ಬೆಂಗಳೂರು: ಮಾಡೋಕೆ ಏನೂ ಕೆಲಸ ಇಲ್ವಾ? ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ ಅಂತ ನಾವು ಪ್ರತಿಭಟನೆ ಮಾಡ್ತಾ ಇರೋದು ಎಂದು ಸುಧಾಕರ್ ಅವರ ಹೇಳಿಕೆ ವಿಚಾರವಾಗಿ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ತಿರುಗೇಟು ಕೊಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳೆಗೆ ಕೆಲಸ ಕೋಡಿಸುತ್ತೇನೆ ಎಂದು ಹೇಳಿ ಮಿಸ್ ಯೂಸ್ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನಾವು ಹೋರಾಟ ಮಾಡುತ್ತಿರುವುದು. ನಾವು ಚರ್ಚೆ ಮಡುತ್ತಿರುವುದನ್ನು ನೋಡಿ ಜನರು ನಗುತ್ತಿದ್ದಾರೆ. ನಾವು ಯಾಕೆ ಪ್ರತಿಭಟನೆ ಮಾಡ್ತಾ ಇದ್ದೇವೆ ಅಂತ ಅರ್ಥ ಮಾಡ್ಕೊಳ್ಳಲಿ. ಯಾರೇ ಆಗಲಿ ಸಿಬಿಐಗೆ ಹೋಗಲಿ ಎಂದಿದ್ದಾರೆ.
ರಾಜ್ಯದಲ್ಲಿ ಸದ್ಯ ಒಂದೆಂಡ್ತಿ ರಾಜಕಾರಣ ನಡೆಯುತ್ತಿದೆ. ಸುಧಾಕರ್ ಅವರು ನೀಡಿರುವ ಹೇಳಿಕೆಯಿಂದ ಇಂದು ರಾಜ್ಯ ರಾಜ್ಯಕಾರಣದಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಆರೋಗ್ಯ ಸಚಿವರ ಈ ಹೇಳಿಕೆಗೆ ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಕಿಡಿಕಾರಿದ್ದಾರೆ.



