Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ

Bengaluru City

ಮಲ್ಲೇಶ್ವರದಲ್ಲಿ ದಲಿತರಿಗೆ ಲಸಿಕೆ ನಿರಾಕರಣೆ: ಹರಿಪ್ರಸಾದ್ ಆರೋಪ ಶುದ್ಧ ಸುಳ್ಳೆಂದ ಡಿಸಿಎಂ

Public TV
Last updated: June 2, 2021 8:47 pm
Public TV
Share
2 Min Read
ashwath narayan 1
SHARE

– ಲಸಿಕೆ ಅಭಿಯಾನ ಹಳಿತಪ್ಪಿಸುವುದೇ ಅವರ ದುರುದ್ದೇಶ

ಬೆಂಗಳೂರು: ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಜಾತಿ ಆಧಾರದ ಮೇಲೆ ಲಸಿಕೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಿರುವ ಆರೋಪವನ್ನು ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದೊಂದು ಬೇಜವಾಬ್ದಾರಿ ಹೇಳಿಕೆ. ಅವರಿಗೆ ಜಾತಿ- ಧರ್ಮದ ಹೆಸರೇಳದಿದ್ದರೆ ನಿದ್ದೆಯೂ ಬರಲ್ಲ. ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಲಸಿಕೆ ಅಭಿಯಾನವನ್ನು ಹೇಗಾದರೂ ಹಳಿತಪ್ಪಿಸಬೇಕು ಎಂಬ ಷಡ್ಯಂತ್ರ ಅವರು ಇಟ್ಟುಕೊಂಡಿರುವಂತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಲಸಿಕೆಯ ವಿಚಾರದಲ್ಲಿ ಆರಂಭದಿಂದಲೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್, ಇದೀಗ ಆದ್ಯತೆಯ ಗುಂಪು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ನಡೆಸುತ್ತಿರುವ ಲಸಿಕಾಕರಣದಲ್ಲೂ ಜಾತಿಯ ಲೆಕ್ಕಾಚಾರ ಮಾಡುತ್ತಿರುವುದು ವಿಪರ್ಯಾಸ.

ಮಲ್ಲೇಶ್ವರದಲ್ಲಿ 9000ಕ್ಕೂ ಹೆಚ್ಚಿನ ಲಸಿಕಾಕರಣ ನಡೆದಿದ್ದು, ಯಾವುದೇ ವರ್ಗದ ಜಾತಿ, ಧರ್ಮದ ಪ್ರಶ್ನೆಯೇ ಎದ್ದಿಲ್ಲ.

2/4

— Dr. C.N. Ashwath Narayan (@drashwathcn) June 2, 2021

ಲಸಿಕೆಯಲ್ಲಿ ಜಾತಿ ತರುವ ಕೆಲಸವನ್ನು ನಾನಾಗಲಿ ಅಥವಾ ನಮ್ಮ ಪಕ್ಷವಾಗಲಿ ಮಾಡಿಲ್ಲ. ಅಂಥ ಯಾವುದೇ ಘಟನೆ ಕ್ಷೇತ್ರದಲ್ಲಿ ನಡೆದಿಲ್ಲ. ಯಾರಿಗೂ ಲಸಿಕೆ ನಿರಾಕರಿಸಿಲ್ಲ” ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಅಂಕಿ- ಅಂಶ ಕೊಟ್ಟ ಡಿಸಿಎಂ:
ದಾನಿಗಳ ನೆರವಿನಿಂದ ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ಖರೀದಿ ಮಾಡಿ ಕೊಳೆಗೇರಿಗಳಲ್ಲಿ ವಾಸಿಸುವ 1,000ಕ್ಕೂ ಹೆಚ್ಚು ಬಡವರಿಗೆ, ಆರ್ಥಿಕ ದುರ್ಬಲರಿಗೆ ಲಸಿಕೆ ಕೊಡಿಸಿದ್ದೇನೆ. ಅಲ್ಲದೆ 9,000 ಜನರಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ ಕ್ಷೇತ್ರದ 7 ಸ್ಲಂಗಳ ಜನರೇ ಹೆಚ್ಚು ಇದ್ದಾರೆ. ಸತ್ಯ ಅರ್ಥ ಮಾಡಿಕೊಳ್ಳದೆ ಸುಳ್ಳು ಆರೋಪ ಮಾಡುವುದು ಎಷ್ಟು ಸರಿ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು.

ಸ್ವತಃ ಸ್ಲಂಗಳಿಗೆ ಭೇಟಿ ನೀಡಿ, ಮುಂಚೂಣಿ ಕಾರ್ಯಕರ್ತರಿಗೆ, ಆದ್ಯತೆಯ ಗುಂಪಿನವರಿಗೆ ಲಸಿಕೆ ನೀಡಲಾಗಿದೆ. ಕಾರ್ಮಿಕರು, ಚಾಲಕರು, ಮೆಡಿಕಲ್ ಸೇವೆಯಲ್ಲಿರುವವರು, ದಿವ್ಯಾಂಗರು, ಬೀದಿ ವ್ಯಾಪಾರಿಗಳು ಹೀಗೆ ಯಾರಿಗೆ ಸೋಂಕು ತಗುಲುವ ಸಾಧ್ಯತೆ ಜಾಸ್ತಿ ಇದೆ, ಅವರಿಗೆ ಲಸಿಕಾಕರಣ ನಡೆಸಿದ್ದೇವೆ. ಅದಕ್ಕೆ ನಮ್ಮ ಕಾರ್ಯಕರ್ತರ ಮೇಲೆ ಹೆಮ್ಮೆಯೂ ಇದೆ.

3/4

— Dr. C.N. Ashwath Narayan (@drashwathcn) June 2, 2021

ಮಲ್ಲೇಶ್ವರದ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ದಲಿತರಿಗೆ ಲಸಿಕೆ ನಿರಾಕರಿಸಲಾಗಿದೆ ಎಂದು ಹರಿಪ್ರಸಾದ್ ದೂರಿದ್ದಾರೆ. ಇದು ಶುದ್ಧ ಸುಳ್ಳು. ಅಂದು, ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿನ ಜನರೂ, ಅವರ ಆರೈಕೆ ಮಾಡುವವರಿಗೆ ಲಸಿಕೆ ನೀಡಲಾಗುತ್ತಿತ್ತು. ಸರ್ಕಾರ ಹೊರಡಿಸಿರುವ ಈ ಮಾರ್ಗಸೂಚಿ ಪ್ರಕಾರ ಯಾರೇ ಬಂದರೂ ಲಸಿಕೆ ಹಾಕಿ ಕಳಿಸಲಾಗುತ್ತಿದೆ. ಪ್ರತಿಯೊಬ್ಬರ ಆಧಾರ್ ಸಂಖ್ಯೆ ದಾಖಲಿಸಿಕೊಂಡು ವ್ಯಾಕ್ಸಿನ್ ನೀಡಲಾಗುತ್ತಿದೆ. ಇಷ್ಟಕ್ಕೂ ಆಧಾರ್ ಕಾರ್ಡ್ ಮೇಲೆ ಜಾತಿ ನಮೂದಾಗಿರುವುದಿಲ್ಲ ಎಂಬ ಅಂಶವನ್ನು ಹರಿಪ್ರಸಾದ್ ಗಮನಿಸಬೇಕು ಎಂದು ಉಪ ಮುಖ್ಯಮಂತ್ರಿ ತಿರುಗೇಟು ಕೊಟ್ಟರು.

BK Hariprasad

ವೈರಸ್‍ಗೆ ಜಾತಿ- ಧರ್ಮದ ಹಂಗಿಲ್ಲ. ಅದೇ ರೀತಿ ವ್ಯಾಕ್ಸಿನ್‍ಗೆ ಇರುವುದಿಲ್ಲ. ಇದನ್ನು ಹರಿಪ್ರಸಾದ್ ಅವರು ಅರ್ಥ ಮಾಡಿಕೊಳ್ಳಬೇಕು. ಸಂಕಷ್ಟದ ಸಮಯದಲ್ಲಿ ಅವರು ಸರಕಾರಕ್ಕೆ ಸಲಹೆಗಳನ್ನು ನೀಡಿ ಉತ್ತೇಜಿಸಬೇಕೆ ಹೊರತು ಆಗುತ್ತಿರುವ ಕೆಲಸದಲ್ಲಿ ಕಲ್ಲು ಹುಡುಕಿ ನೈತಿಕ ಸ್ಥೈರ್ಯ ಕುಗ್ಗಿಸಬಾರದು. ಇಂಥ ಸೂಕ್ಷ್ಮ ವಿಷಯಗಳಲ್ಲಿ ಜಾತಿ-ಧರ್ಮದಂಥ ಸೂಕ್ಷ್ಮ ಸಂಗತಿಗಳನ್ನು ತರಬಾರದು. ಇವರಿಗೆ ನಾಚಿಕೆಯಾಗಬೇಕು. ಜನ ಪಾಠ ಕಲಿಸಿದ್ದರೂ ಇವರಿಗೆ ಬುದ್ಧಿ ಬಂದಿಲ್ಲ. ಹಾಗಾದರೆ ಇವರ ಪ್ರಕಾರ ಅರ್ಚಕರಿಗೆ ಲಸಿಕೆ ಕೊಡುವ ಹಾಗಿಲ್ಲವೆ? ಎಂದು ಡಿಸಿಎಂ ತರಾಟೆಗೆ ತೆಗೆದುಕೊಂಡರು.

TAGGED:Ashwaththa NarayanCorona VaccineCorona VirusCovid19HariprasadMalleswaraPublic TVಅಶ್ವತ್ಥ ನಾರಾಯಣ್ಕೊರೊನಾ ವೈರಸ್ಕೊರೊನಾ ವ್ಯಾಕ್ಸಿನ್ಕೋವಿಡ್ 19ಪಬ್ಲಿಕ್ ಟಿವಿಮಲ್ಲೇಶ್ವರಂಹರಿಪ್ರಸಾದ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
2 hours ago
01 8
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-1

Public TV
By Public TV
2 hours ago
02 9
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-2

Public TV
By Public TV
2 hours ago
03 8
Big Bulletin

ಬಿಗ್‌ ಬುಲೆಟಿನ್‌ 14 February 2026 ಭಾಗ-3

Public TV
By Public TV
2 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
2 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?