Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ಮಾದರಿಯಲ್ಲಿ ಭೋವಿ ಸಮಾಜದವರಿಗೆ ಮಾತ್ರ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿ: ಬಸವರಾಜು ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾರಾಷ್ಟ್ರ ಮಾದರಿಯಲ್ಲಿ ಭೋವಿ ಸಮಾಜದವರಿಗೆ ಮಾತ್ರ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿ: ಬಸವರಾಜು ಆಗ್ರಹ

Bengaluru City

ಮಹಾರಾಷ್ಟ್ರ ಮಾದರಿಯಲ್ಲಿ ಭೋವಿ ಸಮಾಜದವರಿಗೆ ಮಾತ್ರ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿ: ಬಸವರಾಜು ಆಗ್ರಹ

Public TV
Last updated: July 13, 2021 3:14 pm
Public TV
Share
2 Min Read
aap leader Basavaraju e1626169269260
SHARE

ಬೆಂಗಳೂರು: ರಾಜ್ಯದ ಕಲ್ಲು ಗಣಿಗಾರಿಕೆ ಕೇಂದ್ರಗಳನ್ನು ಬಂಡವಾಳಶಾಹಿಗಳಿಗೆ ನೀಡುವ ಮೂಲಕ, ಇದನ್ನೇ ಕುಲ ಕಸುಬಾಗಿ ಮಾಡಿಕೊಂಡಿರುವ ಭೋವಿ ಸಮಾಜದವರ ಮೇಲೆ ಆರ್ಥಿಕವಾಗಿ ಅತ್ಯಾಚಾರ ಮಾಡಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಮುಖಂಡ, ವಿರಾಜಪೇಟೆಯ ಮಾಜಿ ಶಾಸಕರಾದ ಎಚ್.ಡಿ.ಬಸವರಾಜುರವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಸವರಾಜುರವರು, ಅನೇಕ ಶತಮಾನಗಳಿಂದಲೂ ಭೋವಿ ಸಮಾಜದವರು ಕಲ್ಲು ಗಣಿಗಾರಿಕೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಂಡಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಬಂಡವಾಳಶಾಹಿಗಳು, ಶಾಸಕರಿಗೆ, ರಾಜಕೀಯ ಬಲಾಢ್ಯರಿಗೆ ಮಾತ್ರ ಕ್ರಷರ್ ಯೂನಿಟ್‍ಗಳನ್ನು ನೀಡುವ ಮೂಲಕ ಭೋವಿ ಸಮಾಜದವರ ಉದ್ಯೋಗವನ್ನು ಕಿತ್ತುಕೊಳ್ಳಲಾಗುತ್ತಿದೆ. ರಾಜ್ಯದ ಯಾವ ಶಾಸಕರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳಶಾಹಿಗಳಿಗೆ ನಾಡಿನ ಸಂಪನ್ಮೂಲದ ಮೇಲೆ ಯಾವುದೇ ರೀತಿಯ ಭಾವನಾತ್ಮಕ ಸಂಬಂಧ ಇರುವುದಿಲ್ಲ. ಕೇವಲ ದುಡ್ಡು ಮಾಡುವ ಉದ್ದೇಶ ಹೊಂದಿರುವ ಅವರು ರಾಜ್ಯದ ಸಂಪನ್ಮೂಲವನ್ನು ಸಾಧ್ಯವಾದಷ್ಟು ಲೂಟಿ ಮಾಡುತ್ತಿದ್ದಾರೆ. ಇದಕ್ಕಾಗಿ ಎಲ್ಲ ರೀತಿಯ ಅಕ್ರಮವನ್ನು ಬಂಡವಾಳಶಾಹಿಗಳು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Kappat Gudda Stone Mining 2

ಮಹಾರಾಷ್ಟ್ರದಲ್ಲಿ ಕಲ್ಲು ಗಣಿಗಾರಿಕೆಯನ್ನು ಭೋವಿ ಸಮಾಜದವರಿಗೆ ಮೀಸಲಿರಿಸಲಾಗಿದೆ. ರಾಜ್ಯದಲ್ಲೂ ಗಣಿ ಮತ್ತು ಭೂವಿಜ್ಞಾನ ಕಾಯಿದೆಗೆ ತಿದ್ದುಪಡಿ ತಂದು ಭೋವಿ ಸಮಾಜದವರಿಗೆ ಮಾತ್ರ ಅನುಮತಿಯನ್ನು ನೀಡಬೇಕು. ಕ್ರಷರ್ ಯೂನಿಟ್‍ಗಳನ್ನು ಆರಂಭಿಸಲು ಭೋವಿ ಸಮಾಜದವರಿಗೆ ಅತ್ಯಾಧುನಿಕ ಉಪಕರಣಗಳನ್ನು ಕೊಳ್ಳಲು ಆರ್ಥಿಕ ನೆರವು ನೀಡುವ ಯೋಜನೆಯನ್ನು ಆರಂಭಿಸಬೇಕು. ಇದರಿಂದ ಅವರಿಗೆ ಉದ್ಯೋಗ ಭದ್ರತೆ ಕಲ್ಪಿಸಿದಂತೆಯೂ ಆಗುತ್ತದೆ, ಬಂಡವಾಳಶಾಹಿಗಳ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿದಂತೆಯೂ ಆಗುತ್ತದೆ. ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಭೋವಿ ಸಮಾಜದ ಮೇಲೆ ಕಿಂಚಿತ್ತಾದರೂ ಕಾಳಜಿಯಿದ್ದರೆ ಕಾಯಿದೆಗೆ ತಿದ್ದುಪಡಿ ತರಲಿ ಎಂದು ಬಸವರಾಜುರವರು ಸವಾಲು ಹಾಕಿದರು. ಇದನ್ನೂ ಓದಿ : SSLC ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್ – ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ KSRTC, BMTC ಅನುಮತಿ

gdg stone mining 2

ಎಎಪಿ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ಸದಂ ರವರು ಮಾತನಾಡಿ, ಕರ್ನಾಟಕದವರು ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶದ ಭೋವಿ ಸಮಾಜದ ಅನೇಕರು ಕೂಡ ರಾಜ್ಯದ ಗಣಿಗಾರಿಕೆ ಪ್ರದೇಶದಲ್ಲಿ ಸರಿಯಾದ ವೇತನವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಸಮರ್ಪಕ ರಕ್ಷಣಾ ಸೌಲಭ್ಯಗಳಿಲ್ಲದೇ ಅನೇಕರು ಕೆಲಸ ಮಾಡುತ್ತಿರುವಾಗಲೇ ಮೃತಪಟ್ಟಿದ್ದಾರೆ. ಅವರ ಈ ಸಮಸ್ಯೆಗಳನ್ನು ಬಗೆಹರಿಸಿ, ನ್ಯಾಯ ಕೊಡಿಸುವುದರಲ್ಲಿ ರಾಜ್ಯದ ಕಾರ್ಮಿಕ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

gdg stone mining 1

ಊಹೆಗೂ ನಿಲುಕದಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಬೇಬಿ ಬೆಟ್ಟದಲ್ಲಿ ವರ್ಷಕ್ಕೆ ಗರಿಷ್ಠ 25,000 ಮೆಟ್ರಿಕ್ ಟನ್ ಕಲ್ಲು ತೆಗೆಯಲು ಮಾತ್ರ ಪರಿಸರ ಅನುಮೋದನಾ ಸಮಿತಿ ಅನುಮತಿ ನೀಡಿದೆ. ಆದರೆ 2017ರಿಂದ ಪ್ರತಿವರ್ಷ ಲಕ್ಷಾಂತರ ಮೆಟ್ರಿಕ್ ಕಲ್ಲನ್ನು ತೆಗೆಲಾಗುತ್ತಿದೆ. ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ ಬೇಬಿ ಬೆಟ್ಟವೊಂದರಲ್ಲೇ 280 ಕೋಟಿ ರೂ. ಹಾಗೂ ಮಂಡ್ಯ ಜಿಲ್ಲೆಯಲ್ಲಿ 320ಕೋಟಿ ರೂ. ದಂಡ ಹಾಕಲಾಗಿದೆ. ರಾಜ್ಯಾದ್ಯಂತ ದಂಡದ ಮೊತ್ತವು ಸಾವಿರಾರು ಕೋಟಿಯಷ್ಟಿದೆ. ದಂಡವನ್ನು ವಸೂಲಿ ಮಾಡಲು ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಜಗದೀಶ್ ಸದಂ ಬೇಸರ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಮುಖಂಡರಾದ ಪ್ರಕಾಶ್ ನಾಗರಾಜ್, ಉಷಾ ಮೋಹನ್, ಜ್ಯೋತಿಷ್ ಕುಮಾರ್ ಇನ್ನಿತರರು ಭಾಗವಹಿಸಿದ್ದರು.

TAGGED:BasavarajuBhovi communitymaharashtraMiningಕರ್ನಾಟಕಗಣಿಗಾರಿಕೆಬಸವರಾಜುಭೋವಿಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
9 minutes ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
24 minutes ago
Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
36 minutes ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
1 hour ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
1 hour ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?