ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣನವರು ರಾಯಚೂರು ಜಿಲ್ಲಾ ಪಂಚಾಯತಿ ಸಿಇಓ ಹಾಗೂ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಗರದ ಕೃಷಿ ವಿವಿ ಆವರಣದಲ್ಲಿ ನಡೆದಿದೆ.
ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆಯ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಹಿತಿ ಇಲ್ಲದೆ, ಅಧಿಕಾರಿಗಳು ಬಂದಿದ್ದರಿಂದ ಸಚಿವ ಸೋಮಣ್ಣ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದುವರೆಗೂ ಮಂಜೂರು ಮಾಡಿದ ವಾಹನಗಳ ಸಂಖ್ಯೆ ಹಾಗೂ ತಗುಲಿದ ವೆಚ್ಚದ ಬಗ್ಗೆಯೂ ಮಾಹಿತಿ ಇಲ್ಲದೇ ಅಧಿಕಾರಿಗಳು ಬಂದಿದ್ದರು. ಹೀಗಾದರೆ ನನ್ನದೇ ಸ್ಟೈಲ್ ನಲ್ಲಿ ಮಾತನಾಡಬೇಕಾಗುತ್ತದೆ ಹುಷಾರ್ ಎಂದು ಕಿಡಿಕಾರಿದ್ದಾರೆ.
ಸೋಮಣ್ಣನವರು ಕ್ಲಾಸ್ ತೆಗೆದುಕೊಳ್ಳುತ್ತಿದ್ದಂತೆ ಅಧಿಕಾರಿಗಳು ತಬ್ಬಿಬ್ಬಾದರು. ಕಾರ್ಯಕ್ರಮದಲ್ಲಿ 35 ವಾಹನಗಳನ್ನು ಲೋಕಾರ್ಪಣೆ ಮಾಡಲಾಯಿತು. ಇಷ್ಟು ದೊಡ್ಡ ಕಾರ್ಯಕ್ರಮಕ್ಕೆ ಬರುವಾಗ ಕನಿಷ್ಠ ಮಾಹಿತಿ ಇಲ್ಲದೆ, ಬರುವುದು ನಿಮ್ಮ ಆಡಳಿತದ ರೀತಿ ತೋರಿಸುತ್ತದೆ. ಜಿಲ್ಲೆಯಲ್ಲಿ ಮೊದಲು ಆಡಳಿತ ವ್ಯವಸ್ಥೆ ಸರಿಮಾಡಬೇಕಿದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಮುಂದೊಂದು ದಿನ ನರೇಂದ್ರ ಮೋದಿ ಸ್ಟೇಡಿಯಂಗೆ ಅಮಿತಾ ಶಾ ಪುತ್ರನ ಹೆಸರಿಡಬಹುದು: ಟಿಎಂಸಿ ಸಂಸದ