ಮಸೀದಿಗಳನ್ನು ಸಂಪೂರ್ಣ ಬಂದ್ ಮಾಡಬೇಡಿ – ಮುಸ್ಲಿಂ ಶಾಸಕರ ಮನವಿ

Public TV
0 Min Read
bakrid namaz

ಬೆಂಗಳೂರು: ಮಸೀದಿಗಳನ್ನು ಬಂದ್ ಮಾಡದಂತೆ ಪರಿಷತ್ ಸದಸ್ಯ ಇಬ್ರಾಹಿಂ, ಚಾಮರಾಜಪೇಟೆಯ ಜಮೀರ್ ಅಹ್ಮದ್, ಶಿವಾಜಿನಗರದ ರಿಜ್ವಾನ್ ಅರ್ಷದ್ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಸಿಎಂ ಯಡಿಯೂರಪ್ಪನವರು ಕರೆದ ಸಭೆ ವಿಧಾನಸೌಧಲ್ಲಿ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದಾರೆ.

bakrid namaz 2

ಈ ಸಭೆಯಲ್ಲಿ ಮಾತನಾಡಿದ ಮುಸ್ಲಿಮ್ ಸಮುದಾಯದ ಶಾಸಕರು, ಮಸೀದಿಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಆಗುತ್ತಿದೆ. ಸಂಪೂರ್ಣ ಬಂದ್ ಬೇಡ ಎಂದು ಮನವಿ ಮಾಡಿದರು.

ರಂಜಾನ್ ಹಬ್ಬವನ್ನು ಆಚರಣೆ ಮಾಡುವಂತೆ ಅನುಮತಿ ನೀಡಬೇಕು. ಮೈದಾನಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಜತೆ ಆಚರಣೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *