Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೊಂದು ಕರ್ಮಕಾಂಡ ಬಯಲಿಗೆ

Public TV
Last updated: May 24, 2021 3:40 pm
Public TV
Share
3 Min Read
mdk death 1
SHARE

ಮಡಿಕೇರಿ: ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಫೋನ್ ಕಳ್ಳತನವಾಗಿದ್ದ ಪ್ರಕರಣ ಕಣ್ಮುಂದೆ ಇರುವಾಗಲೇ, ಮೃತ ವೃದ್ಧೆಯ ಚಿನ್ನದ ತಾಳಿಯ ಸರವನ್ನೇ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋವಿಡ್ ನಿಂದ ಮೃತಪಟ್ಟ ಕಮಲ ಎಂಬ ವೃದ್ಧೆಯ ಅಂದಾಜು ಒಂದುವರೆ ಲಕ್ಷ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನೇ ದಾದಿಯರು ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದೆ.

vlcsnap 2021 05 24 15h35m31s114

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಸೂಲ್ ಪುರ ಗ್ರಾಮದ ಕಮಲಾ ಅವರನ್ನ ಮೇ 1 ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ಸಾಮಾನ್ಯ ವಾರ್ಡಿನಲ್ಲೇ ದಾಖಲಾಗಿದ್ದ ಕಮಲ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದರಿಂದ, ಮೇ 2 ರಂದು ಐಸಿಯು ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ದಾದಿಯರು ಕಮಲ ಅವರ ಕೊರಳಿನಲ್ಲಿದ್ದ ಚಿನ್ನದ ತಾಳಿ ಸರವನ್ನು ತೆಗೆದುಕೊಂಡಿದ್ದರು. ಐಸಿಯು ವಾರ್ಡಿನಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದ ವೃದ್ಧೆ ಕಮಲ ತನ್ನ ಮಗ ಮೊಣ್ಣಪ್ಪ ಅವರಿಗೆ ಕರೆ ಮಾಡಿ ಈ ವಿಷಯವನ್ನು ತಿಳಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಅಂದರೆ ಮೇ 19 ರಂದು ಕೋವಿಡ್ ಆಸ್ಪತ್ರೆಯಲ್ಲೇ ವೃದ್ಧೆ ಕಮಲ ಮೃತಪಟ್ಟಿದ್ದರು. 20 ರಂದು ಅಂತ್ಯಕ್ರಿಯೆ ನೆರವೇರಿಸಿದ ಮೊಣ್ಣಪ್ಪ 21 ರಂದು ಮಡಿಕೇರಿ ಆಸ್ಪತ್ರೆಗೆ ಬಂದು ತನ್ನ ತಾಯಿಯ ವಸ್ತುಗಳನ್ನು ಕೇಳಿದ್ದಾರೆ. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಕೇವಲ ಬ್ಯಾಗನ್ನು ಮಾತ್ರ ನೀಡಿದರು. ತನ್ನ ತಾಯಿಯ ಚಿನ್ನದ ಸರವನ್ನು ಕೊಟ್ಟಿಲ್ಲ ಎಂದು ಮೊಣ್ಣಪ್ಪ ಕೋವಿಡ್ ಆಸ್ಪತ್ರೆ ಡೀನ್ ಮತ್ತು ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

mdk letter

ನಮ್ಮ ಸಂಪ್ರದಾಯದ ಪ್ರಕಾರ ಗಂಡ ಇರುವಾಗಲೇ ಹೆಂಡತಿ ಕೊರಳಿನಿಂದ ತಾಳಿಯನ್ನು ತೆಗೆಯುವುದಿಲ್ಲ. ಹೀಗಾಗಿ ತಾಯಿಯನ್ನು ಆಸ್ಪತ್ರೆಗೆ ಕಳುಹಿಸುವಾಗ ಚೈನ್ ತೆಗೆಯದೆ ಆಸ್ಪತ್ರೆಗೆ ಕಳುಹಿಸಿದೆವು. ಆದರೆ ಈಗ ತಾಯಿಯ ಚಿನ್ನದ ತಾಳಿಯ ಸರವನ್ನೇ ಕೊಟ್ಟಿಲ್ಲ. ಈಗ ಧಾರ್ಮಿಕ ಕಾರ್ಯಗಳನ್ನು ಮಾಡಲು ತಾಳಿ ಬೇಕಾಗಿದೆ. ಅದನ್ನು ದಯಮಾಡಿ ಕೊಡಿಸಿ ಎಂದು ಅಂಗಲಾಚುತ್ತಿದ್ದಾರೆ. ಇದನ್ನೂ ಓದಿ: ತಾಯಿ ನೆನಪುಗಳು ಇರುವ ಮೊಬೈಲ್ ಫೋನ್ ಹಿಂದಿರುಗಿಸಿ-ಪುಟ್ಟ ಬಾಲಕಿಯ ಮನವಿ

