ಮದ್ವೆಯಾಗದೇ ಸಂಸಾರ – ತಾಳಿ ಕಟ್ಟು ಅಂದಿದ್ದಕ್ಕೆ ಗೆಳತಿ, ಅತ್ತೆಯ ಕೊಲೆ

Public TV
1 Min Read
CKB Double Murder

– ಇಬ್ಬರ ಕತ್ತು ಕೊಯ್ದು ಕೊಂದು ಪೊಲೀಸರಿಗೆ ಶರಣಾದ

ಚಿಕ್ಕಬಳ್ಳಾಪುರ: ಪ್ರಿಯತಮೆ ಮತ್ತು ಆಕೆಯ ತಾಯಿಯನ್ನ ಕೊಂದು ಆರೋಪಿ ಪೊಲೀಸರಿಗೆ ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ನಡೆದಿದೆ.

CKB DOUBLE MURDER 3

ಲಕ್ಷ್ಮಿದೇವಿ (50) ಮತ್ತು ರಮಾದೇವಿ (30) ಮೃತ ತಾಯಿ ಮಗಳು. ಓರಿಸ್ಸಾ ಮೂಲದ ಮಲಯಫರೀದ್ ಮದುವೆಯಾಗದೇ ರಮಾದೇವಿ ಸಂಸಾರ ನಡೆಸುತ್ತಿದ್ದನು. ಮದುವೆಗೂ ಮುನ್ನವೇ ಜೋಡಿ ಮಗುವಾಗಿತ್ತು. ಐದು ತಿಂಗಳು ಮಗುವಾದ್ರು ಮಲಯಫರೀದ್ ಮದುವೆಯಾಗಲು ಹಿಂದೇಟು ಹಾಕಿದ್ದನು.

CKB DOUBLE MURDER 2

5 ತಿಂಗಳ ಮಗುವಿದ್ದ ಕಾರಣ ಮಗಳನ್ನ ಮದುವೆ ಆಗುವಂತೆ ಲಕ್ಷ್ಮಿದೇವಿ ಒತ್ತಾಯಿಸುತ್ತಿದ್ದರು. ಮಧ್ಯರಾತ್ರಿ ತಾಯಿ ಮತ್ತು ಮಗಳ ಕತ್ತುಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಂತರ ಮಗುವಿನ ಜೊತೆ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಎರಡು ಮೃತದೇಹಗಳನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ತನಿಖೆ ನಡೆಸುತ್ತಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *