್ಲ. ಪ್ರಕರಣದ ಸಂಪೂರ್ಣ ವಿವರ ದರ್ಶನ್ ಹೇಳಿರಲಿಲ್ಲ. ಆದರೆ ಮೋಸ ಆಗಿದೆ ಅಂತ ನನ್ನ ಬಳಿ ಹೇಳಿದ್ರು ಎಂದು ತಿಳಿಸಿದರು. ಇದನ್ನೂ ಓದಿ: ಉಮಾಪತಿ ನನ್ನನ್ನು ಬಳಸಿಕೊಂಡಿದ್ದು ದೊಡ್ಡ ತಪ್ಪು – ಅರುಣಾ ಕುಮಾರಿ
ಏಪ್ರಿಲ್ 9ರಂದು ನಿರ್ಮಾಪಕ ಉಮಾಪತಿ ಕರೆ ಮಾಡಿ, ಹರ್ಷ ಮೇಲಂಟಾ ಬ್ಯಾಂಕ್ ಲೋನ್ಗೆ ಅಪ್ಲೈ ಮಾಡಿದ್ದಾರೆ. ನಿಮ್ಮ ಆಸ್ತಿ ದಾಖಲೆಗಳ ಶ್ಯೂರಿಟಿ ಕೊಟ್ಟಿದ್ದಾರೆ ಅಂತ ತಿಳಿಸಿದ್ರು. ಒಂದಲ್ಲ, ಎರಡಲ್ಲ 25 ಕೋಟಿ ರೂ. ವ್ಯವಹಾರ ಅನ್ನುತ್ತಿದ್ದಂತೆಯೇ ನಾನು ಅಲರ್ಟ್ ಆದೆ. ನಾವೆಲ್ಲರೂ ಸ್ನೇಹಿತರು. ಯಾರ ಮೇಲೆ ಅನುಮಾನ ಪಡಬೇಕು ಅಂತಾನೇ ಗೊತ್ತಾಗುತ್ತಿಲ್ಲ ಎಂದು ದರ್ಶನ್ ಹೇಳಿದ್ದರು.
ಸುದ್ದಿಗೋಷ್ಠಿ ಉದ್ದಕ್ಕೂ ನಿರ್ಮಾಪಕ ಉಮಾಪತಿ ನಡೆಯ ಬಗ್ಗೆ ದರ್ಶನ್ ಅನುಮಾನ ವ್ಯಕ್ತಪಡಿಸಿದ್ರು. ಅದಕ್ಕೆ ಪೂರಕವಾದ ಒಂದಷ್ಟು ವಾಟ್ಸಪ್ ಚಾಟ್ ಸ್ಕ್ರೀನ್ ಶಾಟ್, ಹರ್ಷ ಮೇಲಂಟಾ ಅವರೊಂದಿಗೆ ಅರುಣಾ ಕುಮಾರಿ ಮಾತನಾಡಿರುವ ಫೋನ್ ಕಾಲ್ ಆಡಿಯೋ, ಅರುಣಾಕುಮಾರಿ ಕಳುಹಿಸಿರುವ ತಮಗೆ ಕಳುಹಿಸಿದ ವಾಯ್ಸ್ ಮೆಸೇಜ್ ಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು.