Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೊಂದು ಕರ್ಮಕಾಂಡ ಬಯಲಿಗೆ

Public TV
Last updated: May 24, 2021 3:40 pm
Public TV
Share
3 Min Read
mdk death 1
SHARE

ಮಡಿಕೇರಿ: ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಫೋನ್ ಕಳ್ಳತನವಾಗಿದ್ದ ಪ್ರಕರಣ ಕಣ್ಮುಂದೆ ಇರುವಾಗಲೇ, ಮೃತ ವೃದ್ಧೆಯ ಚಿನ್ನದ ತಾಳಿಯ ಸರವನ್ನೇ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋವಿಡ್ ನಿಂದ ಮೃತಪಟ್ಟ ಕಮಲ ಎಂಬ ವೃದ್ಧೆಯ ಅಂದಾಜು ಒಂದುವರೆ ಲಕ್ಷ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನೇ ದಾದಿಯರು ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದೆ.

vlcsnap 2021 05 24 15h35m31s114

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಸೂಲ್ ಪುರ ಗ್ರಾಮದ ಕಮಲಾ ಅವರನ್ನ ಮೇ 1 ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ಸಾಮಾನ್ಯ ವಾರ್ಡಿನಲ್ಲೇ ದಾಖಲಾಗಿದ್ದ ಕಮಲ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದರಿಂದ, ಮೇ 2 ರಂದು ಐಸಿಯು ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ದಾದಿಯರು ಕಮಲ ಅವರ ಕೊರಳಿನಲ್ಲಿದ್ದ ಚಿನ್ನದ ತಾಳಿ ಸರವನ್ನು ತೆಗೆದುಕೊಂಡಿದ್ದರು. ಐಸಿಯು ವಾರ್ಡಿನಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದ ವೃದ್ಧೆ ಕಮಲ ತನ್ನ ಮಗ ಮೊಣ್ಣಪ್ಪ ಅವರಿಗೆ ಕರೆ ಮಾಡಿ ಈ ವಿಷಯವನ್ನು ತಿಳಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಅಂದರೆ ಮೇ 19 ರಂದು ಕೋವಿಡ್ ಆಸ್ಪತ್ರೆಯಲ್ಲೇ ವೃದ್ಧೆ ಕಮಲ ಮೃತಪಟ್ಟಿದ್ದರು. 20 ರಂದು ಅಂತ್ಯಕ್ರಿಯೆ ನೆರವೇರಿಸಿದ ಮೊಣ್ಣಪ್ಪ 21 ರಂದು ಮಡಿಕೇರಿ ಆಸ್ಪತ್ರೆಗೆ ಬಂದು ತನ್ನ ತಾಯಿಯ ವಸ್ತುಗಳನ್ನು ಕೇಳಿದ್ದಾರೆ. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಕೇವಲ ಬ್ಯಾಗನ್ನು ಮಾತ್ರ ನೀಡಿದರು. ತನ್ನ ತಾಯಿಯ ಚಿನ್ನದ ಸರವನ್ನು ಕೊಟ್ಟಿಲ್ಲ ಎಂದು ಮೊಣ್ಣಪ್ಪ ಕೋವಿಡ್ ಆಸ್ಪತ್ರೆ ಡೀನ್ ಮತ್ತು ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

mdk letter

ನಮ್ಮ ಸಂಪ್ರದಾಯದ ಪ್ರಕಾರ ಗಂಡ ಇರುವಾಗಲೇ ಹೆಂಡತಿ ಕೊರಳಿನಿಂದ ತಾಳಿಯನ್ನು ತೆಗೆಯುವುದಿಲ್ಲ. ಹೀಗಾಗಿ ತಾಯಿಯನ್ನು ಆಸ್ಪತ್ರೆಗೆ ಕಳುಹಿಸುವಾಗ ಚೈನ್ ತೆಗೆಯದೆ ಆಸ್ಪತ್ರೆಗೆ ಕಳುಹಿಸಿದೆವು. ಆದರೆ ಈಗ ತಾಯಿಯ ಚಿನ್ನದ ತಾಳಿಯ ಸರವನ್ನೇ ಕೊಟ್ಟಿಲ್ಲ. ಈಗ ಧಾರ್ಮಿಕ ಕಾರ್ಯಗಳನ್ನು ಮಾಡಲು ತಾಳಿ ಬೇಕಾಗಿದೆ. ಅದನ್ನು ದಯಮಾಡಿ ಕೊಡಿಸಿ ಎಂದು ಅಂಗಲಾಚುತ್ತಿದ್ದಾರೆ. ಇದನ್ನೂ ಓದಿ: ತಾಯಿ ನೆನಪುಗಳು ಇರುವ ಮೊಬೈಲ್ ಫೋನ್ ಹಿಂದಿರುಗಿಸಿ-ಪುಟ್ಟ ಬಾಲಕಿಯ ಮನವಿ

vlcsnap 2021 05 24 15h35m36s896

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ. ಆಸ್ಪತ್ರೆಯಲ್ಲಿ ಈ ರೀತಿ ಆಗಬಾರದಿತ್ತು. ಇದು ಅತ್ಯಂತ ಅಮಾನವೀಯ ಘಟನೆ. ಈ ಕುರಿತು ಈಗಾಗಲೇ ಆಸ್ಪತ್ರೆಯಲ್ಲಿ ತನಿಖೆ ನಡೆಯುತ್ತಿದೆ. ಎಲ್ಲಾ ವಾರ್ಡುಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. ಒಟ್ಟಿನಲ್ಲಿ ಕೊವಿಡ್ ನಿಂದ ಮೃತಪಟ್ಟವರ ಬೆಲೆ ಬಾಳುವ ವಸ್ತುಗಳು ಕೊವಿಡ್ ಆಸ್ಪತ್ರೆಯಲ್ಲಿ ನಾಪತ್ತೆಯಾಗುತ್ತಿರುವುದು ಎಲ್ಲರೂ ತಲೆತಗ್ಗಿಸುವಂತೆ ಆಗಿದೆ.

