ನವದೆಹಲಿ : ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆಗಳು ಕಂಡು ಬಂದಿಲ್ಲ, ಚಿಂತಾಜನಕ ಪರಿಸ್ಥಿತಿ ಮುಂದುವರಿದಿದೆ ಎಂದು ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ. ಪ್ರಣಬ್ ಮುಖರ್ಜಿ ಪುತ್ರಿ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.
ಸದ್ಯ ಪ್ರಣಬ್ ಮುಖರ್ಜಿ ಅವರು ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಚಿಕಿತ್ಸೆ ಪೂರಕವಾದ ಸ್ಪಂದನೆ ಪೂರ್ಣ ಪ್ರಮಾಣದಲ್ಲಿ ದೊರಕುತ್ತಿಲ್ಲ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಆರೋಗ್ಯ ವರದಿಯಲ್ಲಿ ಉಲ್ಲೇಖಿಸಿದೆ.
Last year 8August was 1 of d happiest day 4 me as my dad received Bharat Ratna.Exactly a year later on 10Aug he fell critically ill. May God do whatever is best 4 him & give me strength 2 accept both joys & sorrows of life with equanimity. I sincerely thank all 4 their concerns????
— Sharmistha Mukherjee (@Sharmistha_GK) August 12, 2020
ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಸ್ತಾ ಮುಖರ್ಜಿ ಟ್ವಿಟರ್ ನಲ್ಲಿ ಭಾವನಾತ್ಮಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ದೇವರು ಉತ್ತಮ ಮಾರ್ಗವನ್ನೇ ತೋರಿಸುತ್ತಾನೆ ಅದನ್ನು ಸ್ವೀಕರಿಸುವ ಶಕ್ತಿಯನ್ನು ದಯಪಾಲಿಸಲಿದ್ದಾನೆ. ಕಳೆದ ವರ್ಷ ಅಗಸ್ಟ್ 8 ರಂದು ಭಾರತ ರತ್ನ ಗೌರವ ನೀಡಲಾಗಿತ್ತು. ಇದು ಜೀವನ ಅತ್ಯಂತ ಖುಷಿಯ ಕ್ಷಣವಾಗಿತ್ತು. ಇದಾಗಿ ಸರಿಯಾಗಿ ಒಂದು ವರ್ಷಕ್ಕೆ ಅಗಸ್ಟ್ 10 ರಿಂದ ಅವರ ಆರೋಗ್ಯ ಗಂಭೀರವಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.
84 ವರ್ಷದ ಪ್ರಣಬ್ ಮುಖರ್ಜಿ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಆಸ್ಪತ್ರೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಮೆದುಳು ಸಂಬಂಧಿಸಿದ ತುರ್ತು ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಬಂದ ಹಿನ್ನೆಲೆ ಆಪರೇಷನ್ ಕೂಡಾ ಮಾಡಲಾಗಿದ್ದು ಸದ್ಯ ಆರೋಗ್ಯ ತೀವ್ರ ಗಂಭೀರ ಪರಿಸ್ಥಿತಿಯಲ್ಲಿದೆ.