Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಲೇಶ್ವರದಲ್ಲಿ 25 ನರ್ಸರಿ ಶಾಲೆ ಆರಂಭ – ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆಗೆ ಕ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲ್ಲೇಶ್ವರದಲ್ಲಿ 25 ನರ್ಸರಿ ಶಾಲೆ ಆರಂಭ – ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆಗೆ ಕ್ರಮ

Bengaluru City

ಮಲ್ಲೇಶ್ವರದಲ್ಲಿ 25 ನರ್ಸರಿ ಶಾಲೆ ಆರಂಭ – ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಡಿಜಿಟಲ್ ಕಲಿಕೆಗೆ ಕ್ರಮ

Public TV
Last updated: April 7, 2021 7:29 am
Public TV
Share
2 Min Read
ASHWATH 1 1
SHARE

– ಕೋವಿಡ್ ಸೋಂಕಿತರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಲ್ಲೇ ಅತ್ಯುತ್ತಮ ಚಿಕಿತ್ಸೆ

ಬೆಂಗಳೂರು: ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿರುವ 13 ಸರ್ಕಾರಿ ಶಾಲೆಗಳೂ ಸೇರಿದಂತೆ ಒಟ್ಟು 25 ಕಡೆ ನರ್ಸರಿ ಶಾಲೆಗಳನ್ನು ಆರಂಬಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಪ್ರಕಟಿಸಿದರು.

ಮಲ್ಲೇಶ್ವರದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೊದಲು 13 ನರ್ಸರಿಗಳನ್ನು ಶುರು ಮಾಡಲಾಗುವುದು. ತದನಂತರ ಉಳಿದ ನರ್ಸರಿ ಶಾಲೆಗಳನ್ನು ತೆರೆಯಲಾಗುವುದು. ಎಲ್ಲ ಕಡೆಯು ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮ ಕೂಡ ಇರುತ್ತದೆ ಎಂದರು.

ಕ್ಷೇತ್ರದ ಎಲ್ಲ ಶಾಲೆ-ಕಾಲೇಜುಗಳಲ್ಲಿ ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡಿ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಕ್ಷೇತ್ರದ ಎಲ್ಲ ಪ್ರೌಢಶಾಲೆಯ 8,9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಮಕ್ಕಳಿಗೆ ಉಚಿತವಾಗಿ ಟ್ಯಾಬ್‍ಗಳನ್ನೂ ನೀಡಲಾಗಿದೆ. ಅದಕ್ಕೆ ಪೂರಕವಾಗಿ ಶೀಘ್ರದಲ್ಲಿಯೇ ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಸ್ಮಾರ್ಟ್ ಬೋರ್ಡ್ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

ಕೋವಿಡ್ ಸೋಂಕಿತರಿಗೆ ಕ್ಷೇತ್ರದಲ್ಲೇ ಚಿಕಿತ್ಸೆ: ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಕಾರಣದಿಂದ ಮಲ್ಲೇಶ್ವರ ಕ್ಷೇತ್ರದ ಜನರಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೇ ಅತ್ಯುತ್ತಮ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರದ ಸೋಂಕಿತರು ಭಯಪಡುವುದು ಬೇಡ ಎಂದು ಅಶ್ವಥ್ ನಾರಾಯಣ್ ತಿಳಿಸಿದರು.

ಸೋಂಕಿತರಿಗೆ ಪರೀಕ್ಷೆ ಮಾಡುವುದು ಹಾಗೂ ಅವರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಕ್ಷೇತ್ರದ ಐದೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಉತ್ತಮ ವ್ಯವಸ್ಥೆ ಮಾಡಲಾಗಿದೆ. ಇಪ್ಪತ್ತು ದಿನಗಳಲ್ಲಿ ಎಲ್ಲ ಸೌಲಭ್ಯಗಳು ಸಿಗಲಿವೆ ಎಂದು ಅವರು ನುಡಿದರು.

ASHWATH 2

ಸುರಕ್ಷತೆಗೆ ಅತ್ಯುತ್ತಮ ಸಿಸಿ ಕ್ಯಾಮೆರಾ: ಮಲ್ಲೇಶ್ವರ ಕ್ಷೇತ್ರದ ಜನರ ಸುರಕ್ಷತೆಗಾಗಿ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ 1,300 ಹೈ ಕ್ವಾಲಿಟಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಕತ್ತಲಿನಲ್ಲಿ ಓಡಾಡಿದರೂ ಗುರುತಿಸಬಹುದಾದ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ ಎಂದು ಇದೇ ವೇಳೆ ಡಿಸಿಎಂ ಹೇಳಿದರು.