ಕೊಡಗಿನಲ್ಲಿ ನಿಯಂತ್ರಣಕ್ಕೆ ಬಾರದ ಸಾವಿನ ಪ್ರಮಾಣ
ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಕೊಂಚ ಪರಿಣಾಮ ಬೀರಿದ್ದು, ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಸಾವಿನ ಪ್ರಮಾಣ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ 8 ಗಂಟೆಯವರೆಗೆ) 10 ಸಾವು ಸಂಭವಿಸಿದ್ದು, ಇಲ್ಲಿಯವರೆಗೆ ಒಟ್ಟು 295 ಮರಣ ಪ್ರಕರಣಗಳು ವರದಿಯಾಗಿದೆ.

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 264 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 246 ಆರ್.ಟಿ.ಪಿ.ಸಿ.ಆರ್ ಮತ್ತು 18 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 57, ಸೋಮವಾರಪೇಟೆ ತಾಲೂಕಿನಲ್ಲಿ 118 ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 89 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ.

mdk dc

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 22,732 ಆಗಿದ್ದು, ಪ್ರಸ್ತುತ 2676 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ 452 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇಲ್ಲಿಯವರೆಗೆ ಒಟ್ಟು 19,761 ಮಂದಿ ಗುಣಮುಖರಾಗಿದ್ದಾರೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 394 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

TAGGED:Corona VirusCovid 19madikeriPublic TVಕೊರೊನಾ ವೈರಸ್ಕೋವಿಡ್ 19ಕೋವಿಡ್ ಆಸ್ಪತ್ರೆಚಿನ್ನದ ಸರಪಬ್ಲಿಕ್ ಟಿವಿಮಡಿಕೇರಿ
Share This Article
Facebook Whatsapp Whatsapp Telegram

Cinema Updates

janhvi kapoor 4
ಟೈಗರ್ ಶ್ರಾಫ್ ಜೊತೆ ಜಾನ್ವಿ ಕಪೂರ್ ಡ್ಯುಯೆಟ್
12 minutes ago
pawan kalyan 2
ನಿಧಿ ಜೊತೆ ಪವನ್ ಕಲ್ಯಾಣ್ ಮಸ್ತ್ ಡ್ಯಾನ್ಸ್- ‘ಹರಿ ಹರ ವೀರ ಮಲ್ಲು’ ಚಿತ್ರದ ಸಾಂಗ್ ರಿಲೀಸ್
1 hour ago
TEJA SAJJA 1 1
ಸೂಪರ್ ಯೋಧನಾಗಿ ತೇಜ್ ಸಜ್ಜಾ ಎಂಟ್ರಿ- ಆ್ಯಕ್ಷನ್ ಪ್ಯಾಕ್ಡ್ ‘ಮಿರಾಯ್’‌ ಚಿತ್ರದ ಟೀಸರ್ ಔಟ್
1 hour ago
urvashi rautela aishwarya rai
ಐಶ್ವರ್ಯಾ ರೈ ಜೊತೆ ಹೋಲಿಸಿ ಟ್ರೋಲ್- ನಾನು ಯಾರ ಕಾಪಿನೂ ಅಲ್ಲ ಎಂದ ಊರ್ವಶಿ ರೌಟೇಲಾ
3 hours ago

You Might Also Like

Raichuru Protest
Crime

ರಾಯಚೂರು | ಭಾವಚಿತ್ರ ಸುಟ್ಟು ಕಮಲ್ ಹಾಸನ್ ವಿರುದ್ಧ ಆಕ್ರೋಶ

Public TV
By Public TV
5 minutes ago
Chikkamagaluru KEERTHI
Chikkamagaluru

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು 10 ಬಾರಿ ಇರಿದು ಕೊಂದ ಪತಿ

Public TV
By Public TV
9 minutes ago
raft found in kumta coastal area
Latest

ಕಾರವಾರ: ಕಡಲ ತೀರಕ್ಕೆ ತೇಲಿಬಂದ ಹಡಗಿನ ರಾಫ್ಟ್‌ – ಕೇರಳ ಕೊಚ್ಚಿಯಲ್ಲಿ ಮುಳುಗಿದ್ದ ಹಡಗಿನದ್ದಾ?

Public TV
By Public TV
20 minutes ago
Mock drill 1
Latest

ಭಾರತ – ಪಾಕ್‌ ಗಡಿಯಲ್ಲಿರೋ 4 ರಾಜ್ಯಗಳಲ್ಲಿ ನಾಳೆ ಮಾಕ್‌ ಡ್ರಿಲ್

Public TV
By Public TV
38 minutes ago
Bidar Rain 1
Bidar

ಧಾರಾಕಾರ ಮಳೆಗೆ ಜಮೀನುಗಳು ಜಲಾವೃತ – ಲಕ್ಷಾಂತರ ಮೌಲ್ಯದ ಬೆಳೆ ನಾಶ, ರೈತರು ಕಂಗಾಲು

Public TV
By Public TV
45 minutes ago
Abdul Rahims funeral procession stones thrown at showroom bc road kaikamba
Dakshina Kannada

ರಹೀಂ ಶವ ಮೆರವಣಿಗೆ| ಶೋರೂಂ ಮೇಲೆ ಕಲ್ಲು – ಬಲವಂತವಾಗಿ ಬಂದ್‌ ಮಾಡಿಸಿದ ಕಿಡಿಗೇಡಿಗಳು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?