Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ – ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ – ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

Districts

ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ – ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

Public TV
Last updated: July 14, 2021 10:29 pm
Public TV
Share
3 Min Read
Madikeri Rain 2021 7
SHARE

– ಮಡಿಕೇರಿ ಆಕಾಶವಾಣಿ ಬಳಿ ಮತ್ತೆ ಗುಡ್ಡ ಕುಸಿತ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ.

Madikeri Rain 2021 1 medium

ಕತ್ತಲೆಯಲ್ಲಿ ಕೊಡಗು:
ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಆರು ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಜೊತೆಗೆ ದೇವಸ್ತೂರು, ಹೆಬ್ಬೆಟಗೇರಿಯಲ್ಲಿ ದೇವಸ್ತೂರು ಹೊಳೆ ಭೋರ್ಗರೆದು ಹರಿಯುತ್ತಿದೆ. ದೇವಸ್ತೂರು ಕೆಳಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ದೇವಸ್ತೂರು, ಬಾಣೆಗದ್ದೆ ಮತ್ತು ಹೆಬ್ಬೆಟಗೇರಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಇನ್ನು ತೀವ್ರ ಮಳೆಗೆ ಕೊಡಗು ಜಿಲ್ಲೆಗೆ ವಿದ್ಯುತ್ ಪೂರೈಸುವ ಲೈನ್ ಮೇಲೆ ಕುಶಾಲನಗರ ಸಮೀಪ ಭಾರೀ ಘಾತ್ರದ ಮರಬಿದ್ದ ಪರಿಣಾಮ ವಿದ್ಯುತ್ ಕಡಿತವಾಗಿದೆ. ಇದರಿಂದಾಗಿ ಕೊಡಗು ಜಿಲ್ಲೆ ಬಹುತೇಕ ಕತ್ತಲೆಯಲ್ಲಿ ಮುಳುಗಿದೆ.

Madikeri Rain 2021 2 medium

ಮಳೆ ಜೊತೆಗೆ ಭಾರೀ ಗಾಳಿ ಬೀಸುತ್ತಿದ್ದು, ನೂರಾರು ಕಡೆಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ. ಪರಿಣಾಮವಾಗಿ ಗ್ರಾಮೀಣ ಕೊಡಗು ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದೆ. ಭಾಗಮಂಡಲ ಮತ್ತು ತಲಕಾವೇರಿ ಭಾಗದಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಭಾಗಮಂಡದಲ್ಲಿ ಕಳೆದ 24 ಗಂಟೆಯಲ್ಲಿ 103 ಮಿಲಿ ಮೀಟರ್ ಗೂ ಅಧಿಕ ಮಳೆ ಸುರಿದಿದೆ. ಇದು ಕಾವೇರಿ ನದಿ ಪಾತ್ರದ ಹತ್ತಾರು ಗ್ರಾಮಗಳ ಸಾವಿರಾರು ಕುಟುಂಬಗಳನ್ನು ಆತಂಕಕ್ಕೆ ದೂಡಿದೆ. ಒಟ್ಟಿನಲ್ಲಿ ಎರಡು ದಿನದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದ್ದು, ಇನ್ನೂ ಎರಡು ದಿನ ಭಾರೀ ಮಳೆ ಸುರಿಯುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Madikeri Rain 2021 3 medium

ಆಕಾಶವಾಣಿ ಬಳಿ ಮತ್ತೆ ಗುಡ್ಡ ಕುಸಿತ:
ಮಡಿಕೇರಿ ನಗರದ ಆಕಾಶವಾಣಿ ಕೇಂದ್ರದ ಬಳಿಯು ಭೂಕುಸಿತ ಕುಸಿತ ಉಂಟಾಗಿದೆ. ಮಡಿಕೇರಿಯ ಆಕಾಶವಾಣಿ ಟವರ್ ಗೆ ಕಂಟಕ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಟವರ್ ನಿಂದ ಕೇವಲ ಐದು ಅಡಿ ದೂರದಲ್ಲಿ ಭೂಕುಸಿತ ಅಗಿದೆ. ಕಳೆದ ಬಾರಿ ಕುಸಿದಿದ್ದ ಜಾಗದ ಪಕ್ಕದಲ್ಲೇ ಮತ್ತೆ ಭೂ ಕುಸಿತವಾಗಿದೆ. ಮಳೆ ಇದೇ ರೀತಿಯಲ್ಲಿ ಮುಂದುವರಿದಲ್ಲಿ ಆಕಾಶವಾಣಿ ಟವರ್ ಬೀಳುವ ಸಾಧ್ಯತೆ ಹೆಚ್ಚಾಗಿದು. ಆಕಾಶವಾಣಿ ಸಿಬ್ಬಂದಿಗಳಿಗೆ ಅತಂಕ ಮನೆ ಮಾಡಿದೆ.

Madikeri Rain 2021 4 medium

2018 ರಲ್ಲೂ ಆಕಾಶವಾಣಿ ಟವರ್ ಬಳಿಯೇ ಗುಡ್ಡ ಕುಸಿದಿತ್ತು. ಬಳಿಕ 2020 ರಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಮಾಡುವ ಸಂದರ್ಭದಲ್ಲಿಯೂ ಗುಡ್ಡ ಕುಸಿದಿತ್ತು. ಕಾರ್ಮಿಕರು ಪ್ರಾಣಾಪಾಯದಿಂದ ಪಾರಗಿದ್ರು. ಇದೀಗ ತಡೆಗೋಡೆ ನಿರ್ಮಾಣ ಮಾಡಿದ ಪಕ್ಕದಲ್ಲೇ ಮತ್ತೆ ಭೂ ಕುಸಿತವಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಹಾಗೂ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಅಡ್ಡಲಾಗಿ ಮಡಿಕೇರಿ ಪೊಲೀಸರು ಬ್ಯಾರೀಕೇಟ್ ಗಳನ್ನು ಅಳವಡಿಸಿ ಸಾರ್ವಜನಿಕರು ಯಾರು ಹೋಗದಂತೆ ಸೂಚನೆ ನೀಡಿದ್ದಾರೆ.

Madikeri Rain 2021 5 medium

ನದಿ ತೀರದ ನಿವಾಸಿಗಳಲ್ಲಿ ಆತಂಕ
ಮದೆನಾಡು, ಜೋಪುಪಾಲ, ಕೊಯನಾಡು ಮತ್ತು ಸಂಪಾಜೆ ಸುತ್ತಮುತ್ತ ಗ್ರಾಮಗಳಲ್ಲಿ ಮಳೆಯೊಂದಿಗೆ ಭಾರೀ ಗಾಳಿ ಬೀಸುತ್ತಿದೆ. ಪಯಸ್ವಿನಿ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದಿಂದ ಕೊಯನಾಡು ಗ್ರಾಮದ ಸುತ್ತಮುತ್ತಲ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ಮಣ್ಣಿನ ರಾಶಿ ಮತ್ತು ಮರಗಳು ಕೊಚ್ಚಿಕೊಂಡು ಬರುತ್ತಿದ್ದು, ಇತ್ತೀಚೆಗೆ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುಕಟ್ಟೆಯಿಂದ ಪ್ರವಾಹದ ಮಾರ್ಗ ಬದಲಾಗಿ ಅಪಾಯ ಸಂಭವಿಸಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ

Madikeri Rain 2021 6 medium

ಕ್ಷಣ ಕ್ಷಣಕ್ಕೂ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. 2018 ರಲ್ಲಿ ಇದೇ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಸಾವು, ನೋವಿನ ಬಗ್ಗೆ ಇಲ್ಲಿಯವರು ನೆನಪಿಸಿಕೊಳ್ಳುತ್ತಿದ್ದಾರೆ. ಇನ್ನೂ ವಿರಾಜಪೇಟೆ ತಾಲೂಕಿನ ಕರಡಿಗೋಡು ಗುಹ್ಯ ಕಕ್ಕಟ್ ಕಾಡು ಪ್ರದೇಶದಲ್ಲಿಯೂ ಕಾವೇರಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು.ಇಲ್ಲಿನ ನಿವಾಸಿಗಳಿಗೆ ಮತ್ತೆ ಪ್ರವಾಹದ ಅತಂಕ ಎದುರಾಗಿದೆ. ಇದನ್ನೂ ಓದಿ: ಉಡುಪಿಯಲ್ಲಿ ಗಾಳಿ ಮಳೆ- ಪ್ರವಾಸಿಗರಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

TAGGED:floodKodaguLand SlidemadikerimonsoonPublic TVrainriverಕೊಡಗುನದಿಪಬ್ಲಿಕ್ ಟಿವಿಪ್ರವಾಹಭೂ ಕುಸಿತಮಡಿಕೇರಿಮಳೆಮಾನ್ಸೂನ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
4 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
17 minutes ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
22 minutes ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
34 minutes ago
Zimbabwe 1
Cricket

19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

Public TV
By Public TV
40 minutes ago
Amit shah
Latest

ಫೆ.21ಕ್ಕೆ ಅಸ್ಸಾಂಗೆ ಅಮಿತಾ ಶಾ – ಭಾರತ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿಗೆ ಭೇಟಿ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?