Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

Districts

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

Public TV
Last updated: June 15, 2021 8:14 pm
Public TV
Share
4 Min Read
Shashikala Jolle 4
SHARE

ಹಾವೇರಿ: ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಮಕ್ಕಳು ಸೋಂಕಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೋಂಕಿಗೆ ತುತ್ತಾದಲ್ಲಿ ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

Shashikala Jolle Haveri Meeting 8 medium

ಹಾವೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ರಾಜ್ಯದಲ್ಲಿ ಮೊದಲ ಅಲೆಯಿಂದ ಈವರೆಗೆ 1,735 ಹಾಗೂ ಹಾವೇರಿ ಜಿಲ್ಲೆಯಲ್ಲಿ 89 ಮಕ್ಕಳು ಕೋವಿಡ್ ಪಾಸಿಟಿವ್ ಸೋಂಕಿನಿಂದ ಬಳಲುತ್ತಿದ್ದಾರೆ. ಕೋವಿಡ್ ಸೋಂಕಿನ ಮಕ್ಕಳ ಮರಣ ಪ್ರಮಾಣ ಕಡಿಮೆ ಎಂದು ಹೇಳಿದರು. ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಈ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಆರೋಗ್ಯ ಸಚಿವರ ಜೊತೆಗೂಡಿ ಚರ್ಚಿಸಲಾಗಿದೆ. ಮಕ್ಕಳಿಗಾಗಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತ್ಯೇಕ ಮಕ್ಕಳ ಕೋವಿಡ್ ವಾರ್ಡ್ ವ್ಯವಸ್ಥೆ, ಐ.ಸಿ.ಯು ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಇಲಾಖೆಯ ಪ್ರವಾಸ್ತವನೆಯನ್ನು ಒಪ್ಪಿದ ಕಾರಣ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಈ ಕುರಿತಂತೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Shashikala Jolle Haveri Meeting 3 medium

ಅಪೌಷ್ಠಿಕ ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳು ಕೋವಿಡ್‍ಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಎಲ್ಲ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ. ರಾಜ್ಯದಲ್ಲಿ 7751 ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. 4.47 ಲಕ್ಷ ಮಕ್ಕಳು ಅಪೌಷ್ಠಿಕತೆಯ ಅಂಚಿನಲ್ಲಿರುವ ಮಕ್ಕಳಿದ್ದಾರೆ. ಸಾಮಾನ್ಯ ಮಕ್ಕಳ ಜೊತೆಗೆ ಈ ಮಕ್ಕಳ ಮೇಲೆ ವಿಶೇಷ ನಿಗಾವಹಿಸಿ ಕೋವಿಡ್ ಸೋಂಕು ತಗಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದರು.

Shashikala Jolle Haveri Meeting 4 medium

ಅನಾಥ ಮಕ್ಕಳಿಗೆ ನೆರವು: ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಅನಾಥ ಹಾಗೂ ಏಕಪೋಷಕ ಮಕ್ಕಳಿಗೆ ಆರ್ಥಿಕ, ಶೈಕ್ಷಣಿಕ ನೆರವು ಒದಗಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕ್ರಮಕೈಗೊಂಡಿದೆ. ಮುಖ್ಯಮಂತ್ರಿಗಳ ಬಾಲ ಸೇವಾ ಯೋಜನೆ ಹಾಗೂ ಬಾಲ ಹಿತೈಷಿ ಯೋಜನೆಯಡಿ ಪ್ರತಿ ತಿಂಗಳು ಮಕ್ಕಳಿಗೆ ಮೂರುವರೆಸಾವಿರ ರೂ. ಹಾಗೂ ಉಚಿತ ಶಿಕ್ಷಣ, ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ 21 ವರ್ಷ ಪೂರೈಸಿದ ಹೆಣ್ಣುಮಕ್ಕಳಿಗೆ ಮುಂದಿನ ಭವಿಷ್ಯಕ್ಕೆ ಒಂದು ಲಕ್ಷ ರೂ. ನೆರವು ನೀಡಲಾಗುವುದು. ಅನಾಥ ಮಕ್ಕಳನ್ನು ಪಾಲಕರು ಪೋಷಿಸಲು ಅಸಮರ್ಥರಾಗಿದ್ದರೆ ದಾನಿಗಳ ನೆರವಿನಿಂದ ಇವರಿಗೆ ಶಿಕ್ಷಣ, ತರಬೇತಿ, ಉದ್ಯೋಗಾವಕಾಶಗಳನ್ನು ಕಲ್ಪುಸಲು ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೋವಿಡ್‍ನಿಂದ ಪಾಲಕರು ಮೃತರಾಗಿ ಅನಾಥವಾಗಿರುವ 43 ಮಕ್ಕಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

Shashikala Jolle Haveri Meeting 7 medium

ದತ್ತು ಪ್ರಕ್ರಿಯೆ: ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಯಾರೂ ನೇರವಾಗಿ ದತ್ತು ಪಡೆಯಲು ಅವಕಾಶವಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ದತ್ತು ಪ್ರಕ್ರಿಯೆ ನಡೆಸಿ ಪಡೆಯಬೇಕು. ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳು ಇದ್ದಲ್ಲಿ ಇಲಾಖೆಯ ಸಹಾಯವಾಣಿ 1098ಕ್ಕೆ ಸಂಪರ್ಕಿಸಿ ಮಾಹಿತಿ ಕೊಡಬೇಕು. ಕೆಲವು ಸಾಮಾಜಿಕ ಜಾಲತಾಣದಲ್ಲಿ ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಾಕುವುದಾಗಿ ಸಂದೇಶಗಳು ಹರಿದಾಡುತ್ತಿವೆ. ಯಾರೂ ಸಹ ಈ ಸಂದೇಶಗಳನ್ನು ನಂಬದೇ ಸಂದೇಶದಲ್ಲಿರುವ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ಮೋಸಹೋಗದಂತೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು. ಇದನ್ನೂ ಓದಿ: 

Shashikala Jolle Haveri Meeting 1 medium

ಕೋವಿಡ್ ಸೋಂಕಿನಿಂದ ಮೂರು ಜನ ಅಂಗನವಾಡಿ ಕಾರ್ಯಕರ್ತೆಯರು ಮರಣಹೊಂದಿದ್ದಾರೆ. ತಲಾ 30 ಲಕ್ಷ ರೂ. ಪರಿಹಾರ ಪಾವತಿ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಬಾರಿ ಕೋವಿಡ್‍ಗೆ ಬಲಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ವಿದೇಶಕ್ಕೆ ತೆರಳುವ ಫಲಾನುಭವಿಗಳ ಕೋವಿಶೀಲ್ಡ್ ಲಸಿಕೆ ಪಡೆಯುವ ಅಂತರ ಕಡಿತ

Shashikala Jolle Haveri Meeting 5 medium

ಜಿಲ್ಲಾಡಳಿತ ಉತ್ತಮ ಕ್ರಮ: ಕೋವಿಡ್ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲಾಡಳಿತ ಉತ್ತಮ ಸಿದ್ಧತೆ ಮಾಡಿಕೊಂಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಮೂರನೇ ಅಲೆ ಕುರಿತಂತೆ ವ್ಯಾಪಕವಾದ ಪ್ರಚಾರದ ಜೊತೆಗೆ ಸಿದ್ಧತೆಗಳನ್ನು ಎಚ್ಚರದಿಂದ ಕೈಗೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಪಂತರಪಾಳ್ಯದಲ್ಲಿ 10 ತಿಂಗಳಲ್ಲಿ 150 ಹಾಸಿಗೆಗಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಿದ್ಧ: ವಿ. ಸೋಮಣ್ಣ

Shashikala Jolle Haveri Meeting 6 medium

ಜಿಲ್ಲೆಯ ಏಳು ತಾಲೂಕಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ಕೋವಿಡ್ ವಾರ್ಡ್ ಗಳನ್ನು ಮಾಡಲಾಗಿದೆ. 119 ಬೆಡ್‍ಗಳನ್ನು ಕಾಯ್ದಿಸಲಾಗಿದೆ. ಕೋವಿಡ್ ಆರೈಕೆ ಕೇಂದ್ರಗಳಲ್ಲಿ 195 ಬೆಡ್‍ಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಲಾಗಿದೆ. ಜಿಲ್ಲೆಯಲ್ಲಿ ಮೊದಲನೇ ಅಲೆಯಿಂದ ಈವರೆಗೆ 991 ಮಕ್ಕಳಿಗೆ ಸೋಂಕು ತಗಲಿದ್ದು, 901 ಸೋಂಕಿನಿಂದ ಗುಣಮುಖರಾಗಿದ್ದಾರೆ. 89 ಮಕ್ಕಳ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ದೀರ್ಘಕಾಲದ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಒಂದು ಮಗುವಿಗೆ ಕೋವಿಡ್ ಸೋಂಕು ತಗುಲಿ ಮರಣಹೊಂದಿದೆ. ಕೋವಿಡ್ ಸೋಂಕಿನಿಂದ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೊರೊನಾ ವ್ಯಾಕ್ಸಿನ್‍ಗೆ ಆನ್‍ಲೈನ್ ನೋಂದಣಿ ಕಡ್ಡಾಯವಲ್ಲ

ಇಂದು ಹಾವೇರಿಯಲ್ಲಿ, ಕೊರೋನಾ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಮಾಡಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಮಾಲೋಚಿಸಲಾಯಿತು. #KarnatakaFightsCorona pic.twitter.com/IiMx8uHfVn

— Shashikala Jolle (@ShashikalaJolle) June 15, 2021

TAGGED:Child Adoption ProcessCM yediyurappaCorona VirusCovid 19covid Third WavePublic TVShashikala Jolleಕೊರೊನಾ ವೈರಸ್ಕೋವಿಡ್ 19ಕೋವಿಡ್ ಮೂರನೇ ಅಲೆಪಬ್ಲಿಕ್ ಟಿವಿಮಕ್ಕಳ ದತ್ತು ಪ್ರಕ್ರಿಯೆಶಶಿಕಲಾ ಜೊಲ್ಲೆಸಿಎಂ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
5 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
5 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
5 hours ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
6 hours ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
6 hours ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?