ಮರಕ್ಕೆ ಕಾರು ಡಿಕ್ಕಿ- ಇಬ್ಬರ ದುರ್ಮರಣ, 6 ಮಂದಿಗೆ ಗಾಯ

Public TV
0 Min Read
SMG

ಶಿವಮೊಗ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿಗೆ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ.

SMG 2

ರಾಜೇಶ್ (19), ತರುಣ್ (19) ಮೃತಪಟ್ಟ ಯುವಕರು. ಘಟನೆಯಲ್ಲಿ ಗಾಯಗೊಂಡ 6 ಮಂದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಮೂಲದ 8 ಮಂದಿ ಯುವಕರು ಗೋವಾಕ್ಕೆ ಪ್ರವಾಸ ತೆರಳಿದ್ದರು. ಗೋವಾದಿಂದ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

SMG

ಘಟನೆ ಕುರಿತು ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *