ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಕುಟುಂಬ ಸಮೇತ ಮಡಿಕೇರಿಗೆ ಪ್ರವಾಸ ತೆರಳಿದ್ದ ಕುಮಾರಸ್ವಾಮಿಯವರು, ಅಲ್ಲಿ ಒಂದು ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದರು. ಈಗ ಹಾಸನದ ಬೇಲೂರು, ಹಳೆಬೀಡು, ಗೊರೂರಿಗೆ ಭೇಟಿ ನೀಡುವ ಸಲುವಾಗ ಪತ್ನಿ, ಮಗ, ಸೊಸೆ ಜೊತೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ.
ಕಳೆದ ಎರಡು ದಿನದ ಹಿಂದೆ ಮಾಜಿ ಸಚಿವ ಹೆಚ್ಡಿ ರೇವಣ್ಣ ವಿರುದ್ಧ ಅರಕಲಗೂಡು ಶಾಸಕ ಎಟಿ.ರಾಮಸ್ವಾಮಿ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ರೇವಣ್ಣ ಸರ್ವಾಧಿಕಾರಿ ಮನೋಭಾವನೆಯನ್ನು ಬಿಡಬೇಕು ಎಂದು ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಇಂದು ಗೊರೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅರಕಲಗೂಡು ಶಾಸಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ.