ಹುಬ್ಬಳ್ಳಿ: ಮನೆ ನಿರ್ಮಾಣ ಕಾಮಗಾರಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಬಿಡನಾಳದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸಿದ್ದಾರೂಢ ಭೋವಿ ಎಂದು ಗುರುತಿಸಲಾಗಿದ್ದು, ಇವರು ಕಲಘಟಗಿ ತಾಲೂಕಿನ ಮಿಶ್ರಿಕೋಟಿ ನಿವಾಸಿಯಾಗಿದ್ದಾರೆ. ಮನೆ ನಿರ್ಮಾಣ ಕಾಮಗಾರಿಯ ಕೆಲಸಕ್ಕೆ ನೀರಿನ ಮೋಟರ್ ಆನ್ ಮಾಡುವ ವೇಳೆ ಕಾರ್ಮಿಕ ಸಿದ್ದಾರೂಢ ಭೋವಿ ಮೃತಪಟ್ಟಿದ್ದಾರೆ.
ಬಿಡನಾಳ ಗ್ರಾಮದಲ್ಲಿ ಮನೆ ಕಟ್ಟುವ ಕಾಮಗಾರಿಗಾಗಿ ಮೇಸ್ತ್ರಿಯೊಂದಿಗೆ ಆಗಮಿಸಿದ್ದ ಕಾರ್ಮಿಕ ನೀರಿಗಾಗಿ ಮೋಟಾರ್ ಆರಂಭಿಸಲು ಹೋದ ವೇಳೆ ಅದೇ ಸಮಯದಲ್ಲಿ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ಮೃತ ಸಿದ್ದಾರೂಢ ಶವವನ್ನ ಕಿಮ್ಸ್ ಶವಗಾರಕ್ಕೆ ರವಾನಿಸಿದ್ದಾರೆ.