ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ- ಆತಂಕದಿಂದ್ಲೇ ಸುಧಾಕರ್ ಮನವಿ

Public TV
1 Min Read
K Sudhakar 1

– ಲಸಿಕೆ ಪಡೆದುಕೊಳ್ಳುವಂತೆ ಸಚಿವರು ಮನವಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಗ್ಪುರವನ್ನು ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡಲಾಗಿದೆ. ಈ ಬೆನ್ನಲ್ಲೇ ಸಚಿವ ಸುಧಾಕರ್ ಅವರು ರಾಜ್ಯದ ಜನರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ತಿಳಿಸಿದ್ದಾರೆ.

ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ ಎಂದು ಸಚಿವರು ಕರೆ ನೀಡಿದ್ದಾರೆ.

ಒಟ್ಟಿನಲ್ಲಿ ರಾಜ್ಯಕ್ಕೆ 2ನೇ ಅಲೆ ಕೊರೊನಾ ಆತಂಕ ಶುರುವಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಸೋಂಕಿಂದ ಕರ್ನಾಟಕಕ್ಕೆ ಢವಢವ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸುಧಾಕರ್ ಅವರು ಖುದ್ದು ಟ್ವೀಟ್ ಮಾಡಿ ಆತಂಕ ಹೊರಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *