Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮರ್ಯಾದಾ ಹತ್ಯೆ – ಕಿಡ್ನಾಪ್ ಮಾಡಿ 4 ತಿಂಗ್ಳ ಹಿಂದೆ ಮದ್ವೆಯಾಗಿದ್ದ ಯುವಕನ ಹತ್ಯೆ

Public TV
Last updated: September 25, 2020 1:36 pm
Public TV
Share
3 Min Read
honour killing
SHARE

– ಹುಡುಗನ ಮನೆಯಿಂದ್ಲೇ ದಂಪತಿಯ ಅಪಹರಣ

ಹೈದರಾಬಾದ್: ನಗರದಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದ್ದು, ನಾಲ್ಕು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ನವವಿವಾಹಿತನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಕೊಲೆ ಮಾಡಲಾಗಿದೆ.

ಮೃತನನ್ನು ಹೇಮಂತ್ ಕುಮಾರ್ ಎಂದು ಗುರುತಿಸಲಾಗಿದೆ. ಚಂದನಗರದಲ್ಲಿರುವ ತನ್ನ ಮನೆಯಿಂದ ಹೇಮಂತ್ ಕುಮಾರ್‌ನನ್ನು ಅಪಹರಿಸಲಾಗಿತ್ತು. ಆದರೆ ಗುರುವಾರ ತಡರಾತ್ರಿ ಸಂಗರೆಡ್ಡಿ ಜಿಲ್ಲೆಯಲ್ಲಿ ಆತನ ಶವವನ್ನು ಪತ್ತೆ ಮಾಡಲಾಗಿದೆ. ಹೇಮಂತ್ ಮತ್ತು ಅವಂತಿ ಇಬ್ಬರು ಪರಸ್ಪರ ಪ್ರೀತಿಸಿ ನಾಲ್ಕು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದರು. ಹೀಗಾಗಿ ಹತ್ಯೆಯ ಹಿಂದೆ ಅವಂತಿಯ ಕುಟುಂಬವಿದೆ ಅಂತ ತಿಳಿದುಬಂದಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸೈಬರಾಬಾದ್ ಪೊಲೀಸರು ತಿಳಿಸಿದ್ದಾರೆ.

Can lust and love coexist in relationship

ಅವಂತಿಯ ಸೋದರ ಮಾವ ಯುಗಂದರ್ ರೆಡ್ಡಿ ಮತ್ತು ಇತರ ಇಬ್ಬರು ಹೇಮಂತ್‍ನನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಹತ್ತಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಕೊಲೆಯ ಹಿಂದೆ ಆಕೆಯ ಮಾವ ಯುಗಂದರ್ ರೆಡ್ಡಿ ಪ್ರಮುಖ ಆರೋಪಿಯಾಗಿದ್ದು, ಈ ಹತ್ಯೆಯಲ್ಲಿ ಪೋಷಕರು ಭಾಗಿಯಾಗಿದ್ದಾರೆ ಅಂತ ಅವಂತಿ ಆರೋಪಿಸಿದ್ದಾಳೆ ಎಂದು ಡಿಸಿಪಿ ಎಂ.ವೆಂಕಟೇಶ್ವರಲು ಹೇಳಿದರು.

Hemanth1

ಏನಿದು ಪ್ರಕರಣ?
ಹೇಮಂತ್ ಮತ್ತು ಅವಂತಿ ಸುಮಾರು ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ಜೋಡಿ 2020ರ ಜೂನ್‍ನಲ್ಲಿ ಕುತ್ಬುಲ್ಲಾಪುರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿದ್ದರು. ಹೇಮಂತ್ ಪದವಿ ಮುಗಿಸಿದ್ದರೆ, ಅವಂತಿ ಎಂಜಿನಿಯರಿಂಗ್ ಮುಗಿಸಿದ್ದಳು. ಮದುವೆಯಾದ ನಂತರ ಹೇಮಂತ್ ಮತ್ತು ಅವಂತಿ ನಗರದ ಚಂದನಗರದಲ್ಲಿ ವಾಸವಾಗಿದ್ದರು. ಗುರುವಾರ ಮಧ್ಯಾಹ್ನ ಹೇಮಂತ್ ತನ್ನ ತಂದೆ ಮುರಳಿ ಕೃಷ್ಣಗೆ ಫೋನ್ ಮಾಡಿ ಅವಂತಿಯ ಕುಟುಂಬದವರು ನಮ್ಮ ಮನೆಗೆ ಬಂದಿದ್ದಾರೆ ಎಂದು ತಿಳಿಸಿದ್ದನು.

marriage app

ರಾಜಿ ಮಾಡಿಕೊಳ್ಳಲು ಬಂದಿರಬಹುದೆಂದು ಭಾವಿಸಿ ಎಂದು ಮನೆಯ ಬಳಿ ಹೋದೆ. ಆದರೆ ನಾನು ಮನೆಗೆ ತಲುಪಿದಾಗ ಕುಟುಂಬದವರು ಹೇಮಂತ್ ಮತ್ತು ಅವಂತಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗುವುದನ್ನು ನೋಡಿದೆ. ಸಹಾಯಕ್ಕಾಗಿ ಹೇಮಂತ್ ಕೂಗುತ್ತಿರುವುದನ್ನು ಕೇಳಿ ತಕ್ಷಣ ತನ್ನ ಸ್ಕೂಟರ್‌ನಲ್ಲಿ ಕಾರನ್ನು ಹಿಂಬಾಲಿಸಿದೆ ಎಂದು ಹೇಮಂತ್ ತಂದೆ ಮುರಳಿ ಕೃಷ್ಣ ಹೇಳಿದ್ದಾರೆ.

Hemanth Wife

ಕಾರು ಗೋಪನ್ಪಲ್ಲಿ ತಾಂಡಾ ತಲುಪಿದಾಗ ಇಬ್ಬರು ವಾಹನದಿಂದ ಹೊರಬರಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವಂತಿ ತಪ್ಪಿಸಿಕೊಂಡಿದ್ದಾಳೆ. ಆದರೆ ಹೇಮಂತ್‍ನನ್ನು ಕರೆದುಕೊಂಡು ಹೋಗಿದ್ದಾರೆ. ಆಗ ಮುರಳಿ ಕೃಷ್ಣ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಡಿದ್ದಾರೆ. ಆದರೆ ಅವಂತಿ ಪೊಲೀಸರು ಸ್ಪಂದಿಸುವಲ್ಲಿ ವಿಳಂಬವಾಗಿದೆ ಎಂದಿದ್ದಾಳೆ. ನಾವು ಪೊಲೀಸರಿಗೆ ಮಾಹಿತಿ ನೀಡಿದ್ದರೂ ಸಹ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅವರು ತಕ್ಷಣ ಪ್ರತಿಕ್ರಿಯಿಸಿದ್ದರೆ ಇಂದು ನಾನು ನನ್ನ ಪತಿಯನ್ನು ಕಳೆದುಕೊಳ್ಳುತ್ತಿರಲಿಲ್ಲ” ಎಂದು ಕಣ್ಣೀರು ಹಾಕಿದ್ದಾಳೆ.

murder

ನನ್ನ ತಂದೆ ಲಕ್ಷ್ಮ ರೆಡ್ಡಿ ನಮ್ಮ ಕುಟುಂಬದವರ ಜೊತೆ ಯಾವುದೇ ಸಂಪರ್ಕ ಇಟ್ಟುಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದರು. ಅಲ್ಲದೇ ಕುಟುಂಬದ ದಾಖಲೆಗಳಿಗೆ ಸಹಿ ಕೂಡ ಮಾಡಿಸಿಕೊಂಡಿದ್ದರು. ನೀನು ನಮ್ಮ ಕುಟುಂಬದ ಯಾವುದೇ ಆಸ್ತಿಯ ಮೇಲೆ ಹಕ್ಕನ್ನು ಹೊಂದಿಲ್ಲ ಎಂದು ಹೇಳಿರುವುದಾಗಿ ಅವಂತಿ ತಿಳಿಸಿದ್ದಾಳೆ.

love hand wedding valentine day together holding hand 38810 3580 medium

ಆಸ್ತಿಗಳಿಗಾಗಿ ನಾವು ಕೂನೂನಿನ ಮೂಲಕ ಹೋರಾಡುತ್ತೇವೆ ಎಂದು ಅವರು ಭಾವಿಸಿರಬೇಕು. ಯಾಕೆಂದರೆ ಇತ್ತೀಚೆಗೆ ಸುಪ್ರೀಂಕೋರ್ಟ್ ಕೂಡ ಪೋಷಕರ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಹಕ್ಕಿದೆ ಎಂದು ಆದೇಶ ಹೊರಡಿಸಿದೆ. ಆದರೆ ಅವರು ನನ್ನ ಮಗನನ್ನು ಕೊಂದಿದ್ದಾರೆ. ಅದು ಆಸ್ತಿಗೆ ಸಮವಾಗುವುದಿಲ್ಲ ಎಂದು ಹೇಮಂತ್ ತಂದೆ ಕಣ್ಣೀರು ಹಾಕಿದರು.

ನಾವು ಅವರ ಸ್ಪಂದನೆಗೆ ಪ್ರತಿಕ್ರಿಯೆ ನೀಡಲು ಯಾವುದೇ ವಿಳಂಬ ಮಾಡಿಲ್ಲ. ಶಂಕಿತರನ್ನು ತಕ್ಷಣವೇ ಬಂಧಿಸಲಾಯಿತು. ಅವರ ತಪ್ಪೊಪ್ಪಿಗೆಯ ಆಧಾರದ ಮೇಲೆ ಹೇಮಂತ್ ಶವವನ್ನು ಸಂಗರೆಡ್ಡಿ ಜಿಲ್ಲೆಯಲ್ಲಿ ಪತ್ತೆ ಮಾಡಲಾಗಿದೆ ಎಂದು ಇನ್ಸ್‌ಪೆಕ್ಟರ್ ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

police 1 e1585506284178 3 medium

TAGGED:arrestfamilyhusbandHyderabadlovemarriageparentspolicePublic TVಅರೆಸ್ಟ್ಕುಟುಂಬಪತಿಪಬ್ಲಿಕ್ ಟಿವಿಪೊಲೀಸ್ಪೋಷಕರುಪ್ರೀತಿಮದುವೆಹೈದರಾಬಾದ್
Share This Article
Facebook Whatsapp Whatsapp Telegram

You Might Also Like

Ashwin 2
Cricket

ಗಿಲ್‌ ಬದಲು ಆಕಾಶ್‌ ದೀಪ್‌ಗೆ ಪಂದ್ಯಶ್ರೇಷ್ಠ ನೀಡಬೇಕಿತ್ತು: ಅಶ್ವಿನ್‌

Public TV
By Public TV
10 minutes ago
Siddaramaiah 7
Bengaluru City

ಅಡ್ಡ ನಿಮ್ದು, ಖೆಡ್ಡಾ ನಂದು: ಡೆಲ್ಲಿಯಲ್ಲೇ ಸಿದ್ದರಾಮಯ್ಯ ಸಂದೇಶ

Public TV
By Public TV
17 minutes ago
Guwahati live in relationship
Crime

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – ಕೈ ಕೊಯ್ದುಕೊಂಡ ಲಿವ್‌-ಇನ್‌ ಪಾರ್ಟ್ನರ್‌

Public TV
By Public TV
28 minutes ago
ಸಾಂದರ್ಭಿಕ ಚಿತ್ರ
Bengaluru City

ʻಕೈʼ ಸರ್ಕಾರದಿಂದ ಬೀದಿ ನಾಯಿಗಳಿಗೂ ಗ್ಯಾರಂಟಿ – ಬಾಡೂಟಕ್ಕಾಗಿ ಬಿಬಿಎಂಪಿಯಿಂದ 2.80 ಕೋಟಿ ಟೆಂಡರ್

Public TV
By Public TV
33 minutes ago
Kalaburagi Suicide
Crime

ತಾಯಿಯನ್ನು ಬಿಟ್ಟು ವಸತಿ ನಿಲಯದಲ್ಲಿ ಇರಲಾರೆ ಎಂದ ಬಾಲಕ ನೇಣಿಗೆ ಶರಣು!

Public TV
By Public TV
41 minutes ago
A young man jumped off Kampli bridge for reels Ballari
Bellary

ರೀಲ್ಸ್‌ಗಾಗಿ ಕಂಪ್ಲಿ ಸೇತುವೆಯಿಂದ ಜಿಗಿದು ಹುಚ್ಚಾಟ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?