ಕಾರ್ಯಕರ್ತರಿಗೆ ಕಿವಿಮಾತು: ದೇಶ ಮೊದಲು ಪಕ್ಷ ನಂತರ ಎಂಬ ಸಿದ್ಧಾಂತ ನಮ್ಮ ಪಕ್ಷದ್ದು. ಎಲ್ಲ ನಾಯಕರು, ಕಾರ್ಯಕರ್ತರು ಇದೇ ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆಂದ ಅವರು, ಸಜ್ಜನಿಕೆ ಹಾಗೂ ಉದಾತ್ತ ಮನೋಭಾವದಿಂದ ನಾವೆಲ್ಲರೂ ಪಕ್ಷದ ಕೆಲಸ ಮಾಡೋಣ. ಯಾವ ಕಾರಣಕ್ಕೂ ಮಾತೃರೂಪಿಯಾದ ಪಕ್ಷಕ್ಕೆ ಅಗೌರವ ತೋರುವ, ಹಾನಿ ಉಂಟು ಮಾಡುವ ಕೆಲಸ ಮಾಡಬಾರದು ಎಂದು ಕರೆ ನೀಡಿದರು.

ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಕಂಡ ಕನಸುಗಳು ನನಸಾಗುತ್ತಿದೆ. ಆ ಮಹಾ ಪುರುಷನ ಸಂಕಲ್ಪದಂತೆ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರಕ್ಕಿದ್ದ 370ನೇ ವಿಧಿಯನ್ನು ತೆಗೆದುಹಾಕಿದರಲ್ಲದೆ, ಅಲ್ಲಿನ ಜನರನ್ನು ಭಾರತದ ಮುಖ್ಯವಾಹಿನಿಯಲ್ಲಿ ಬೆರೆಯುವಂತೆ ಮಾಡಿದರು. ಅನೇಕ ರಾಜ್ಯಗಳಲ್ಲಿ ಪಕ್ಷ ಅಧಿಕಾರದಲ್ಲಿದೆ. ಜೊತೆಗೆ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಸುಧಾರಣೆ ಆಗುತ್ತಿವೆ ಎಂದು ಅವರು ನುಡಿದರು.

ಈ ಸಂದರ್ಭದಲ್ಲಿ ಪಕ್ಷಕ್ಕಾಗಿ ಸಮರ್ಪಣಾ ಮನೋಭಾವದಿಂದ ಸೇವೆ ಮಾಡಿದ ಕಾರ್ಯಕರ್ತರನ್ನು ಡಿಸಿಎಂ ಅವರು ಗೌರವಿಸಿ ಸನ್ಮಾನಿಸಿದರು. ಬೆಂಗಳೂರು ಉತ್ತರ ಭಾಗದ ಬಿಜೆಪಿ ಅಧ್ಯಕ್ಷ ನಾರಾಯಣ ಗೌಡ, ಪಕ್ಷದ ಹಿರಿಯ ಮುಖಂಡ ಗೋಪಿನಾಥ ರೆಡ್ಡಿ, ವಾಸುದೇವ್, ವೆಂಕಟಾಚಲಯ್ಯ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

TAGGED:Ashwath Narayanbengalurunursary schoolPublic TVಅಶ್ವಥ್ ನಾರಾಯಣ್ನರ್ಸರಿ ಶಾಲೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

Gadag Lakkundi Excavation 1 1
Districts

ಐತಿಹಾಸಿಕ ಲಕ್ಕುಂಡಿಯಲ್ಲಿ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆ

Public TV
By Public TV
15 minutes ago
Bangladesh Scotland
Cricket

ಟಿ20 ವಿಶ್ವಕಪ್: ಬಾಂಗ್ಲಾದೇಶ ಔಟ್, ಸ್ಕಾಟ್ಲೆಂಡ್ ಇನ್ – ಐಸಿಸಿಯಿಂದ ಅಧಿಕೃತ ಮಾಹಿತಿ

Public TV
By Public TV
1 hour ago
Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
2 hours ago
POCSO Special Court
Bengaluru City

ಬೆಂಗಳೂರು | ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಅರೆಸ್ಟ್‌

Public TV
By Public TV
2 hours ago
TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
3 hours ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?