vlcsnap 2021 05 24 15h35m36s896

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ. ಆಸ್ಪತ್ರೆಯಲ್ಲಿ ಈ ರೀತಿ ಆಗಬಾರದಿತ್ತು. ಇದು ಅತ್ಯಂತ ಅಮಾನವೀಯ ಘಟನೆ. ಈ ಕುರಿತು ಈಗಾಗಲೇ ಆಸ್ಪತ್ರೆಯಲ್ಲಿ ತನಿಖೆ ನಡೆಯುತ್ತಿದೆ. ಎಲ್ಲಾ ವಾರ್ಡುಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. ಒಟ್ಟಿನಲ್ಲಿ ಕೊವಿಡ್ ನಿಂದ ಮೃತಪಟ್ಟವರ ಬೆಲೆ ಬಾಳುವ ವಸ್ತುಗಳು ಕೊವಿಡ್ ಆಸ್ಪತ್ರೆಯಲ್ಲಿ ನಾಪತ್ತೆಯಾಗುತ್ತಿರುವುದು ಎಲ್ಲರೂ ತಲೆತಗ್ಗಿಸುವಂತೆ ಆಗಿದೆ.

ಕೊಡಗಿನಲ್ಲಿ ನಿಯಂತ್ರಣಕ್ಕೆ ಬಾರದ ಸಾವಿನ ಪ್ರಮಾಣ
ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಕೊಂಚ ಪರಿಣಾಮ ಬೀರಿದ್ದು, ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಸಾವಿನ ಪ್ರಮಾಣ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ 8 ಗಂಟೆಯವರೆಗೆ) 10 ಸಾವು ಸಂಭವಿಸಿದ್ದು, ಇಲ್ಲಿಯವರೆಗೆ ಒಟ್ಟು 295 ಮರಣ ಪ್ರಕರಣಗಳು ವರದಿಯಾಗಿದೆ.

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 264 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 246 ಆರ್.ಟಿ.ಪಿ.ಸಿ.ಆರ್ ಮತ್ತು 18 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 57, ಸೋಮವಾರಪೇಟೆ ತಾಲೂಕಿನಲ್ಲಿ 118 ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 89 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ.

mdk dc

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 22,732 ಆಗಿದ್ದು, ಪ್ರಸ್ತುತ 2676 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ 452 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇಲ್ಲಿಯವರೆಗೆ ಒಟ್ಟು 19,761 ಮಂದಿ ಗುಣಮುಖರಾಗಿದ್ದಾರೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 394 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

TAGGED:Corona VirusCovid 19madikeriPublic TVಕೊರೊನಾ ವೈರಸ್ಕೋವಿಡ್ 19ಕೋವಿಡ್ ಆಸ್ಪತ್ರೆಚಿನ್ನದ ಸರಪಬ್ಲಿಕ್ ಟಿವಿಮಡಿಕೇರಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
36 minutes ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
41 minutes ago
big bulletin 06 August 2025 part 1
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-1

Public TV
By Public TV
42 minutes ago
big bulletin 06 August 2025 part 2
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-2

Public TV
By Public TV
45 minutes ago
big bulletin 06 August 2025 part 3
Big Bulletin

ಬಿಗ್‌ ಬುಲೆಟಿನ್‌ 06 August 2025 ಭಾಗ-3

Public TV
By Public TV
48 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?