ಬಳ್ಳಾರಿ: ಮನೆ ಬೀಗ ಮುರಿದು ಕಳ್ಳತನ ಮಾಡುತಿದ್ದ, ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.
ಶ್ರೀಕಾಂತ್ (26) ರೇಣುಕಪ್ಪ ( 24) ಗಾದೆಪ್ಪ (33) ಬಂಧಿತ ಆರೋಪಿಗಳಾಗಿದ್ದಾರೆ. ಹಲವಾರು ದಿನಗಳಿಂದ ಮನೆ ಬೀಗ ಮುರಿದು ಕಳ್ಳತನ ಮಾಡಿದ್ದ ಕಳ್ಳರನ್ನು ಪೊಲೀಸರು ಬಂಧನ ಮಾಡಿದ್ದಾರೆ.
- Advertisement 2
- Advertisement 3
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕು ಬಾದನಹಟ್ಟಿ ಗ್ರಾಮ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಕುರುಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಕುರುಗೋಡು ತಾಲೂಕಿನ ವದ್ದಟ್ಟಿ ಗ್ರಾಮದ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ 7,63,000 ಬೆಲೆಯ ಸುಮಾರು 21 ತೊಲೆ 2 ಗ್ರಾಮ ಬಂಗಾರದ ಆಭರಣ ಮತ್ತು 10,5000 ನಗದು ಹಣವನ್ನು ದೋಚಿದ್ದಾರೆ. ಹಾಗೇ ಬಾದನಹಟ್ಟಿ ಗ್ರಾಮದಲ್ಲಿ ಮನೆಯ ಬೀಗ ಮುರಿದು 4,37,500 ಬೆಲೆಯ ಬೆಳ್ಳಿ ಹಾಗೂ 12 ತೊಲೆಯ ತೂಕದ ಬಂಗಾರ ಆಭರಣಗಳು ಹಾಗೂ 1,50,000 ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಇದನ್ನೂ ಓದಿ: ನನಗೆ ಇಂತಹದ್ದೇ ಖಾತೆ ಬೇಕು ಅಂತ ಕೇಳುವುದು ನನ್ನ ಧರ್ಮ: ಆನಂದ್ ಸಿಂಗ್
- Advertisement 4
ಈ ಪ್ರಕರಣವನ್ನು ಕುರುಗೋಡು ಪೊಲೀಸರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.