Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಸ್ಕಿ ಎಂಟ್ರಿ ಮೊದಲ ದಿನವೇ ಬಿ.ವೈ.ವಿಜಯೇಂದ್ರ ರಣತಂತ್ರ

Public TV
Last updated: March 21, 2021 3:43 pm
Public TV
Share
2 Min Read
Vijayenrda Maski 4
SHARE

– ವಿಜಯೇಂದ್ರ ಪೊಲಿಟಿಕಲ್ ಗೇಮ್ ಇನ್‍ಸೈಡ್ ಸ್ಟೋರಿ

ರಾಯಚೂರು: ಉಪಚುನಾಣೆ ಘೋಷಣೆ ಬಳಿಕ ಮಸ್ಕಿ ಅಖಾಡಕ್ಕೆ ಎಂಟ್ರಿ ನೀಡಿದ ಮೊದಲ ದಿನವೇ ಬಿಜೆಪಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ಎಸ್.ವಿಜಯೇಂದ್ರ ಪೊಲಿಟಿಕಲ್ ಸ್ಟ್ಯಾಟರ್ಜಿಯನ್ನು ನಡೆಸಿದರು.

ಮಸ್ಕಿಯ ಪೊಲೀಸ್ ಠಾಣೆ ಪಕ್ಕದ ಖಾಲಿ ಜಾಗದಲ್ಲಿ ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನ ನಿರ್ಮಾಣ ಮಾಡಲಾಗಿತ್ತು. ಕೆ.ವಿರೂಪಾಕ್ಷಪ್ಪ ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಬ್ಬರು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಹುತೇಕ ರಾಜಕೀಯ ಮುಖಂಡರೆಲ್ಲರೂ ನೇರವಾಗಿ ಸಿಂಧನೂರು ಮೂಲಕ ಮಸ್ಕಿ ಕಾರ್ಯಕ್ರಮಕ್ಕೆ ಅಗಮಿಸಿದರು. ಆದ್ರೆ ವಿಜಯೇಂದ್ರ ಮಾತ್ರ ಭಿನ್ನ ಹಾದಿ ಮೂಲಕ ಮಸ್ಕಿ ಪ್ರವೇಶಿಸಿ ಹಳ್ಳಿಯಲ್ಲಿ ಪ್ರಚಾರ ನಡೆಸಿದರು. ಈ ಮೂಲಕ ಮಸ್ಕಿಯಲ್ಲಿ ಬಿಜೆಪಿ ಪ್ರಚಾರದ ಸಂಚಲನ ಮೂಡಿಸಿದರು.

Vijayenrda Maski 2

ಏಲ್ಲೆಲ್ಲಿ ಪ್ರಚಾರ? ಗಂಗಾವತಿ, ಕನಕಗಿರಿ ಮೂಲಕ ಮಸ್ಕಿ ಕ್ಷೇತ್ರದ ಕಲ್ಮಂಗಿ, ಉಮಲೂಟಿ ಗ್ರಾಮ ಪ್ರವೇಶ ಮಾಡಿದ ಬಿ.ವೈ.ವಿಜಯೇಂದ್ರ ಮೊದಲ ದಿನವೇ ಮತಬೇಟೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರುವಿಹಾಳ ಅವರ ತವರೂರಾದ ತುರುವಿಹಾಳ, ತಿಡಿಗೋಳ ಭಾಗದಲ್ಲಿನ ಮತಗಳನ್ನು ಸೆಳೆಯುವ ಪ್ರಯತ್ನ ಮಾಡಿದರು. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರನ್ನು ಜತೆಗಿಟ್ಟುಕೊಂಡೇ ಮತ ಪ್ರಚಾರ ಆರಂಭಿಸಿದರು. ತುರುವಿಹಾಳ ಭಾಗದ ಪ್ರಮುಖ ಮುಖಂಡರ ಸಭೆ ನಡೆಸುವ ಮೂಲಕ ವಿಶೇಷವಾಗಿ ಲಿಂಗಾಯತ ಸಮುದಾಯದ ಮುಖಂಡರ ಮತಗಳನ್ನು ಸೆಳೆಯುವ ಕಸರತ್ತು ನಡೆಸಿದರು.

