-ಇಂತಹ ದುಷ್ಕೃತ್ಯವನ್ನು ಇತರೆ ಮುಸ್ಲಿಮರು ಖಂಡಿಸಬೇಕು
ಶಿವಮೊಗ್ಗ: ಬೆಂಗಳೂರಿನಲ್ಲಿ ಮತಾಂಧ ಮುಸಲ್ಮಾನರ ದಾಳಿ ಖಂಡನೀಯ. ಆದರೆ ಈ ಘಟನೆ ನಡೆದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಖಂಡನೆ ವ್ಯಕ್ತಪಡಿಸಿಲ್ಲ. ಇದನ್ನು ನೋಡಿದರೆ ಇಂತಹ ಮತಾಂಧ ಮುಸಲ್ಮಾನರಿಗೆ ಡಿಕೆಶಿ ಬೆಂಬಲ ಇದೆ ಅನಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರ ಜೊತೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ರವರ ಮನೆಯ ದಾಳಿ, ಬೆಂಗಳೂರಿನಲ್ಲಿ ನಡೆದ ದುಷ್ಕೃತ್ಯ ಖಂಡನೀಯವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದಿದ್ದಾರೆ. ಇದನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎನ್ನದೇ ಎಲ್ಲರೂ ಖಂಡಿಸಬೇಕಿದೆ ಎಂದರು. ಇದನ್ನೂ ಓದಿ: ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್ಡಿಕೆ
ನಾನು ಎಲ್ಲಾ ಮುಸ್ಲಿಮರು ಕೆಟ್ಟವರು ಎಂದು ಹೇಳುತ್ತಿಲ್ಲ. ಆದರೆ ಮತಾಂಧ ಮುಸಲ್ಮಾರು ಮಾತ್ರ ಇಂತಹ ದುಷ್ಕೃತ್ಯದಲ್ಲಿ ತೂಡಗಿಕೊಳ್ಳುತ್ತಾರೆ. ಇಂತಹ ಮತಾಂಧ ಮುಸ್ಲಿಮರ ವಿರುದ್ಧ ಎಲ್ಲಾ ಪಕ್ಷಗಳು ಪಕ್ಷಾತೀತವಾಗಿ ಖಂಡಿಸಬೇಕಿದೆ ಎಂದರು. ದುಷ್ಕೃತ್ಯದಲ್ಲಿ ಪೊಲೀಸರು, ಮಾಧ್ಯಮದವರ ಮೇಲೂ ಹಲ್ಲೆ ನಡೆದಿದೆ. ಉಗ್ರಗಾಮಿಗಳನ್ನು ಸದೆಬಡೆದ ದೇಶ ಭಾರತ. ಹೀಗಾಗಿ ಇಂತಹ ದುಷ್ಕೃತ್ಯಗಳಿಗೆ ಎದರುವ ಮಾತೇ ಇಲ್ಲ. ಆದರೆ ಈ ಘಟನೆ ಬಗ್ಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾಕೆ ಖಂಡನೆ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನೆ ಮಾಡಿದರು. ಡಿ.ಕೆ.ಶಿವಕುಮಾರ್ ಇಂತಹವರ ವಿರುದ್ದ ಹೇಳಿಕೆ ನೀಡಬೇಕಿತ್ತು. ಇಂತಹ ಮತಾಂಧ ಮುಸ್ಲಿಂರಿಗೆ ಡಿ.ಕೆ.ಶಿವಕುಮಾರ್ ಬೆಂಬಲವಿದೆ ಎಂದೆನ್ನಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಅಶಾಂತಿಯೇ ಕೆಲವರ ರಾಜಮಾರ್ಗ ಎಂದಾದ್ರೆ, ಆ ಮಾರ್ಗವನ್ನೇ ಬದಲಿಸಲು ಸರ್ಕಾರ ಬದ್ಧ: ಆರ್.ಅಶೋಕ್
ಘಟನೆಯಲ್ಲಿ ಯಾರೇ ಇರಲಿ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ. ಪಕ್ಷಬೇಧ ಮರೆತು ಎಲ್ಲಾ ದೇಶಭಕ್ತರು ಒಂದಾಗಿ ಖಂಡಿಸಬೇಕಿದೆ. ಮತಾಂಧ ಮುಸ್ಲಿಂರಿಗೆ ಹಿಂದಿನ ಸರ್ಕಾರಗಳ ಬೆಂಬಲದಿಂದ ಈ ರೀತಿ ಬಲಿತಿದ್ದಾರೆ. ಮುಂದೆ ಈ ರೀತಿ ಆಗಲು ಬಿಡಲ್ಲ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್ಡಿಕೆ https://t.co/j0DM1kHSvo#Bengaluru #Bangaloreriots #BangaloreViolence #HDKumaraswamy @hd_kumaraswamy @INCKarnataka @BJP4Karnataka
— PublicTV (@publictvnews) August 12, 2020
ಡಿಕೆಶಿ ಪ್ರತಿಕ್ರಿಯೆ: ಯಾರು ಕೂಡ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ನಿನ್ನೆ ನಡೆದ ಘಟನೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪೊಲೀಸ್ ಠಾಣೆಯ ಆಸ್ತಿ- ಪಾಸ್ತಿಗೆ ಮಾಡಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ.
ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡ್ಬಾರ್ದು- ಗಲಭೆಗೆ ಡಿಕೆಶಿ ಖಂಡನೆ https://t.co/n7vlRwKWOt#Bangaloreriots #Bengaluru #BangaloreViolence #Congress #KPCC #DKShivakumar @INCKarnataka @INCKarnataka
— PublicTV (@publictvnews) August 12, 2020