ಬೀದರ್: ಮುಂಗಾರು ಮಳೆಯ ಆರ್ಭಟಕ್ಕೆ ಬೀದರ್ ನಲ್ಲಿ ಮಳೆಯ ಅವಾಂತರ ಸೃಷ್ಟಿಯಾಗಿದ್ದು, ಹಳ್ಳದಾಟಲು ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಔರಾದ್ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಮಳೆಗೆ ತಾಲೂಕಿನ ಜೋಜನಾ ಗ್ರಾಮದ ರೈತರು ಹಳ್ಳದಾಟಲು ಕೆಲವು ಗಂಟೆಗಳ ಕಾಲ ಪರದಾಡಿದ್ದಾರೆ. ಕೂಲಿ ಕೆಲಸಕ್ಕಾಗಿ ಜಮೀನಿಗೆ ಹೋಗಿದ್ದ ರೈತರು ಸಂಜೆ ಬರುವ ವೇಳೆಗೆ ಹಳ್ಳ ತುಂಬಿ ಜೀವ ಕೈಯಲ್ಲಿ ಹಿಡಿದು ಹಳ್ಳ ದಾಟಿದ್ದಾರೆ.
ರೈತರು ಜಮೀನಿಗೆ ಹೋಗಲು ಕಷ್ಟವಾಗುತ್ತಿದ್ದು, ಇಲ್ಲಿ ಸೇತುವೆ ನಿರ್ಮಾಣ ಮಾಡಿ ಎಂದು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದ್ದರು. ಆದರೆ ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿ ಬಾರಿ ಮಳೆ ಬಂದಾಗ ರೈತರು ಹಳ್ಳ ದಾಟಲು ಹರ ಸಾಹಸಪಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಸ್ವಕ್ಷೇತ್ರದಲ್ಲಿ ಜನರು ಪರದಾಡುತ್ತಿದ್ದು ಮಹಾ ನಿರ್ಲಕ್ಷ್ಯಕ್ಕೆ ರೈತರು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದನ್ನೂ ಓದಿ:ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ನಿಧನ