Vijayenrda Maski 1

ಮಸ್ಕಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಕಾರ್ಯಕ್ರಮ ಸಂಜೆ 5 ಗಂಟೆಗೆ ನಿಗದಿಯಾಗಿದ್ದರಿಂದ ಬಿ.ವೈ.ವಿಜಯೇಂದ್ರ ನೇರವಾಗಿ ಮಸ್ಕಿ ಕ್ಷೇತ್ರದ ಉಮಲೂಟಿ ಗ್ರಾಮಕ್ಕೆ ಮಧ್ಯಾಹ್ನ 1 ಗಂಟೆಗೆ ಆಗಮಿಸಿದರು. ಬೈಕ್ ರ‍್ಯಾಲಿಯ ಮೂಲಕ ಪ್ರಚಾರ ನಡೆಸಿ ಉಮಲೂಟಿ ಗ್ರಾಮದ ಶ್ರೀ ಮಹಿಮಾಂಬುಕಾ ದೇವಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದರು. ಬಳಿಕ ಗುಂಡಾ ಗ್ರಾಮಕ್ಕೆ ಭೇಟಿ ನೀಡಿದ ವಿಜಯೇಂದ್ರ, ಗುಂಡಾ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಭಾಗಿಯಾದರು. ನಂತರ ಗ್ರಾಮದ ಅಮರೇಶ್ವರ ಮಠದ ಚನ್ನಸಿದ್ದರಾಮೇಶ್ವರ ಸ್ವಾಮಿಗಳ ಆಶೀರ್ವಾದ ಪಡೆದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

Maski BJP Campaign 1

ಅಲ್ಲಿಂದಲೇ ಚಿಕ್ಕಬೇರ್ಗಿ, ಹಿರೇಬೇರಗಿಯಲ್ಲಿ ಮತಯಾಚನೆ ಮಾಡಿ ತುರುವಿಹಾಳ ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿನ ಬಸವೇಶ್ವರ ಮೂರ್ತಿಗೆ ಮಾಲರ್ಪಣೆ ಮಾಡಿ ಹಲವು ಮುಖಂಡರ ಜತೆ ಮಾತುಕತೆ ನಡೆಸಿದರು.

Maski BJP Campaign 4

ಮುಖಂಡರ ಪಟ್ಟಿ: ತುರುವಿಹಾಳ, ತಿಡಿಗೋಳ ಜಿ.ಪಂ ಕ್ಷೇತ್ರದಲ್ಲಿ ಸಂಚಾರ ಮಾಡಿದ ಬಿ.ವೈ.ವಿಜಯೇಂದ್ರ ಈ ಭಾಗದ ಪ್ರಮುಖ ನಾಯರ ಪಟ್ಟಿ ಮಾಡಿ ಹೆಸರು ದೂರವಾಣಿ ಸಂಖ್ಯೆಗಳನ್ನು ಪಡೆದುಕೊಂಡರು ಎಂದು ತಿಳಿದು ಬಂದಿದೆ. ಯಾವುದೇ ಪಕ್ಷ ಎನ್ನದೇ ಎಲ್ಲ ಪಾರ್ಟಿಯಲ್ಲಿರುವ ಆಯಾ ಜಾತಿಯ ಮುಖಂಡರ ಪಟ್ಟಿ ಮಾಡಿಕೊಂಡರು. ಮುಂದಿನ ದಿನಗಳಲ್ಲಿ ಜಾತಿವಾರು ಪ್ರಬಲ ನಾಯಕರನ್ನು ಸೆಳೆಯುವ ಲೆಕ್ಕಾಚಾರ ಎಂದು ತಿಳಿದು ಬಂದಿದೆ.

Maski BJP Campaign 3

ಬಾಕ್ಸ್-01 ಹಿಂದೆ ಹಿನ್ನಡೆಯಾಗಿತ್ತು: 2018ರ ವಿಧಾನಸಭೆ ಸಾರ್ವತ್ರಿಕ ಚುನಾವಣೆ ವೇಳೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ರಿಗೆ ಲಿಂಗಾಯತ ಸಮುದಾಯದ ಮತಗಳು ಕೈ ತಪ್ಪಿದ್ದವು. ಹೀಗಾಗಿ ಈ ಬಾರಿ ಈ ಮತಗಳನ್ನು ಗಟ್ಟಿ ಮಾಡಿಕೊಳ್ಳುವ ಮೊದಲ ಭಾಗವಾಗಿಯೇ ಬಿ.ವೈ.ವಿಜಯೇಂದ್ರ ತುರುವಿಹಾಳ, ತಿಡಿಗೋಳ ಭಾಗದಲ್ಲಿ ಸಂಚಾರ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಉಪಚುನಾವಣೆ ಘೋಷಣೆ ಮೊದಲ ದಿನವೇ ವಿಜಯೇಂದ್ರ ಕೇವಲ ವೇದಿಕೆ ಕಾರ್ಯಕ್ರಮಕ್ಕೆ ಸೀಮಿತವಾಗದೇ ನೇರವಾಗಿ ಪ್ರಚಾರಕ್ಕೆ ಇಳಿದಿದ್ದರು.

TAGGED:ಕಾಂಗ್ರೆಸ್ಪಬ್ಲಿಕ್ ಟಿವಿಪ್ರತಾಪಗೌಡ ಪಾಟೀಲ್ಬಿ.ವೈ.ವಿಜಯೇಂದ್ರಬಿಜೆಪಿಬೈ ಎಲೆಕ್ಷನ್ಮಸ್ಕಿರಾಯಚೂರು
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
43 minutes ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
4 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
5 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
9 hours ago

You Might Also Like

IPL 2025 RCB
Cricket

ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

Public TV
By Public TV
1 minute ago
ipl 2025 the champions are the ones who have won qualifier 1 in the last 7 years fans celebrate in bengaluru
Bengaluru City

IPL 2025 ಫೈನಲ್‍ಗೆ ಆರ್‌ಸಿಬಿ ಗ್ರ್ಯಾಂಡ್ ಎಂಟ್ರಿ – ಬೆಂಗ್ಳೂರಲ್ಲಿ ಫ್ಯಾನ್ಸ್ ಸೆಲಬ್ರೇಷನ್

Public TV
By Public TV
9 minutes ago
rcb 4
Cricket

IPL 2025: ಪಂಜಾಬ್‌ ವಿರುದ್ಧ ಆರ್‌ಸಿಬಿಗೆ 8 ವಿಕೆಟ್‌ಗಳ ಭರ್ಜರಿ ಜಯ – 4ನೇ ಬಾರಿಗೆ ಫೈನಲ್‌ಗೆ ಲಗ್ಗೆ

Public TV
By Public TV
19 minutes ago
Rambhadracharya General Upendra Dwivedi
Latest

ಸೇನಾ ಮುಖ್ಯಸ್ಥರಿಗೆ ಧೀಕ್ಷೆ ನೀಡಿ ಪಿಒಕೆ ಗುರುದಕ್ಷಿಣೆಯಾಗಿ ಕೇಳಿದ ಸ್ವಾಮೀಜಿ

Public TV
By Public TV
49 minutes ago
RCB 5
Cricket

ಕಳೆದ 7 ವರ್ಷಗಳಲ್ಲಿ ಕ್ವಾಲಿಫೈಯರ್-1 ಗೆದ್ದೋರೇ ಚಾಂಪಿಯನ್‌!

Public TV
By Public TV
55 minutes ago
Rajnath Singh
Latest

ಪಿಒಕೆ ನಮ್ಮದೇ, ಅಲ್ಲಿನ ಜನ ಅವರಾಗಿಯೇ ಭಾರತಕ್ಕೆ ಬರುತ್ತಾರೆ: ರಾಜನಾಥ್ ಸಿಂಗ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?