ಚಾಮರಾಜನಗರ: ಮಹಾಮಾರಿ ಕೊರೊನಾ ವೈರಸ್ ನಡುವೆಯೂ ಮಾದಪ್ಪನ ಸನ್ನಿಧಿಗೆ ಕೋಟಿ ಕೋಟಿ ಹಣ ಹರಿದುಬಂದಿದೆ.
ಹೌದು. ಕೊರೊನಾ ಸಾಂಕ್ರಮಿಕ ರೋಗದಿಂದ ದೇಶದ ಆರ್ಥಿಕತೆ ಕುಸಿದಿದೆ. ಜನ ಸಾಮಾನ್ಯರ ಜೀವನ ಅಸ್ತವ್ಯಸ್ತವಾಗಿದೆ. ವ್ಯಾಪಾರ ವಾಹಿವಾಟುಗಳ ಹೊಡೆತಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಜೊತೆಗೆ ಕೊರೊನಾ ರಾಜ್ಯದ ದೇವಾಲಯಗಳ ಆದಾಯ ಗಳಿಕೆ ಮೇಲೂ ಪ್ರಭಾವ ಬೀರಿದೆ. ಆದರೆ ಕೊರೊನಾ ಸಂಕಷ್ಟದ ನಡುವೆ ಕೂಡ ಮಲೆಮಹದೇಶ್ವರ ಬೆಟ್ಟದ ದೇವಾಲಯದ ಹುಂಡಿಗೆ ಭಕ್ತರಿಂದ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟ ದೇವಾಲಯದಲ್ಲಿ ತಡ ರಾತ್ರಿವರೆಗೂ ನಡೆದ ಹುಂಡಿ ಏಣಿಕೆಯಲ್ಲಿ 2 ಕೋಟಿ 21 ಲಕ್ಷ ರೂಪಾಯಿ ನಗದು ರೂಪದಲ್ಲಿ ಸಂಗ್ರಹವಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 2, 21,59, 820 ರೂ. ನಗದು ಜೊತೆಗೆ 80 ಗ್ರಾಂ ಚಿನ್ನ, 2 ಕೆ.ಜಿ.ಬೆಳ್ಳಿ ಮತ್ತು ನಾಣ್ಯದ ರೂಪದಲ್ಲಿ 11.23 ಲಕ್ಷ ರೂಪಾಯಿ ಭಕ್ತರಿಂದ ಸಂಗ್ರಹವಾಗಿದೆ. ಕೋವಿಡ್ ಪರಿಣಾಮದ ಆರ್ಥಿಕ ಕಷ್ಟದ ನಡುವೆಯು ಮಲೆಮಹದೇಶ್ವರನಿಗೆ ಭಕ್ತರು ಉದಾರವಾಗಿ ಕಾಣಿಕೆ ಅರ್ಪಿಸಿದ್ದಾರೆ.