ಮಾಜಿ ಸಚಿವ ಪ್ರೇಮಾನಂದ್ ಎಸ್. ಜೈವಂತ್ ನಿಧನ

Public TV
1 Min Read
Premanand S

ಕಾರವಾರ: ಶಿರಸಿ ಭಾಗದಿಂದ ಆಯ್ಕೆಯಾಗಿ ಅಬಕಾರಿ ಸಚಿವರಾಗಿದ್ದ ಮಾಜಿ ಸಚಿವ ಪ್ರೇಮಾನಂದ್ ಎಸ್. ಜೈವಂತ್ (77) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ

ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೇಮಾನಂದ್ ಅವರನ್ನ ಕೆಲ ದಿನಗಳ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಿವಂಗತರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿಯನ್ನು ಅಗಲಿದ್ದಾರೆ. 1998ರಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು.

ಜಿಲ್ಲೆಯಲ್ಲಿ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಅವರು 1994ರಲ್ಲಿ ಮೊದಲ ಬಾರಿಗೆ ಶಿರಸಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರದ ದಿನದಲ್ಲಿ 1999ರಲ್ಲಿ ಪಕ್ಷೇತರರಾಗಿ, 2004ರಲ್ಲಿ ಕಾಂಗ್ರೆಸ್ ನಿಂದ ಹಾಗೂ 2008ರಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದರು. ಸತತ ಸೋಲಿನಿಂದ ರಾಜಕೀಯದಿಂದ ದೂರ ಉಳಿದಿದ್ದ ಅವರು ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *