Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಾಸ್ಕ್ ಹಾಕದಿದ್ರೆ ಗ್ರಾಮೀಣ ಭಾಗದಲ್ಲಿ 500, ನಗರದಲ್ಲಿ 1 ಸಾವಿರ ದಂಡ: ಸಚಿವ ಸುಧಾಕರ್

Public TV
Last updated: September 30, 2020 8:09 pm
Public TV
Share
2 Min Read
Sudhakar 4
SHARE

-ಕೊರೊನಾ ನಿಯಂತ್ರಣಕ್ಕೆ ಉಗ್ರವಾದ ಕ್ರಮ

ಬೆಂಗಳೂರು: ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ರೆ ಉಗ್ರವಾದ ಕ್ರಮ ತೆಗದುಕೊಳ್ಳಲಾಗುವುದು. ಗ್ರಾಮೀಣ ಭಾಗಗಳಲ್ಲಿ 500 ರೂ. ಮತ್ತು ನಗರ ಪ್ರದೇಶದಲ್ಲಿ 1 ಸಾವಿರ ದಂಡ ವಿಧಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣದ ಬಗ್ಗೆ ಸಭೆ ಮಾಡಲಾಗಿದ್ದು, ಹೆಚ್ಚು ಕೊರೊನಾ ಪೀಡಿತ ಜಿಲ್ಲೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಕೊರೊನಾ ಪ್ರಕರಣಗಳನ್ನು ತಗ್ಗಿಸಲು ಏನೆಲ್ಲ ತಂತ್ರ ಅನುಸರಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ. ಕೊರೊನಾ ನಿಯಂತ್ರಣ ಜವಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ. ಅದು ನಾಗರೀಕರ ಮೇಲೆಯೂ ಇದೆ. ಪದೇ ಪದೇ ಮಾಸ್ಕ್ ಧರಿಸಲೇಬೇಕು. ಮಾಸ್ಕ್ ಬಳಸಲು ಚಿತ್ರ ನಟರು, ರಾಜಕಾರಣಿಗಳು, ಸ್ವಾಮೀಜಿಗಳನ್ನ ಬಳಸಿಕೊಂಡು ಜಾಗೃತಿ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು.

india coronavirus

ಉಗ್ರವಾದ ಕ್ರಮ: ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಆಂತರ ಮಾಯವಾಗಿದೆ. ಜನರು ಸಹ ಮಾಸ್ಕ್ ಧರಿಸೋದನ್ನು ಮರೆಯುತ್ತಿದ್ದಾರೆ. ಅಂಗಡಿ, ಮಾಲ್, ಮಾರ್ಕೆಟ್ ಗಳಲ್ಲಿ ಜನ ನಿಯಮ ಉಲ್ಲಂಘಿಸಿದ್ರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಅಂಗಡಿ ಮಾಲೀಕರು ಸಹ ಗ್ರಾಹಕರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ನಗರ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 1 ಸಾವಿರ ರೂ. ಮತ್ತು ಗ್ರಾಮೀಣ ಭಾಗದಲ್ಲಿ 500 ರೂ. ದಂಡ ಹಾಕಲು ನಿರ್ಧರಿಸಲಾಗಿದೆ ಎಂದರು.

mask 3

 

ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಲಿದೆ ಎಂದು ಕೇರಳ ಸಿಎಂ ಹೇಳಿದ್ದಾರೆ. ನಮ್ಮಲ್ಲೂ ಅಂತಹ ಪರಿಸ್ಥಿತಿ ಬರುವುದು ಬೇಡ. ಮಾಸ್ಕ್, ಸಾಮಾಜಿಕ ಅಂತರ ಮತ್ತು ಪದೇ ಪದೇ ಕೈ ತೊಳೆದುಕೊಳ್ಳುವುದು ನಮ್ಮ ಬಳಿ ಸದ್ಯಕ್ಕೆ ಇರುವ ಮೂರು ಲಸಿಕೆ. ಆ ಮೂರನ್ನು ನಾವು ಬಳಸಿಕೊಳ್ಳಬೇಕು. ಒಟ್ಡು 15 ಜಿಲ್ಲೆಯಲ್ಲಿ ಕಳೆದ 15 ದಿನದಲ್ಲಿ ಶೇ.10 ರಷ್ಟು ಕೋವಿಡ್ ಪ್ರಮಾಣ ಹೆಚ್ಚಳವಾಗಿದೆ. ರಾಜ್ಯದಲ್ಲಿ 73,599 ಬೆಡ್ ಗಳ ವ್ಯವಸ್ಥೆ ಇದೆ. ಇವುಗಳಲ್ಲಿ 11,892 ಐಸಿಯು ಮತ್ತು 2,715 ವೆಂಟಿಲೇಟರ್ ಬೆಡ್ ಗಳಿವೆ. ನನ್ನ ಆರೋಗ್ಯ ನನ್ನ ಹೊಣೆ ಅನ್ನೋ ತೀರ್ಮಾನಕ್ಕೆ ಜನ ಬಂದರೆ ಒಳ್ಳೆಯದು ಎಂದು ಸಚಿವರು ತಿಳಿಸಿದರು.

covid 19

ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಹೊಸ ನಿಯಮಗಳು:
* ಮದುವೆ ಸಮಾರಂಭದಲ್ಲಿ ಗರಿಷ್ಠ 50 ಜನಕ್ಕೆ ಮಾತ್ರ ಅವಕಾಶ
* ಸರ್ಕಾರಿ ಕಚೇರಿಗಳಲ್ಲಿ ಮಾಸ್ಕ್ ಕಡ್ಡಾಯ. (ಮಾಸ್ಕ್ ಇಲ್ಲದಿದ್ರೆ ನೋ ಎಂಟ್ರಿ)
* ಒಂದು ದಿನಕ್ಕೆ ಕನಿಷ್ಠ 1 ಲಕ್ಷ ಕೊರೊನಾ ಟೆಸ್ಟ್
* ಸಾರಿಗೆ ವ್ಯವಸ್ಥೆಯಲ್ಲಿ ಶೇ.50 ಮಾತ್ರ ಸಂಚಾರಕ್ಕೆ ಅವಕಾಶ
* ಸಾರಿಗೆ ವಾಹನಗಳಲ್ಲಿ ಎಲ್ಲರಿಗೂ ಮಾಸ್ಕ್ ಕಡ್ಡಾಯ
* ಸಾರ್ವಜನಿಕವಾಗಿ 5 ಜನರಿಗಿಂತ ಹೆಚ್ಚು ಜನ ಸೇರದಂತೆ ಕ್ರಮ

TAGGED:Corona VirusCovid 19kannada newskarnatakaMaskPublic TVSudhakarಕರ್ನಾಟಕಕೆ.ಸುಧಾಕರ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
47 minutes ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
20 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
20 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
21 hours ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
6 seconds ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
10 minutes ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
56 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
1 hour ago
2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?